ಚುನಾವಣೆ 2023 | ಕಾಂಗ್ರೆಸ್ ನಾಯಕ ಮನೋಹರ್ ತಹಶೀಲ್ದಾರ್‌ ಏ. 7ಕ್ಕೆ ಜೆಡಿಎಸ್‌ ಸೇರ್ಪಡೆ

Date:

Advertisements
  • ಕಾಂಗ್ರೆಸ್ ಪಕ್ಷ ದ್ರೋಹ ಬಗೆದಿದೆ ಎಂದ ಮನೋಹರ್
  • ಪಂಚರತ್ನ ರಥಯಾತ್ರೆ ವೇಳೆ ಜೆಡಿಎಸ್‌ ಸೇರ್ಪಡೆ

ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಪಕ್ಷಾಂತರ ಪರ್ವ ಜೋರಾಗಿದೆ. ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ಅವರು ಕಾಂಗ್ರೆಸ್ ತೊರೆದು ಜೆಡಿಎಸ್‌ ಸೇರುವುದಾಗಿ ಘೋಷಿಸಿದ್ದಾರೆ.

ಹಾನಗಲ್‌ನಲ್ಲಿ ನಡೆದ ಬೆಂಬಲಿಗರ ಸಭೆಯಲ್ಲಿ ಹಿರಿಯ ನಾಯಕ ಮನೋಹರ್ ತಹಶೀಲ್ದಾರ್ ಅಧಿಕೃತ ಘೋಷಣೆ ಮಾಡಿದ್ದಾರೆ. ಏಪ್ರಿಲ್‌ 7ರಂದು ಜೆಡಿಎಸ್‌ನ ಮಹತ್ವಾಕಾಂಕ್ಷೆಯ ಪಂಚರತ್ನ ರಥಯಾತ್ರೆಯ ವೇಳೆ ಪಕ್ಷ ಸೇರ್ಪಡೆಯಾಗಲಿದ್ದಾರೆ.

ಕಾಂಗ್ರೆಸ್ ತೊರೆಯುತ್ತಿರುವ ಕುರಿತು ಮಾತನಾಡಿದ ಅವರು, “ಕಾಂಗ್ರೆಸ್‌ ನನಗೆ ದ್ರೋಹ ಬಗೆಗಿದೆ. ಆದ್ದರಿಂದಲೇ ನಾನು ಈ ನಿರ್ಧಾರಕ್ಕೆ ಬಂದಿರುವೆ” ಎಂದು ಹೇಳಿದ್ದಾರೆ.

Advertisements

“ಐದು ದಶಕಗಳ ಕಾಲ ನಾನು ಕಾಂಗ್ರೆಸ್‌ನಲ್ಲಿದ್ದೆ. ಶಾಸಕನಾಗಿ, ಸಚಿವನಾಗಿ ಮತ್ತು ವಿಧಾನಸಭೆಯ ಉಪಸಭಾಪತಿಯಾಗಿ ಕೆಲಸ ಮಾಡಿದ್ದೇನೆ. ಆದರೂ ಪಕ್ಷ ನನಗೆ ದ್ರೋಹ ಬಗೆದಿದೆ. ಮತ್ತೆಂದೂ ನಾನು ಕಾಂಗ್ರೆಸ್ ಕಡೆ ತಲೆ ಹಾಕುವುದಿಲ್ಲ” ಎಂದು ಹರಿಹಾಯ್ದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕೋಲಾರ | ಹಿಟ್ಲರ್‌, ಮುಸಲೋನಿ ನಾಯಕತ್ವ ಒಪ್ಪಿಕೊಂಡವರು ದೇಶ ನಡೆಸುತ್ತಿದ್ದಾರೆ: ಸಿದ್ದರಾಮಯ್ಯ

“ಈ ಬಾರಿ ನನಗೆ ಹಾನಗಲ್‌ನಿಂದ ಟಿಕೆಟ್ ನೀಡುವಂತೆ ದೆಹಲಿಯವರೆಗೂ ಹೋಗಿ ಮನವಿ ಮಾಡಿದೆ. ಆದರೆ, ಶ್ರೀನಿವಾಸ ಮಾನೆ ಅವರಿಗೆ ಟಿಕೆಟ್‌ ಘೋಷಣೆಯಾಗಿದೆ. ಸೌಜನ್ಯಕ್ಕಾದರೂ ಕಾಂಗ್ರೆಸ್ ನಾಯಕರು ನನ್ನ ಸಂಪರ್ಕ ಮಾಡಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಕಳೆದ 50 ವರ್ಷಗಳಿಂದ ಕಾಂಗ್ರೆಸ್ ಪಕ್ಷ ನನಗೆ ತಾಯಿಯಾಗಿತ್ತು, ಪಕ್ಷವನ್ನು ತಾಯಿಯಂತೆ ನೋಡಿಕೊಂಡ ನನಗೆ ತಾಯಿಯ ಹಾಲು ವಿಷವಾಗಿ ಪರಿಣಮಿಸಿದೆ” ಎಂದಿದ್ದಾರೆ.

ಹಾನಗಲ್ ಕಾಂಗ್ರೆಸ್​​ ಟಿಕೆಟ್ ಆಕಾಂಕ್ಷಿಯಾಗಿದ್ದ ಮನೋಹರ್​​ ತಹಶೀಲ್ದಾರ್​​ ದೆಹಲಿ ನಾಯಕರನ್ನು ಭೇಟಿಯಾಗಿ ಟಿಕೆಟ್​ಗಾಗಿ ಲಾಭಿ ನಡೆಸಿದ್ದರು.

ಮನೋಹರ್ ತಹಶೀಲ್ದಾರ್ ಅವರು 1978 ರಿಂದ 2013ರವರೆಗಿನ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಹಾನಗಲ್‌ ಕ್ಷೇತ್ರದಿಂದಲೇ ಸ್ಪರ್ಧಿಸಿದ್ದಾರೆ. 1978, 1989, 1999 ಮತ್ತು 2013ರಲ್ಲಿ ಶಾಸಕಾಗಿ ಆಯ್ಕೆಯಾಗಿದ್ದರು.

ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಮನೋಹರ್‌ ತಹಶೀಲ್ದಾರ್ ಅವರು ಅಬಕಾರಿ ಮತ್ತು ಮುಜರಾಯಿ ಇಲಾಖೆ ಸಚಿವರಾಗಿ ಸೇವೆ ಸಲ್ಲಿಸಿದ್ದರು.

ಇನ್ನೂ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್‌ನ ಅಭ್ಯರ್ಥಿಗಳ ಪೂರ್ಣ ಪ್ರಮಾಣದ ಪಟ್ಟಿ ಬಿಡುಗಡೆಯಾಗಿಲ್ಲ. ಪಟ್ಟಿ ಬಿಡುಗಡೆ ನಂತರ ಮತ್ತಷ್ಟು ಮುಖಂಡರು ತಮ್ಮ ಪಕ್ಷಗಳನ್ನು ತೊರೆಯುವ ಸಾಧ್ಯತೆ ಹೆಚ್ಚಿವೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X