ಕಲಬುರಗಿ | ಮಣಿಕಂಠ ರಾಠೋಡ ವಿರುದ್ಧ ನಾಳೆ ‘ಡಿಜಿ’ಗೆ ದೂರು; ಪ್ರಿಯಾಂಕ್‌ ಖರ್ಗೆ

Date:

Advertisements
  • ಇದೇ ಪ್ರಕರಣ ಬಿಜೆಪಿಯವರಿಗೆ ಆಗಿದ್ದರೆ ಸ್ವಯಂ ದೂರು ದಾಖಲಾಗುತ್ತಿತ್ತು
  • ಬಿಜೆಪಿ ಅಭ್ಯರ್ಥಿ ಅಷ್ಟೊಂದು ಜಾಣನಲ್ಲ; ಬಿಜೆಪಿ, ಆರ್ ಎಸ್ ಎಸ್ ಇದರ ಕಿಂಗ್ ಪಿನ್

ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾಗಿರುವುದರಿಂದ ಕಾಂಗ್ರೆಸ್ ಕಾನೂನು ಘಟಕದೊಂದಿಗೆ ಚರ್ಚಿಸಿ ಮಣಿಕಂಠ ರಾಠೋಡ ವಿರುದ್ಧ ಕಾಂಗ್ರೆಸ್ ನಾಳೆ ಡಿಜಿ ಅವರಿಗೆ ದೂರು ನೀಡಲಿದೆ ಎಂದು ಚಿತ್ತಾಪುರ ಕಾಂಗ್ರೆಸ್‌ ಅಭ್ಯರ್ಥಿ ಮತ್ತು ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥ ಪ್ರಿಯಾಂಕ್‌ ಖರ್ಗೆ ಹೇಳಿದರು.

ಕಲಬುರಗಿ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, “ಖರ್ಗೆ ಮತ್ತು ಕುಟುಂಬವನ್ನು ಸಾಫ್ ಮಾಡುವುದಾಗಿ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ ಮಾತನಾಡಿದ್ದಾನೆ ಎನ್ನಲಾದ ಆಡಿಯೋ ಟೇಪ್ ಬಹಿರಂಗವಾಗಿದ್ದು, ಈ ಕುರಿತು ಈಗಾಗಲೇ ಸಂಘಟನೆ ಕಡೆಯಿಂದ ಒಂದು ದೂರು ದಾಖಲಾಗಿದೆ” ಎಂದು ತಿಳಿಸಿದರು.

“ಬಿಜೆಪಿ ಸೋಲುವ ಭೀತಿ ಎದುರಿಸುತ್ತಿದ್ದು, ಮೋದಿ ಅವರಿಂದ ಹಾಗೂ ಬೊಮ್ಮಾಯಿ ಅವರ ದುರಾಡಳಿತದಿಂದ ಜನರ ಗಮನ ಬೇರೆಡೆ ಸೆಳೆಯಲು ಇಂತಹ ತಂತ್ರಗಳನ್ನು ಮಾಡುತ್ತದೆ” ಎಂದು ಆರೋಪಿಸಿದರು.

Advertisements

“ಇದೇ ಪ್ರಕರಣ ಬಿಜೆಪಿಯವರಿಗೆ ಆಗಿದ್ದರೆ ಇಷ್ಟೊತ್ತಿಗೆ ಸ್ವಯಂ ದೂರು ದಾಖಲಾಗುತ್ತಿತ್ತು. ಆದರೆ, ಇಲ್ಲಿ ಕೊನೆ ಪಕ್ಷ ಅಪರಿಚಿತರ ಮೇಲಾದರೂ ದೂರು ದಾಖಲಾಗಬೇಕಿತ್ತು ಅದೂ ಆಗಿಲ್ಲ.  ಖರ್ಗೆ ಹಾಗೂ ಕುಟುಂಬವನ್ನು ಯಾಕೆ ಸಾಯಿಸಬೇಕು? ಎನ್ನುವುದಕ್ಕೆ ಬಿಜೆಪಿಗರು ಉತ್ತರ ಹೇಳಬೇಕು. ಇಎಸ್‌ಐ ಆಸ್ಪತ್ರೆ, ಕೇಂದ್ರಿಯ ವಿದ್ಯಾಲಯ ತಂದಿದ್ದಕ್ಕೆ ಸಾಯಿಸಬೇಕಾ” ಎಂದು ಪ್ರೆಶ್ನಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಸುಳ್ಳು ಆರೋಪ ಮಾಡಲು ಯಾರದ್ದೋ ಆಡಿಯೊ ಹಾಕಬೇಡಿ : ಮಣಿಕಂಠ ರಾಠೋಡ

“ಪಾಪ, ಬಿಜೆಪಿ ಅಭ್ಯರ್ಥಿ ಅಷ್ಟೊಂದು ಜಾಣನಲ್ಲ ಅವನು ಇನ್ನೂ ಅಕ್ಕಿ ಪಕ್ಕಿ ಲೆವೆಲ್ ನಲ್ಲಿಯೇ ಇದ್ದಾನೆ. ಇದರ ಹಿಂದಿನ ಕಿಂಗ್ ಪಿನ್ ಬಿಜೆಪಿ ಹಾಗೂ ಆರ್ ಎಸ್ ಎಸ್. ಅದರ ಉಸ್ತುವಾರಿಯನ್ನು ರವಿಕುಮಾರ್‌ಗೆ ವಹಿಸಲಾಗಿದೆ. ಪಾಪ ತಾನೇ ಅಭ್ಯರ್ಥಿ ಅಂದುಕೊಂಡ ರವಿಕುಮಾರ ಎಲ್ಲ ಕಡೆ ಓಡಾಡಿ ಸುಸ್ತಾಗಿದ್ದಾರೆ. ಅವರು ಜೇವರ್ಗಿ ಮತ್ತು ಚಿತ್ತಾಪುರದಲ್ಲಿ ಟಿಕೆಟ್ ಮಾರಿಕೊಂಡಿದ್ದಾರೆ ಎಂದು ಬಿಜೆಪಿಗರೇ ಮಾತನಾಡಿಕೊಳ್ಳುತ್ತಿದ್ದಾರೆ. ಮೊದಲು ಅದಕ್ಕೆ ಉತ್ತರಿಸಲಿ” ಎಂದರು.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ಶಾಸಕರು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X