ಖರ್ಗೆ ವಿರುದ್ಧ ಅಂದು ತೊಡೆ ತಟ್ಟಿದ್ದ ಚಿಂಚನಸೂರ್; ಇಂದು ಅವರನ್ನೇ ಅಪ್ಪ ಎಂದರು

Date:

Advertisements
  • ‘ಚಿತ್ತಾಪುರದಲ್ಲಿ ಬಿಜೆಪಿ ಹೇಳ ಹೆಸರಿಲ್ಲದಂತಾಗಲಿದೆ’
  • ನಾನು ಡಿ ಕೆ ಶಿವಕುಮಾರ್ ಋಣ ತೀರಿಸಬೇಕಾಗಿದೆ

ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಅವರು ಬಿಜೆಪಿ ತೊರೆದು ಬುಧವಾರ ಮತ್ತೆ ತಮ್ಮ ಮಾತೃ ಪಕ್ಷ ಕಾಂಗ್ರೆಸ್‌ಗೆ ಮರಳಿದ್ದಾರೆ. ಕಾಂಗ್ರೆಸ್ ಸೇರ್ಪಡೆ ಸಂದರ್ಭದಲ್ಲಿ ಮಾತನಾಡಿರುವ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಹಾಡಿ ಹೊಗಳಿಸಿದ್ದಾರೆ.

ಬಾಬುರಾವ್ ಚಿಂಚನಸೂರ್ ಅವರು ತಲಾ ಎರಡು ಬಾರಿ ಚಿತ್ತಾಪುರ ಮತ್ತು ಗುರುಮಠಕಲ್ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದವರು. 2018ರ ವಿಧಾನಸಭಾ ಚುನಾವಣಾ ಸೋಲಿನ ಬಳಿಕ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಬಂಡಾಯ ಸಾರಿ ಬಿಜೆಪಿಗೆ ಸೇರ್ಪಡೆಯಾಗಿದ್ದರು. 2019ರ ಲೋಕಸಭಾ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸುವ ನಿಟ್ಟಿನಲ್ಲಿ ಸಾಕಷ್ಟು ಪ್ರಯತ್ನ ಮಾಡಿದವರು ಚಿಂಚನಸೂರ್. 

ಬಾಬುರಾವ್ ಚಿಂಚನಸೂರ್ ಅವರು ಮಲ್ಲಿಕಾರ್ಜುನ ಖರ್ಗೆ ಅವರನ್ನು ಶತಾಗತಾಯ ಸೋಲಿಸಲೇ ಬೇಕೆಂದು ಕಾಂಗ್ರೆಸ್ ನಾಯಕ ಉಮೇಶ್ ಜಾದವ್ ಅವರನ್ನು ಸಹ ಬಿಜೆಪಿಗೆ ಕರೆ ತರುವಲ್ಲಿ ಮಹತ್ವದ ಪಾತ್ರ ನಿರ್ವಹಿಸಿದ್ದರು. ಇದರ ಪರಿಣಾಮ ಮಲ್ಲಿಕಾರ್ಜುನ ಖರ್ಗೆ ಅವರು ಕಳೆದ ಲೋಕಸಭಾ ಚುನಾವಣೆಯಲ್ಲಿ ಉಮೇಶ್ ಜಾದವ್ ವಿರುದ್ಧ ತಮ್ಮ ರಾಜಕೀಯ ಜೀವನದ ಮೊದಲ ಸೋಲು ಅನುಭವಿಸಿದ್ದರು.

Advertisements

ಲೋಕಸಭಾ ಚುನಾವಣೆಗೂ ಮೊದಲು ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಿಯೇ ಸಿದ್ಧ ಎಂದಿದ್ದ ಬಾಬುರಾವ್ ಚಿಂಚನಸೂರ್ ಕಳೆದ ತಿಂಗಳಷ್ಟೇ ಪ್ರಿಯಾಂಕ್ ಖರ್ಗೆ ಅವರನ್ನು ಚಿತ್ತಾಪುರ ಕ್ಷೇತ್ರದಲ್ಲಿ ಸೋಲಿಸುವುದಾಗಿ ತೊಡೆ ತಟ್ಟಿದ್ದರು.  ಆದರೆ, ಬಾಬುರಾವ್ ಚಿಂಚನಸೂರ್ ಅವರಿಗೆ ಬಿಜೆಪಿ ಟಿಕೆಟ್ ಕೊಡಲು ನಿರಾಕರಿಸಿದ ಕಾರಣ ಕಮಲ ಪಡೆ ಬಿಟ್ಟು ಮತ್ತೆ ಕೈ ಹಿಡಿದಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ತಮ್ಮ ಹಳೆಯ ಮಾತುಗಳಿಗೆ ತಿರುಗೇಟು ಎಂಬಂತೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಹಾಡಿಹೊಗಳಿದ್ದಾರೆ.

“ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಷ್ಟ್ರೀಯ ನಾಯಕರಾಗಿ ಬೆಳೆದಿದ್ದಾರೆ. ಡಿ ಕೆ ಶಿವಕುಮಾರ್‌ ಅವರು ಎಸ್ ಎಂ ಕೃಷ್ಣ ಸರ್ಕಾರದಲ್ಲಿ ನನಗೆ ಏಳು ಖಾತೆ ಕೊಡಿಸಿದ ಧೀಮಂತ ನಾಯಕ. ಏಳು ಜನ್ಮ ಬಂದರೂ ಶಿವಕುಮಾರ್ ಋಣ ತೀರಿಸಲು ಸಾಧ್ಯವಿಲ್ಲ. ಖರ್ಗೆ ನೇತೃತ್ವದಲ್ಲಿ ಹೈದರಾಬಾದ್ ಕರ್ನಾಟಕದಲ್ಲಿ ಜಯಭೇರಿ ಬಾರಿಸುತ್ತೇವೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಚಿತ್ತಾಪುರದಲ್ಲಿ ಕಾಂಗ್ರೆಸ್‌ ಅನ್ನು ಸೋಲಿಸುವ ಶಪಥ ಮಾಡಿದ್ದ ಚಿಂಚನಸೂರ್ ಇದೀಗ ಉಲ್ಟಾ ಹೊಡೆದು, “ಇಂದಿಗೆ ಬಿಜೆಪಿ ಮುಗಿದ ಅಧ್ಯಾಯ. ಚಿತ್ತಾಪುರದಲ್ಲಿ ಬಿಜೆಪಿ ಹೇಳ ಹೆಸರಿಲ್ಲದಂತಾಗಿದೆ. ನಾನು ಡಿ ಕೆ ಶಿವಕುಮಾರ್ ಬಗ್ಗೆ ಎಲ್ಲೂ ಚಕಾರ ಎತ್ತಿಲ್ಲ. ನಾನು ಶಿವಕುಮಾರ್ ಋಣ ತೀರಿಸಬೇಕಾಗಿದೆ. ನನಗೆ ಟಿಕೆಟ್ ನೀಡುವುದು ಕಾಂಗ್ರೆಸ್ ಹೈಕಮಾಂಡ್‌ಗೆ ಬಿಟ್ಟ ವಿಚಾರ” ಎಂದು ಹೇಳಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಅವರ ಜೊತೆಗಿನ ಜಗಳದ ಕುರಿತು ಪ್ರತಿಕ್ರಿಯೆ ನೀಡಿದ ಅವರು, “ಮುಂದಿನ ದಿನಗಳಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನ ಪಡೆಯಲಿದೆ. ಮಲ್ಲಿಕಾರ್ಜುನ ಖರ್ಗೆ ಜೊತೆಗಿನ ಭಿನ್ನಾಭಿಪ್ರಾಯ ವಿಚಾರವಾಗಿ ನಮ್ಮದು ಮತ್ತು ಖರ್ಗೆ ನಡುವೆ ತಂದೆ ಮಗನ ಜಗಳ. ತಂದೆ ಮಕ್ಕಳ ಭಿನ್ನಾಭಿಪ್ರಾಯ ಈಗ ಮುಗಿದಿದೆ” ಎಂದು ಸಮಜಾಯಿಷಿ ನೀಡಿದ್ದಾರೆ.

bfe5ebf00de2b670976597f37a6d2b77?s=150&d=mp&r=g
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X