- ಮಾಜಿ ಡಿಸಿಎಂ ಸವದಿಯವರನ್ನು ಪಕ್ಷಕ್ಕೆ ಆಹ್ವಾನಿಸಿ ಬಿ ಕೆ ಹರಿಪ್ರಸಾದ್
- ಸಿದ್ಧಾಂತ ಒಪ್ಪಿ ಬರುವುದಾದರೆ ಸ್ವಾಗತ ಎಂದ ಪರಿಷತ್ ವಿಪಕ್ಷ ನಾಯಕ
ನಮ್ಮ ಸಿದ್ಧಾಂತ ಒಪ್ಪಿ ಬರುವುದಾದರೆ ಕಾಂಗ್ರೆಸ್ ಸೇರ್ಪಡೆಯಾಗಿ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಬಿ ಕೆ ಹರಿಪ್ರಸಾದ್ ಆಹ್ವಾನ ನೀಡಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ತಮ್ಮ ಅನಿಸಿಕೆ ಹಂಚಿಕೊಂಡಿರುವ ಹರಿಪ್ರಸಾದ್, ಲಕ್ಷ್ಮಣ್ ಸವದಿ ಹಿರಿಯ ಮುಖಂಡರು. ಡಿಸಿಎಂ ಹುದ್ದೆ ನಿಭಾಯಿಸಿದವರು. ಕಾಂಗ್ರಸ್ ಸಿದ್ಧಾಂತ ಒಪ್ಪಿ ಕಾಂಗ್ರೆಸ್ ಬರುವುದಾದರೆ ಬರಬಹುದು. ಕಾಂಗ್ರೆಸ್ ಗೆ ಸೇರ್ಪಡೆಯಾಗಬಹುದು ಎಂದು ಹೇಳಿದರು.
ಅಥಣಿ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಪಕ್ಷದ ಹೈಕಮಾಂಡ್ ವಿರುದ್ಧ ಲಕ್ಷ್ಮಣ್ ಸವದಿ ಆಕ್ರೋಶ ಹೊರಹಾಕಿದ್ದರು.
ಈ ಸುದ್ದಿ ಓದಿದ್ದೀರಾ?:ದೇವೇಗೌಡರ ʼಮಾನಸ ಪುತ್ರʼ ವೈ ಎಸ್ ವಿ ದತ್ತ…
ಹಾಗೆಯೇ ನಾಳೆ ಬಿಜೆಪಿಗೆ ರಾಜೀನಾಮೆ ನೀಡುವುದಾಗಿಯೂ ಘೋಷಣೆ ಮಾಡಿದ್ದರು. ಈ ಬೆಳವಣಿಗೆ ಈ ಬೆನ್ನಿನಲ್ಲಿ ಲಕ್ಷ್ಮಣ್ ಸವದಿಗೆ ಕಾಂಗ್ರೆಸ್ ಸೇರ್ಪಡೆಯಾಗುವಂತೆ ವಿಧಾನಪರಿಷತ್ ವಿ ಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಆಹ್ವಾನ ನೀಡಿದರು.