ಶಿಗ್ಗಾಂವಿ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಿಎಂ ಬಸವರಾಜ ಬೊಮ್ಮಾಯಿ

Date:

Advertisements
  • ಶಿಗ್ಗಾಂವಿ ತಹಶೀಲ್ದಾರ್ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ
  • ಸಿದ್ದಾರೂಢ ಮಠಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ ಸಿಎಂ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ತಮ್ಮ ನಾಮಪತ್ರ ಸಲ್ಲಿಸಿದರು.

ಶಿಗ್ಗಾಂವಿ ತಹಶೀಲ್ದಾರ್ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ ಸಿ ಎಂ ಬಸವರಾಜ ಬೊಮ್ಮಾಯಿಯವರಿಗೆ ಸಚಿವ ಸಿ ಸಿ ಪಾಟೀಲ್ ಸಂಸದ ಶಿವಕುಮಾರ್ ಉದಾಸಿ ಜೊತೆಯಾಗಿದ್ದರು.

ಉಮೇದುವಾರಿಕೆ ಸಲ್ಲಿಕೆಗೂ ಮುನ್ನ ಹುಬ್ಬಳ್ಳಿಯ ಸಿದ್ದಾರೂಢ ಮಠಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಂದು ಒಳ್ಳೆಯ ದಿನವಾಗಿರುವ ಕಾರಣ ನಾನು ನಾಮಪತ್ರ ಸಲ್ಲಿಸುವೆ, ಏಪ್ರಿಲ್ 19ರಂದು ಜನಸೇರಿಸಿ ಮತ್ತೊಮ್ಮೆ ಉಮೇದುವಾರಿಕೆ ಸಲ್ಲಿಸುವೆ ಎಂದರು.

Advertisements

ಇನ್ನು ಟಿಕೆಟ್ ಹಂಚಿಕೆ ವಿಚಾರವಾಗಿ ಮಾತನಾಡಿದ ಅವರು ಟಿಕೆಟ್ ಹಂಚಿಕೆ ಬಳಿಕೆ ಗೊಂದಲವಿರುವುದು ಸಹಜ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲಾಗುತ್ತಿದೆ. ಜಗದೀಶ್ ಶೆಟ್ಟರ್ ಮನವೊಲಿಸುವ ಕಾರ್ಯವೂ ನಡೆಯುತ್ತಿದೆ ಎಂದರು.ನಾಮಪತ್ರ

ನಾನು ಹಾಗೂ ಶೆಟ್ಟರ್ ಇಬ್ಬರೂ ಸ್ನೇಹಿತರು. ಜಗದೀಶ್ ಶೆಟ್ಟರ್ ಅವರನ್ನ ಉಳಿಸಿಕೊಳ್ಳುವ ಪ್ರಯತ್ನ ಆಗುತ್ತಿದೆ. ನಿನ್ನೆ ಧರ್ಮೇಂದ್ರ ಪ್ರಧಾನ್ ಜೊತೆ ಅವರು ಮಾತುಕತೆ ನಡೆಸಿದ್ದಾರೆ. ನಡ್ಡಾ ಅವರ ಜೊತೆ ನಾನೂ ಮಾತನಾಡಿದ್ದೇನೆ . ಜಗದೀಶ್‌ ಶೆಟ್ಟರ್‌ ಹಾಗೂ ನನ್ನದು ಪಕ್ಷಕ್ಕೆ ಬರುವುದಕ್ಕಿಂತಲೂ ಮುಂಚಿನ ಸಂಬಂಧ.

ಅವರಿಗೆ ಟಿಕೇಟ್‌ ತಪ್ಪಿಸುವಂತಹ ಕೆಲಸ ನಾನು ಮಾಡಿಲ್ಲ. ಬೇಕಿದ್ದರೆ ಅವರನ್ನೇ ಈ ವಿಚಾರದಲ್ಲಿ ಹೋಗಿ ಕೇಳಿ ಎಂದು ಬಸವರಾಜ ಬೊಮಾಯಿ ತಿಳಿಸಿದರು. ನಂತರ ಈ ವಿಚಾರದ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಿದ ಸಿಎಂ ಶೀಘ್ರವೇ ಎಲ್ಲವೂ ಸರಿಹೋಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? : ಕಲಬುರಗಿ | ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಕಾರು ಅಪಘಾತ; ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿದ ಬೊಮ್ಮಾಯಿ ನಮ್ಮ ಬಗ್ಗೆ ಮಾತನಾಡುವ ಮೊದಲು ಅವರ ಪಕ್ಷದ ವಿಚಾರಗಳ ಬಗ್ಗೆ ಅವರು ಗಮನ ಹರಿಸಲಿ. ಸಮಸ್ಯೆ ಇರುವುದೇ ಅವರಲ್ಲಿ. ಹೀಗಿರುವಾಗ ನಮ್ಮ ಬಗ್ಗೆ ಚಿಂತಿಸುವ ಅವಶ್ಯಕತೆ ಅವರಿಗಿಲ್ಲ ಎಂದರು.

ನನ್ನ ಸ್ಪರ್ಧೆ ವಿಚಾರದಲ್ಲಿ ಹಲವರಲ್ಲಿ ಹಲವು ಅಭಿಪ್ರಾಯಗಳಿವೆ. ಈ ಹಿಂದೆಯೂ ನಾನು ಸ್ಪರ್ಧಿಸಿದ್ದೆ, ಗೆದ್ದಿದ್ದೇನೆ. ಹೀಗಾಗಿ ಈಗಿನ ಟೀಕೆಗಳಿಗೆ ಗೆದ್ದ ಬಳಿಕ ಉತ್ತರ ನೀಡುವೆ ಎಂದು ಬೊಮ್ಮಾಯಿ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X