ರಾಯಚೂರು | ಬಿಜೆಪಿ ಅಭ್ಯರ್ಥಿಯ ವಜಾಗೊಳಿಸಲು ಆಗ್ರಹ : ಚುನಾವಣಾಧಿಕಾರಿಗೆ ದೂರು

Date:

  • ವಜಾಗೊಳಿಸದಿದ್ದಲ್ಲಿ ಹೈಕೋರ್ಟ್‌ನಲ್ಲಿ ಕಾನೂನು ಹೋರಾಟ
  • ಶಿವರಾಜ ಪಾಟೀಲ ಅವರಿಂದ ಮತದಾರರಿಗೆ ಸುಳ್ಳು ಮಾಹಿತಿ ಆರೋಪ

ಮತದಾರರಿಗೆ ಸುಳ್ಳು ಮಾಹಿತಿ ನೀಡಿ ಅಧಿಕಾರ ದುರುಪಯೋಗ ಪಡಿಸಿಕೊಂಡ ರಾಯಚೂರು ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಶಿವರಾಜ ಪಾಟೀಲ ಅವರನ್ನು ಚುನಾವಣಾ ಕಣದಿಂದ ಕೂಡಲೇ ವಜಾಗೊಳಿಸಬೇಕು ಎಂದು ಪಕ್ಷೇತರ ಅಭ್ಯರ್ಥಿ ಡಾ. ಬಸವರಾಜ ಕಳಸ ಒತ್ತಾಯಿಸಿದರು.

- Advertisement -

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಚುನಾವಣಾ ಪ್ರಚಾರ ಮಾಡುತ್ತಿರುವ ಬಿಜೆಪಿ ಅಭ್ಯರ್ಥಿ ಡಾ. ಶಿವರಾಜ ಪಾಟೀಲರು ಮತದಾರರ ಬಳಿ ಹೋಗಿ ತಾವು ನಗರಸಭೆಯನ್ನು ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿಸಿದ್ದೇನೆ ಮತ್ತು ನಗರದಲ್ಲಿ ನಿರಂತರ ಕುಡಿಯುವ ನೀರು ಸರಬರಾಜು ಯೋಜನೆಯಡಿ 33,198 ಮನೆಗಳಿಗೆ ನಳ ಸಂಪರ್ಕ ನೀಡಿ ನೀರು ಸರಬರಾಜು ಮಾಡಿದ್ದೇನೆ ಎಂದು ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ಬಿಜೆಪಿಯ ನಗರ ಅಧ್ಯಕ್ಷ ಬಿ ಗೋವಿಂದ ಅವರು ಡಾ. ಶಿವರಾಜ ಪಾಟೀಲ ಪರ ಕರ ಪತ್ರ ಹಂಚಿದ್ದು ಇದರಲ್ಲಿಯೂ ರಾಯಚೂರು ನಗರಸಭೆಯನ್ನು ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೆ ಏರಿಸಲಾಗಿದೆ ಮತ್ತು 24/7 ಯೋಜನೆಯಡಿ 33,198 ಮನೆಗಳಿಗೆ ನೀರಿನ ಸೌಲಭ್ಯ ನೀಡಲಾಗಿದೆ ಎಂದು ಮುದ್ರಿಸಿದ ಕರಪತ್ರಗಳನ್ನು ನಗರದಲ್ಲಿ ಮನೆಮನೆಗೆ ತೆರಳಿ ಕಾರ್ಯಕರ್ತರು ಹಂಚಿದ್ದಾರೆ ಎಂದು ಹೇಳಿದರು.

ನಗರಸಭೆ ಮೇಲ್ದರ್ಜೆಗೆ ಏರಿಸಿದ ಬಗ್ಗೆ ಯಾವುದೇ ಗೆಝೆಟ್ ನೋಟಿಫಿಕೇಶನ್ ಇಲ್ಲದೇ ಸುಳ್ಳು ಮಾಹಿತಿ ನೀಡಿ ಮತದಾರರಿಗೆ ಮೋಸ ಮಾಡಿದ್ದಾರೆ. ಇದು ಪ್ರಜಾಪ್ರತಿನಿಧಿ ಕಾಯ್ದೆಯಡಿ ಅಪರಾಧವಾಗಿದೆ ಎಂದು ದೂರಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಜೆಟ್ ಮಂಡನೆ ವೇಳೆ ರಾಯಚೂರು ನಗರಸಭೆಯನ್ನು ಮಹಾನಗರ ಪಾಲಿಕೆ ಮಾಡಲು ಪ್ರಸ್ತಾವನೆ ಬಂದಿದೆ ಅದನ್ನು ಪರಿಶೀಲಿಸಲಾಗುವುದು ಎಂದಿದ್ದಾರೆ ಹೊರತು ಘೋಷಣೆ ಮಾಡಿಲ್ಲ. ಆದರೆ, ಶಾಸಕ ಡಾ. ಶಿವರಾಜ ಪಾಟೀಲ್ ಅಧಿಕೃತವಾಗಿ ಕರಪತ್ರವನ್ನು ಮುದ್ರಿಸಿ ರಾಯಚೂರು ನಗರಸಭೆಯನ್ನು ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೆ ಏರಿಸಲಾಗಿದೆ ಎಂದು ದಿಕ್ಕು ತಪ್ಪಿಸಿದ್ದಾರೆ ಎಂದು ಕಿಡಿಕಾರಿದರು.

ಈ ಸುದ್ದಿ ಓದಿದ್ದೀರಾ? ಮಲ್ಲಿಕಾರ್ಜುನ ಖರ್ಗೆಯ ಸಾವು ಬಯಸಿದ ಬಿಜೆಪಿ ನಾಯಕ; ಮೋದಿ ಕ್ಷಮೆಗೆ ಕಾಂಗ್ರೆಸ್ ಆಗ್ರಹ

ಈ ಬಗ್ಗೆ ವಿಡಿಯೋ, ಕರ ಪತ್ರ ಹಾಗೂ ಇತರೆ ದಾಖಲೆಗಳನ್ನು ಸಂಗ್ರಹಿಸಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾ ಅಧಿಕಾರಿಗೆ ದೂರು ನೀಡಲಾಗಿದ್ದು, ಚುನಾವಣಾ ಸ್ಪರ್ಧಾಕಣದಿಂದ ವಜಾಗೊಳಿಸಬೇಕು. ಅಧಿಕಾರಿಗಳು ನಿರ್ಲಕ್ಷಿಸಿದ್ದಲ್ಲಿ ಹೈಕೋರ್ಟ್ ಮೊರೆ ಹೋಗಿ ಕಾನೂನು ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಎನ್ ಮಹಾವೀರ, ಜಾನ್ ವೆಸ್ಲಿ, ಪ್ರಭುನಾಯಕ, ಬಸವರಾಜ, ತುಂಗಾ ಹಿರೇಮಠ, ವಿನಯಕುಮಾರ ಚಿತ್ರಗಾರ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಸ್ತೂರಿರಂಗನ್ ವರದಿ: ಸೆ.18ರಂದು ಹೆಬ್ರಿಯಲ್ಲಿ ಗ್ರಾಮಸ್ಥರೊಂದಿಗೆ ಸಿಎಂ ಡಿಕೆಶಿ ಸಂವಾದ

ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ಸಾಧಕ-ಬಾಧಕಗಳ ಕುರಿತು ಜಿಲ್ಲೆಯ ಗ್ರಾಮಸ್ಥರ ಅಭಿಪ್ರಾಯ ಹಾಗೂ...

ರಾಯಚೂರು | ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ: ಪಿಜೆ ಜೇಮ್ಸ್

ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ ಸ್ವರೂಪ ಹೊಂದಿದ್ದು, ಮುಸ್ಲಿಂ ವಿರೋಧಿ...

ಉಡುಪಿ | ಆಲೂರು ಕೊರಗರ ಭೂಮಿ ಸಮಸ್ಯೆ ಬಗೆಹರಿಸಲು ಕ್ರಮ: ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಭರವಸೆ

ಕುಂದಾಪುರ ತಾಲೂಕಿನ ಆಲೂರು ಮತ್ತು ಹರ್ಕೂರು ಗ್ರಾಮದ ಕೊರಗ ಕುಟುಂಬಗಳ ಭೂಮಿ...

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ: ಲೆಕ್ಕಾಚಾರವೇನು?

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು...