ಬೀದರ್ | ಅಂಬೇಡ್ಕರರನ್ನು ಸಂವಿಧಾನ ರಚನಾ ಸಮಿತಿ ಅಧ್ಯಕ್ಷರಾಗಿ ಮಾಡಿದ್ದೇ ಕಾಂಗ್ರೆಸ್: ಮಲ್ಲಿಕಾರ್ಜುನ ಖರ್ಗೆ

Date:

  • ಆರ್‌ಎಸ್‌ಎಸ್‌, ಬಿಜೆಪಿ ಕಚೇರಿಯಲ್ಲಿ ಅಂಬೇಡ್ಕರ್ ಫೋಟೊ ಇಡುವುದಿಲ್ಲ
  • ಅಂಬೇಡ್ಕರ್ ತತ್ವ ಆದರ್ಶ ಬಿಜೆಪಿಗೆ ಗೊತ್ತಿಲ್ಲ, ನಮಗೆ ಹೇಳಲು ಹೊರಟಿದೆ

ಕಾಂಗ್ರೆಸ್ಸಿನವರು ಅಂಬೇಡ್ಕರ್ ಅವರಿಗೂ ಅವಮಾನ ಮಾಡಿದ್ದಾರೆ ಎಂದು ಮೋದಿ ಹೋದಲ್ಲೆಲ್ಲಾ ಹೇಳುತ್ತಿದ್ದಾರೆ. ಅಂಬೇಡ್ಕರ್ ಅವರ ಬುದ್ಧಿವಂತಿಕೆ ನೋಡಿ ಜವಹರಲಾಲ್ ನೆಹರು, ಮಹಾತ್ಮಗಾಂಧಿ, ಅಂಬೇಡ್ಕರ್ ಅವರನ್ನು ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರನ್ನಾಗಿ ಮಾಡಿದ್ದರು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಭಾಲ್ಕಿ ಪಟ್ಟಣದಲ್ಲಿ ಮಂಗಳವಾರ ಆಯೋಜಿಸಿದ್ದ ಕಾಂಗ್ರೆಸ್ ಬಹಿರಂಗ ಪ್ರಚಾರ ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಮಾತನಾಡಿದರು. “ಅಂಬೇಡ್ಕರರನ್ನು ಸಂವಿಧಾನ ರಚನಾ ಸಭೆಯ ಅಧ್ಯಕ್ಷರನ್ನಾಗಿ ಮಾಡಿದ ಸಮಯದಲ್ಲಿ ಜನಸಂಘ, ಬಿಜೆಪಿ ಇರಲಿಲ್ಲ.ಅಂಬೇಡ್ಕರ್‌ ಬರೆದ ಸಂವಿಧಾನವನ್ನು ಜನಸಂಘ, ಬಿಜೆಪಿಯವರು ಒಪ್ಪುತ್ತಿಲ್ಲ. ಈ ಪಕ್ಷಗಳ ನಾಯಕರು ಬರೆದ ಪುಸ್ತಕದಲ್ಲಿ ‘ಅಂಬೇಡ್ಕರ್ ಅವರ ಸಂವಿಧಾನ ಸರಿಯಿಲ್ಲ. ಮನುವಿನ ವಿಚಾರಗಳು ಸಂವಿಧಾನದಲ್ಲಿ ಇಲ್ಲ. ಹಾಗಾಗಿ, ಸಂವಿಧಾನ ಒಪ್ಪುವುದಿಲ್ಲ’ವೆಂದು ಹೇಳಿದ್ದರು” ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು.

“ಶೂದ್ರ ಸಮಾಜಕ್ಕೆ ಶಿಕ್ಷಣ ಕೊಡಬಾರದು ಎಂದು ಮನು ಹೇಳಿದ್ದರು. ಮನುಸ್ಮೃತಿಯಲ್ಲಿ ಹೆಣ್ಣುಮಕ್ಕಳಿಗೆ, ಶೂದ್ರರಿಗೆ ಸ್ವಾತಂತ್ರ್ಯವಿಲ್ಲ. ಮನುವಿನ ವಿಚಾರಗಳು ಬಿಜೆಪಿಯವರಿಗೆ ಬೇಕು. ಸಂವಿಧಾನದ ಆಶಯಗಳಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಬುದ್ಧ, ಬಸವ, ಅಂಬೇಡ್ಕರ್ ಫುಲೆ ಕಾಂಗ್ರೆಸ್ಸಿಗೆ ಆದರ್ಶ

“ಸಂವಿಧಾನವು ಜಾತಿ, ಮತ, ಪಂಥ ನೋಡದೆ ಎಲ್ಲರಿಗೂ ಸಮನಾದ ಹಕ್ಕು ನೀಡಿದೆ. ಅಂಬೇಡ್ಕರ್ ಬರೆದ ಸಂವಿಧಾನ ಶ್ರೇಷ್ಠ. ಬುದ್ಧ, ಬಸವಣ್ಣ, ಅಂಬೇಡ್ಕರ್, ಮಹಾತ್ಮ ಫುಲೆ ಅವರನ್ನು ಯಾರೂ ಮರೆಯಲು ಸಾಧ್ಯವಿಲ್ಲ. ಈ ಮಹಾತ್ಮರು ನಮ್ಮೆಲ್ಲರಿಗೆ ಮನುಷ್ಯರನ್ನಾಗಿ ಮಾಡಿ, ಮನುಷ್ಯರಂತೆ ಬಾಳಲು ಬದುಕಿನ ಮಂತ್ರ ನೀಡಿದವರು. ಇವರ ತತ್ವಗಳ ಮೇಲೆ ಕಾಂಗ್ರೆಸ್ ನಡೆದಿದೆ” ಎಂದು ತಿಳಿಸಿದರು.

“ಆರ್‌ಎಸ್‌ಎಸ್‌, ಬಿಜೆಪಿ ಕಚೇರಿಯಲ್ಲಿ ಅಂಬೇಡ್ಕರ್ ಫೋಟೊ ಇಡುವುದಿಲ್ಲ. ಕೇವಲ ಚುನಾವಣೆ ಬಂದಾಗ ಮಾತ್ರ ಫೋಟೊ ಇಡುತ್ತಾರೆ. ಬಿಜೆಪಿಯವರು ಕೇವಲ ಓಟಿಗಾಗಿ ಅಂಬೇಡ್ಕರ್ ಅವರಿಗೆ ನಮಸ್ಕರಿಸುತ್ತಾರೆ. ಅಂಬೇಡ್ಕರ್ ನಮ್ಮ ಭಾಗ್ಯದಾತಾ, ನಾವು ಅವರನ್ನು ತಂದೆಯಂತೆ ಪೂಜಿಸುತ್ತೇವೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಂಬೇಡ್ಕರ್ ಅವರ ಮೂರ್ತಿ, ಭಾವಚಿತ್ರಗಳು ಇವೆ. ಮೋದಿ, ಅಮಿತ್ ಶಾ ಅವರ ಕ್ಷೇತ್ರದಲ್ಲಿ ಇವೆಯಾ” ಎಂದು ಪ್ರಶ್ನಿಸಿದರು.

“ಅಂಬೇಡ್ಕರ್ ಅವರ ಆದರ್ಶ, ತತ್ವಗಳು ಬಿಜೆಪಿಗೆ ಗೊತ್ತಿಲ್ಲ. ಆದರೆ, ನಮಗೆ ಹೇಳಲು ಹೊರಟಿದ್ದಾರೆ. ನಿಮಗೆ ಓಟ್ ಬೇಕಾದರೆ ತೆಗೆದುಕೊಳ್ಳಿ. ಸುಳ್ಳು ಹೇಳಿ ತೆಗೆದುಕೊಳ್ಳಬೇಡಿ” ಎಂದು ಬಿಜೆಪಿಯವರಿಗೆ ತಿರುಗೇಟು ನೀಡಿದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಜನರ ಸಮಸ್ಯೆಗಳ ಬಗ್ಗೆ ಯೋಚಿಸುವ ಪ್ರಜ್ಞಾವಂತ ಅಭ್ಯರ್ಥಿಗಳೇ ಇಲ್ಲ : ಕೆ ಉಮಾ

ಕರ್ನಾಟಕದ ಭವಿಷ್ಯ ಬದಲಿಸುವ ಚುನಾವಣೆ

ಇದು ಕರ್ನಾಟಕದ ಭವಿಷ್ಯವನ್ನು ಬದಲಾಯಿಸುವ ಚುನಾವಣೆ ಆಗಿದೆ. ಬಿಜೆಪಿ ಸರ್ಕಾರದಲ್ಲಿ 40% ಕಮಿಷನ್ ಇಲ್ಲದೆ ಯಾವುದೇ ಕೆಲಸ ಆಗುವುದಿಲ್ಲ. ನನ್ನ ಅವಿರತ ಪ್ರಯತ್ನದಿಂದ ಅಸಾಧ್ಯವಾಗಿದ್ದ 371 ಜೆ ಸ್ಥಾನಮಾನವನ್ನು ಕಲ್ಯಾಣ ಕರ್ನಾಟಕಕ್ಕೆ ನೀಡಲಾಗಿದೆ. ಇಷ್ಟೆಲ್ಲಾ ಕೆಲಸ ಮಾಡಿದವರಿಗೆ ಓಟು ಕೊಡದೆ ಮೋದಿ ನೋಡಿ ಕೊಡುತ್ತೀರಿ ಎಂದರೆ ಏನು ಹೇಳಬೇಕು ಎಂದು ಜನರನ್ನು ಪ್ರಶ್ನಿಸಿದರು.

ಡಬಲ್ ಎಂಜಿನ್ ಸರ್ಕಾರದಿಂದ ಕರ್ನಾಟಕಕ್ಕೆ ಲಾಭ ಆಗಿಲ್ಲ. ಯಾವುದೇ ದೊಡ್ಡ ಕಾರ್ಖಾನೆ, ಉದ್ದಿಮೆ ಬರಲಿಲ್ಲ. ಉದ್ಯೋಗಗಳು ದೊರಕಲಿಲ್ಲ. 2.58 ಲಕ್ಷ ಖಾಲಿ ಹುದ್ದೆಗಳನ್ನು ಬಿಜೆಪಿ ಸರ್ಕಾರ ತುಂಬಿಲ್ಲ ಎಂದು ದೂರಿದರು.

ಕಾಂಗ್ರೆಸ್ ಗ್ಯಾರಂಟಿಗಳಿಗೆ ನಾನೇ ಜವಾಬ್ದಾರ

ಕಾಂಗ್ರೆಸ್ಸಿನ ಐದು ಗ್ಯಾರಂಟಿಗಳನ್ನು ಮೊದಲನೇ ಕ್ಯಾಬಿನೆಟ್‌ನಲ್ಲಿಯೇ ಜಾರಿಗೆ ತರಲಾಗುವುದು. ಅದಕ್ಕೆ ನಾನೇ ಜವಾಬ್ದಾರ. ಮೋದಿ, ಬೊಮ್ಮಾಯಿ ಸುಳ್ಳಿನ ಮಾತಿಗೆ ಮರುಳಾಗಬೇಡಿ. ಮೋದಿ ಅವರು ಗುಜರಾತಿನಲ್ಲಿ ತಮ್ಮ ಹೆಸರಿನ ಮೇಲೆ ಮತ ಕೇಳಿದಂತೆ ನನಗೆ ಕರ್ನಾಟಕದಲ್ಲಿ ಮತ ಕೇಳಲು ಹಕ್ಕಿದೆ. ನೀವು ಯಾಕೆ ರಾಜ್ಯಕ್ಕೆ ಕಾಲಿಡುತ್ತಿದ್ದೀರಿ ಎಂದು ಮೋದಿ ಅವರನ್ನು ಪ್ರಶ್ನಿಸಿದರು.

ಈಶ್ವರ ಖಂಡ್ರೆ ರಿಪೋರ್ಟ್ ಕಾರ್ಡ್ ಬಿಡುಗಡೆ

ಕಾರ್ಯಕ್ರಮದಲ್ಲಿ ಭಾಲ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಈಶ್ವರ ಖಂಡ್ರೆ ಅವರು ಮಾಡಿರುವ ಕೆಲಸಗಳ ರಿಪೋರ್ಟ್ ಕಾರ್ಡ್ ಮತ್ತು ಮುಂದಿನ ಯೋಜನೆಗಳ ಕುರಿತಾದ ಪಟ್ಟಿಯನ್ನು ಬಿಡುಗಡೆ ಮಾಡಿ ಮಾತನಾಡಿದರು.

ಈ ಸಂದರ್ಭದಲ್ಲಿ ಎಐಸಿಸಿ ಕಾರ್ಯದರ್ಶಿ  ಶ್ರೀಹರಿಬಾಬು, ತೆಲಂಗಾಣ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರೇವಂತರೆಡ್ಡಿ, ಹರಿಯಾಣದ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ಉದಯಭಾನು, ಭೀಮಸೇನರಾವ್ ಶಿಂಧೆ, ಜಿಲ್ಲಾ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಎಂಎಲ್‌ಸಿ ಅರವಿಂದ ಅರಳಿ, ಮಾಜಿ ಸಂಸದ ನರಸಿಂಗರಾವ್ ಸೂರ್ಯವಂಶಿ, ಸುರೇಶ ಶೆಟಕಾರ್, ಮೀನಾಕ್ಷಿ ಸಂಗ್ರಾಮ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದತ್ತಾತ್ರಿ ಮೂಲಗೆ, ಮಲ್ಲಿಕಾರ್ಜುನ ಪಾಟೀಲ ಮುಗನೂರ, ಪ್ರಕಾಶ ಮಾಶೆಟ್ಟೆ ಇದ್ದರು. ದೀಪಕ ಠಮಕೆ ನಿರೂಪಿಸಿ, ವಂದಿಸಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭೆ ಚುನಾವಣೆ | ಏ. 25, 26ರಂದು ನಂದಿ ಗಿರಿಧಾಮಕ್ಕೆ ಪ್ರವೇಶ ನಿರ್ಬಂಧ

ಏ.19 ರಿಂದ ದೇಶದಲ್ಲಿ ಮೊದಲ ಹಂತದ ಚುನಾವಣೆ ಆರಂಭವಾಗಿದೆ. ಕರ್ನಾಟಕದಲ್ಲಿ ಎರಡು...

ಬೆಂಗಳೂರು | ಹತ್ತಕ್ಕೂ ಹೆಚ್ಚು ಉದ್ಯಮಿಗಳ ಮನೆ ಮೇಲೆ ಐಟಿ ದಾಳಿ

ಒಂದೆಡೆ ಲೋಕಸಭಾ ಚುನಾವಣೆಯ ಕಾವು ಏರಿಕೆಯಾಗುತ್ತಿದ್ದರೆ, ಇನ್ನೊಂದೆಡೆ ಆದಾಯ ತೆರಿಗೆ ಇಲಾಖೆ...

ಬೀದರ್‌ | ಕಾಂಗ್ರೆಸ್‌ನವರು ನಪುಂಸಕರು, ಷಂಡರು : ಬಿಜೆಪಿ ಮುಖಂಡ ಎಸ್.ಕೆ.ಬೆಳ್ಳುಬ್ಬಿ

ಕಾಂಗ್ರೆಸ್‌ನವರು ನಪುಂಸಕರು, ಷಂಡರು ಎಂದು ಬಿಜೆಪಿ ಮುಖಂಡ ಎಸ್.ಕೆ.ಬೆಳ್ಳುಬ್ಬಿ ಹೇಳಿಕೆ ನೀಡಿದ್ದಾರೆ.ಬೀದರ್‌...

ಬೆಂ.ಗ್ರಾಮಾಂತರ | ಕಾರ್ಮಿಕರ ಸುಲಿಗೆ ಮಾಡುತ್ತಿದ್ದ ಮೂವರ ಬಂಧನ

ರಾತ್ರಿ ವೇಳೆ ಕಾರ್ಮಿಕರನ್ನು ಬೆದರಿಸಿ ಹಣ ಮತ್ತು ಮೊಬೈಲ್‌ ಫೋನ್‌ ಸುಲಿಗೆ...