ರೈತರ ಹಿತಾಸಕ್ತಿಗಾಗಿ ಚುನಾವಣೆಗೆ ಸ್ಪರ್ಧಿಸಿದ್ದೇನೆ: ದರ್ಶನ್ ಪುಟ್ಟಣ್ಣಯ್ಯ

Date:

ಐಟಿ-ಬಿಟಿಯಲ್ಲಿ ಜೀವನ ಕಟ್ಟಿಕೊಂಡಿದ್ದ ನನಗೆ, ತಂದೆಯವರ ನಂತರ ಅವರ ಹಾದಿಯಲ್ಲಿ ಸಾಗಬೇಕು ಅಂತ ಜನರ ಒತ್ತಡ ಬಂತು. ಹಾಗಾಗಿ ಜನಸೇವೆಗೆ ನಿಂತಿದ್ದೇನೆ. ಐದು ವರ್ಷದ ಹಿಂದೆ ರಾಜಕೀಯ ಜೀವನ ಆರಂಭವಾಯ್ತು. ಕಳೆದ ಚುನಾವಣೆಯಲ್ಲಿ ಸೋತಿದ್ದ ನಾನು, ಮತ್ತೆ ರೈತರ ಹಿತಾಸಕ್ತಿ ಕಾಯುವ ಸಲುವಾಗಿ ಮೇಲುಕೋಟೆ ಕ್ಷೇತ್ರದ ಅಭ್ಯರ್ಥಿಯಾಗಿ ಮತ್ತೆ ಸ್ಪರ್ಧಿಸಿದ್ದೇನೆ” ಎಂದು ಮಾಜಿ ಶಾಸಕ ದಿ. ಪುಟ್ಟಣ್ಣಯ್ಯ ಅವರ ಪುತ್ರ ದರ್ಶನ್‌ ಪುಟ್ಟಣ್ಣಯ್ಯ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಚುನಾವಣಾ ಪೂರ್ವದಲ್ಲಿ ಹಾಲಿನ ದರ ಹೆಚ್ಚಳ, ಕಬ್ಬಿಗೆ ಬೆಂಬಲ ಬೆಲೆ, ಎಲ್ಲ ಬೆಳೆಗಳಿಗೆ ಎಂಎಸ್‌ಪಿ ಖಾತ್ರಿಗಾಗಿ ಹೋರಾಟ 109 ದಿನಗಳ ಕಾಲ ಮಾಡಿದ್ದೇವೆ. ಆದರೂ, ನಮ್ಮ ಹೋರಾಟಕ್ಕೆ ವ್ಯವಸ್ಥೆ ಸ್ಪಂದಿಸಲಿಲ್ಲ. ಹಾಗಾಗಿ ಚುನಾವಣಾ ನಂತರ ಸತತ ಹೋರಾಟ ಮಾಡಬೇಕು. ರೈತರ ಬೆಳೆಗಳಿಗೆ ಸೂಕ್ತ ಬೆಲೆ ದೊರಕಿಸಿಕೊಡಬೇಕು. ಅದಕ್ಕಾಗಿ ದುಡಿಯುತ್ತೇನೆ” ಎಂದು ಹೇಳಿದರು.

“ರೈತರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಮತ್ತು ಆಸ್ಪತ್ರೆಗೆ ವೆಚ್ಚಕ್ಕಾಗಿ ಅಧಿಕ ಮೊತ್ತದ ಸಾಲ ಮಾಡುತ್ತಿದ್ದಾರೆ. ರೈತರ ಆದಾಯ ಅಧಿಕ ಆಗುತ್ತಿಲ್ಲ, ಖರ್ಚು ಕೂಡ ಕಡಿಮೆ ಆಗುತ್ತಿಲ್ಲ. ರೈತರ ಸಾಲ ಮನ್ನಾ ಮಾಡಿದರಷ್ಟೇ ಸಾಲದಿಂದ ಹೊರಬರಲು ಸಾಧ್ಯವಿಲ್ಲ. ಬೆಳೆಗಳಿಗೆ ಸರಿಯಾದ ಬೆಲೆ ನಿಗದಿ ಮಾಡಬೇಕು. ರೈತರು ಮತ್ತು ಜನರ ಪರ ನಿಲ್ಲಲು ಚುನಾವಣೆ ಮತ್ತು ಗೆಲುವೇ ಮಾನದಂಡವಲ್ಲ. ಹಾಗಾಗಿ ನಿರಂತರವಾಗಿ ರೈತ ಸಮುದಾಯದ ಜೊತೆ ನಿಲ್ಲುತ್ತೇನೆ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಸರ್ಕಾರದ ಯಾವುದೇ ಕಚೇರಿಯಲ್ಲಿ ಲಂಚವಿಲ್ಲದ ಕಡತಗಳು ಮುಂದಕ್ಕೆ ಹೋಗುತ್ತಿಲ್ಲ. ಆ ಸಂಬಂಧ ಏನು ಕಾನೂನು ಅವಕಾಶ ಇವೆ ಎಂಬುದನ್ನು ಜನಸಮಾನ್ಯರಿಗೆ ತಿಳಿಸಿ ಪಾರದರ್ಶಕವಾಗಿ ವ್ಯವಸ್ಥೆ ನಡೆಯುವಂತೆ ಮಾಡುವುದು ನಮ್ಮ ಉದ್ದೇಶಗಳಲ್ಲೊಂದು” ಎಂದು ವಿವರಿಸಿದರು.

ಈ ಸುದ್ದಿ ಓದಿದ್ದೀರಾ?: ಅಂಗನವಾಡಿ ಕಾರ್ಯಕರ್ತೆಯರ ವೇತನ ಹೆಚ್ಚಳದ ಭರವಸೆ ನೀಡಿದ ಪ್ರಿಯಾಂಕಾ ಗಾಂಧಿ

“ತಂದೆಯ ಮೇಲಿನ ಅಭಿಮಾನಕ್ಕಾಗಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮರ್ ಅವರು ಕಾಂಗ್ರೆಸ್ ಅಭ್ಯರ್ಥಿ ಹಾಕದೆ, ನನಗೆ ಅಧಿಕೃತವಾಗಿ ಬೆಂಬಲ ಕೊಟ್ಟಿದ್ದಾರೆ. ಬಿಜೆಪಿ ಪ್ರಬಲ ತನ್ನ ಅಭ್ಯರ್ಥಿಯನ್ನು ಹಾಕಿದೆ. ಹಾಗಾಗಿ ಅವರ ಬೆಂಬಲ ಇಲ್ಲ. ಸುಮಲತಾ ಅವರಿಗಾಗಿ ಲೋಕಸಭಾ ಚುನಾವಣೆಯಲ್ಲಿ ಕೆಲಸ ಮಾಡಿದ್ದೆವು. ಆ ಕಾರಣಕ್ಕಾಗಿ ಅವರು ವೈಯಕ್ತಿಕವಾಗಿ ಬೆಂಬಲ ಕೊಟ್ಟಿದ್ದಾರಷ್ಟೇ‌” ಎಂದರು

“ಎಂಎಸ್‌ಪಿ, ಸಣ್ಣ ಕೈಗಾರಿಕೆಗಳ ಸ್ಥಾಪನೆ, ವಸತಿ ರಹಿತ ಹಳ್ಳಿ, ಜನರಿಗೆ ಸೂರು ಸೌಲಭ್ಯ, ಗ್ರಾಮಗಳಿಗೆ ಮೂಲಭೂತ ಸೌಕರ್ಯ, ಸ್ಥಳೀಯವಾಗಿ ಉದ್ಯೋಗ ಸೃಷ್ಟಿ, ಆರೋಗ್ಯ ಸೌಲಭ್ಯಗಳನ್ನು ಸಮರ್ಪಕವಾಗಿ ದೊರೆಯುವಂತೆ ಮಾಡಬೇಕು ಎಂಬುದು ನಮ್ಮ ಉದ್ದೇಶ” ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯನಗರ | ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ವಿರುದ್ಧ ಅಕ್ರಮ ಮರಳು ದಂಧೆ ಆರೋಪ

ರಾಜ್ಯದಲ್ಲಿ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿರುವಾಗಲೇ ದಾವಣಗೆರೆ ಜಿಲ್ಲೆಯಲ್ಲಿ ಜಿಲ್ಲಾ...

ಬಿಸಿಲ ಧಗೆಗೆ ಬೆಂದ ಜನರಿಗೆ ತಂಪೆರೆದ ಮಳೆ: ಶನಿವಾರ ಬೆಳಿಗ್ಗೆ ರಾಜ್ಯದ ಹಲವೆಡೆ ಮಳೆ

ತಾಪಮಾನ ಹೆಚ್ಚಳದಿಂದ ಬಸವಳಿದ್ದಿದ್ದ ರಾಜ್ಯದ ಜನತೆಗೆ ತಡವಾಗಿ ಆರಂಭವಾದ ಪೂರ್ವ ಮುಂಗಾರು...

ಬೆಂಗಳೂರಿಗೆ ಪ್ರಧಾನಿ ಮೋದಿ; ಸಂಚಾರ ಮಾರ್ಗ ಬದಲಾವಣೆ

ಲೋಕಸಭಾ ಚುನಾವಣೆ ಇನ್ನೇನು ಕೆಲವೇ ದಿನಗಳಲ್ಲಿ ನಡೆಯಲಿದ್ದು, ರಾಜಕೀಯ ಪಕ್ಷಗಳ ಪ್ರಚಾರ...

ಉಡುಪಿ | ಸಮವಸ್ತ್ರಕ್ಕೆ ಗೌರವ ತರುವ ಕೆಲಸ ಆಗಬೇಕು: ಎಸ್‌ಪಿ ಅರುಣ ಕೆ

ದೇಶದ ಕಾನೂನು ಹಾಗೂ ಸಾಮಾಜಿಕ ಭದ್ರತೆಗಾಗಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್, ಗೃಹ...