ಸರ್ಕಾರ ರಚನೆಗೆ ಕಾಂಗ್ರೆಸ್ ಕಸರತ್ತು;‌ ಇಂದು ಸಂಜೆ ಖಾಸಗಿ ಹೋಟೆಲ್‌ನಲ್ಲಿ ಸಭೆ

Date:

Advertisements

ರಾಜ್ಯ ವಿಧಾನಸಭೆ ಚುನಾವಣೆ ಅಖಾಡದಲ್ಲಿ ಕಾಂಗ್ರೆಸ್‌ ಗೆದ್ದು ಬೀಗಿದೆ. 135 ಸ್ಥಾನಗಳು ಕಾಂಗ್ರೆಸ್‌ಗೆ ಲಭಿಸಿದ್ದು, ಸರ್ಕಾರ ರಚನೆಗೆ ಕಸರತ್ತು ಆರಂಭವಾಗಿದೆ.

ಕಾಂಗ್ರೆಸ್​ ಗೆದ್ದ ಬೆನ್ನಲ್ಲೇ ಮುಂದಿನ ಮುಖ್ಯಮಂತ್ರಿ ಯಾರು ಎನ್ನುವ ಬಗ್ಗೆ ಚರ್ಚೆ ಈಗ ಗರಿಗೆದರಿದೆ. ಈ ಹಿನ್ನೆಲೆಯಲ್ಲಿ ಇಂದು (ಮೇ 14) ಸಂಜೆ 6ಕ್ಕೆ ವಸಂತನಗರದ ಶಾಂಗ್ರಿಲಾ ಹೋಟೆಲ್‌ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ.

ಈ ಸಭೆಯಲ್ಲಿ ನೂತನವಾಗಿ ಆಯ್ಕೆಯಾದ ಎಲ್ಲ ವಿಧಾನಸಭಾ ಸದಸ್ಯರು, ವಿಧಾನ ಪರಿಷತ್ ಸದಸ್ಯರು ಹಾಗೂ ಸಂಸದರು ತಪ್ಪದೇ ಭಾಗವಹಿಸಬೇಕು ಎಂದು ಕೆಪಿಸಿಸಿ ಈಗಾಗಲೇ ಸೂಚಿಸಿದೆ.

Advertisements

ಈ ಸಭೆಯಲ್ಲಿ ವೀಕ್ಷಕರ ಸಮ್ಮುಖದಲ್ಲಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ನಡೆಯಲಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಮುಖ್ಯಮಂತ್ರಿ ರೇಸ್‌ನಲ್ಲಿದ್ದಾರೆ.

ಮೇ 15ರಂದು ಪ್ರಮಾಣ ವಚನ

ಇಂದಿನ ಸಿಎಲ್‌ಪಿ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ನಡೆಯಲಿದೆ. ಆಯ್ಕೆಯಾದ ಮುಖ್ಯಮಂತ್ರಿ ಮೇ 15ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ.

ಚುನಾವಣಾ ಪೂರ್ವದಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಹಾಗೂ ಸಿದ್ದರಾಮಯ್ಯ ಅವರ ನಡುವೆ ಮುಖ್ಯಮಂತ್ರಿ ಹುದ್ದೆಗೆ ಭಾರೀ ಪೈಪೋಟಿ ನಡೆದಿತ್ತು. ಇಬ್ಬರನ್ನು ಸಮಾಧಾನಿಸಿ ಒಗ್ಗಟ್ಟಿನಿಂದ ಚುನಾವಣೆ ಎದುರಿಸುವಂತೆ ಮಾಡುವಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ ಯಶಸ್ವಿಯಾಗಿತ್ತು. ಇಂದಿನ ಸಭೆಯಲ್ಲಿ ಸಿದ್ದರಾಮಯ್ಯ ಅವರು ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾಗುವ ಸಾಧ್ಯತೆ ಹೆಚ್ಚಿದೆ.

ಶಾಸಕಾಂಗ ಪಕ್ಷದ ಆಯ್ಕೆಯ ಜೊತೆಗೆ ಮೂರು ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಸಿ, ಲಿಂಗಾಯತ ಸಮುದಾಯದಿಂದ ಎಂ ಬಿ ಪಾಟೀಲ, ದಲಿತ ಸಮುದಾಯದಿಂದ ಜಿ ಪರಮೇಶ್ವರ ಅಥವಾ ಕೆ ಎಚ್‌ ಮುನಿಯಪ್ಪ ಹಾಗೂ ಒಕ್ಕಲಿಗ ಸಮುದಾಯದಿಂದ ಡಿ ಕೆ ಶಿವಕುಮಾರ್‌ ಅವರಿಗೆ ನೀಡುವ ಬಗ್ಗೆ ಹೈಕಮಾಂಡ್‌ ಆಸಕ್ತಿ ತೋರಿದೆ ಎನ್ನಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

Download Eedina App Android / iOS

X