ಚಿಕ್ಕಮಗಳೂರು | ಅಕ್ರಮ ಮದ್ಯಕ್ಕೆ ನಾಲ್ಕನೇ ಬಲಿ; ರಸ್ತೆಯಲ್ಲಿ ಶವವಿಟ್ಟು ಪ್ರತಿಭಟಿಸಿದ ಗ್ರಾಮಸ್ಥರು

Date:

  • ಅಧಿಕಾರಿಗಳು ಗ್ರಾಮಕ್ಕೆ ಬಂದು ಅಕ್ರಮ ಮದ್ಯ ಮಾರಾಟ ತಡೆಯುವಂತೆ ಆಗ್ರಹ
  • ಮದ್ಯ ಸೇವನೆಯಿಂದ ಇದೇ ಗ್ರಾಮದ ಮೂವರು ಯುವಕರು ಹಿಂದೆ ಮೃತಪಟ್ಟಿದ್ದರು

ಗ್ರಾಮೀಣ ಭಾಗದಲ್ಲಿ ಅಕ್ರಮ ಮದ್ಯ ಮಾರಾಟ ಮಿತಿಮೀರಿದ್ದು, ಇದರಿಂದಾಗಿ ಅನೇಕ ಕುಟುಂಬಗಳು ಬೀದಿ ಬೀಳುತ್ತಿವೆ. ಗ್ರಾಮಗಳಲ್ಲಿಯೇ ಸುಲಭವಾಗಿ ಮದ್ಯ ಸಿಗುವುದರಿಂದ ಕುಡಿತದ ಚಟಕ್ಕೆ ಅನೇಕರು ತಮ್ಮ ಬದುಕು ಕಳೆದುಕೊಳ್ಳುತ್ತಿದ್ದಾರೆ.

- Advertisement -

ಕುಡಿತದ ಚಟಕ್ಕೆ ಪ್ರಾಣವನ್ನೇ ಕಳೆದುಕೊಂಡ ಒಂದು ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಹಗಲಗಂಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೆಗೂರು ಗ್ರಾಮ ಕಿತ್ಲೆಗೊಳಿ ಸೈಟ್ ನಲ್ಲಿ ನಡೆದಿದೆ. ಇಲ್ಲಿನ ನಿವಾಸಿ ಆದಿವಾಸಿ ಸಮುದಾಯದ ಕೂಲಿ ಕಾರ್ಮಿಕ ಪುಟ್ಟೇಗೌಡ ವಿಪರೀತ ಮದ್ಯ ಸೇವಿಸಿ ಮೃತಪಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಪುಟ್ಟೇಗೌಡ ಅವರ ಪತ್ನಿ ಮಂಗಳವಾರ ಕಾಫಿ ತೋಟಕ್ಕೆ ಕೂಲಿ ಕೆಲಸಕ್ಕೆ ತೆರಳಿದ್ದರು. ಸಂಜೆ 3 ಗಂಟೆ ಸಮಾರಿಗೆ ಮನೆಗೆ ಹಿಂತಿರುಗಿ ಬಂದು ನೋಡಿದಾಗ ಪುಟ್ಟೇಗೌಡ ನಿಧನರಾಗಿರುವುದು ಗೊತ್ತಾಗಿದೆ.

ಬಳಿಕ ಬುಧವಾರ ಗ್ರಾಮಸ್ಥರು ಪುಟ್ಟೇಗೌಡ ಅವರ ಶವವನ್ನು ರಸ್ತೆಯಲ್ಲಿಯೇ ಇಟ್ಟು ಪ್ರತಿಭಟನೆ ನಡೆಸಿದರು. “ಸ್ಥಳಕ್ಕೆ ಅಬಕಾರಿ ಇಲಾಖೆ ಅಧಿಕಾರಿಗಳು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಆಗಮಿಸಿ, ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಗ್ರಾಮದಲ್ಲಿ ಮದ್ಯ ಮಾರಾಟ ನಿಲ್ಲಿಸಬೇಕು. ಅಲ್ಲಿಯ ವರೆಗೂ ಶವ ತೆಗೆಯುವುದಿಲ್ಲ” ಎಂದು ಗ್ರಾಮಸ್ಥರು ಪಟ್ಟು ಹಿಡಿದರು.

“ಗ್ರಾಮದಲ್ಲಿ ಹಲವು ತಿಂಗಳಿನಿಂದ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ. ಅಕ್ರಮವಾಗಿ ಮದ್ಯ ಮಾರಾಟ ಮಾಡುವ ಮೊದಲು 15 ಕಿ.ಮೀ ದೂರ ಹೋಗಿ ಮದ್ಯ ಸೇವಿಸಬೇಕಿತ್ತು. ಗ್ರಾಮದಿಂದ ದೂರ ಇದ್ದಿದ್ದರಿಂದ ಯಾರೂ ನಿತ್ಯ ಮದ್ಯ ಸೇವಿಸುತ್ತಿರಲಿಲ್ಲ. ಆದರೆ, ಈಗ ಗ್ರಾಮದಲ್ಲಿಯೇ ಸುಲಭವಾಗಿ ಮದ್ಯ ಸಿಗುವುದರಿಂದ ನಿತ್ಯ ಹಗಲಿನಲ್ಲಿಯೇ ಕುಡಿಯುವರ ಸಂಖ್ಯೆ ಹೆಚ್ಚಾಗಿದೆ” ಎಂದು ಗ್ರಾಮಸ್ಥರು ತಮ್ಮ ಅಳಲು ತೋಡಿಕೊಂಡರು.

ವಿಪರೀತವಾಗಿ ಮದ್ಯ ಸೇವನೆಯಿಂದ ಗ್ರಾಮದ ಮೂರು ಮಂದಿ ಮಧ್ಯಮ ವಯಸ್ಸಿನವರು ಮೃತಪಟ್ಟಿದ್ದಾರೆ. ಈ ಸಮಸ್ಯೆ ಬಗ್ಗೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದರು.

ಅಕ್ರಮವಾಗಿ ಮದ್ಯ ಮಾರಾಟ ಮಾಡುವುದನ್ನು ನಿಲ್ಲಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕೆಂದು ಆದಿವಾಸಿ ಬುಡಕಟ್ಟು ಸಮುದಾಯದವರು, ಗ್ರಾಮಸ್ಥರು ಮತ್ತು ಪ್ರಗತಿಪರ ಸಂಘಟನೆಗಳ ವತಿಯಿಂದ ಪ್ರತಿಭಟನೆ ನಡೆಸಲಾಯಿತು ಎಂದು ‘ಕರ್ನಾಟಕ ಜನಶಕ್ತಿ’ಯ ವೆಂಕಟೇಶ್, ರಾಧಾ ಹಾಗೂ ವಾಲ್ಮೀಕಿ ಸಂಘಟನೆಯ ಶ್ರೀನಿವಾಸ್ ‘ಈದಿನ.ಕಾಮ್’ಗೆ ತಿಳಿಸಿದ್ದಾರೆ.

(ಮಾಸ್ ಮೀಡಿಯಾ ಹಾಸನ, ಚಿಕ್ಕಮಗಳೂರು ಜಿಲ್ಲಾ ಸಂಯೋಜಕಿ ಗಿರಿಜಾ ಎಸ್ ಜಿ ಮಾಹಿತಿ ಆಧರಿಸಿದ ವರದಿ)

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...

ಉಡುಪಿ | ಮಲ್ಪೆ–ತೀರ್ಥಹಳ್ಳಿ ಹೆದ್ದಾರಿ ಕಾಮಗಾರಿ ಅಂತಿಮ ಹಂತ; ಬಾಕಿ ಭೂಸ್ವಾಧೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ರಾಷ್ಟ್ರೀಯ ಹೆದ್ದಾರಿ 169ಎರ ಮಲ್ಪೆ–ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು...