ನಮ್ಮ ದೇಣಿಗೆ ಹಣದಲ್ಲೇ ಠೇವಣಿ ಇಡಿ : ಕಾರ್ಯಕರ್ತರ ಒತ್ತಾಯ, ಭಾವುಕರಾದ ಪರಮೇಶ್ವರ್‌

Date:

Advertisements

ಡಾ ಜಿ ಪರಮೇಶ್ವರ್ ಅವರು ನಾಮಪತ್ರ ಸಲ್ಲಿಸುವ ವೇಳೆ ನಮ್ಮ ದುಡ್ಡನ್ನೇ ಠೇವಣಿ ಇಡಬೇಕೆಂದು ಒತ್ತಾಯಿಸಿ, ಕಾಂಗ್ರೆಸ್ ಕಾರ್ಯಕರ್ತರು ದೇಣಿಗೆ ನೀಡಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾದ ಹೊತ್ತಲ್ಲೇ ಒಂದಿಲ್ಲೊಂದು ಕುತೂಹಲಕಾರಿ ವಿದ್ಯಮಾನಗಳು ಜರುಗುತ್ತಿವೆ. ಇದೀಗ ಕಾರ್ಯಕರ್ತರೇ ದೇಣಿಗೆ ನೀಡಿರುವ ಘಟನೆ ನಡೆದಿದೆ.

ಕೊರಟಗೆರೆ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಉಪ ಮುಖ್ಯಮಂತ್ರಿ ಡಾ ಜಿ ಪರಮೇಶ್ವರ್ ಅವರಿಗೆ ಪಕ್ಷದ ಕಾರ್ಯಕರ್ತರು ಹಣ ನೀಡಿ ಹಾರೈಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಚುನಾವಣೆ 2023 | ಸಚಿವರ ಸಂಪತ್ತು ಹಲವು ಪಟ್ಟು ಹೆಚ್ಚಳ

ಕೊರಟಗೆರೆಯ ಗ್ರಾಮವೊಂದರಲ್ಲಿ ಸಭೆ ನಡೆದ ಬಳಿಕ 100ಕ್ಕೂ ಹೆಚ್ಚು ಕಾರ್ಯಕರ್ತರು ಠೇವಣಿ ಹಣವನ್ನು ತಾವು ನೀಡಿದ ದೇಣಿಗೆಯಿಂದಲೇ ಸಲ್ಲಿಸಬೇಕು ಎಂದು ಒತ್ತಾಯಿಸಿದ್ದಾರೆ.

ಕಾರ್ಯಕರ್ತರ ಸಭೆ ಬಳಿಕ ನೂರಾರು ಕಾರ್ಯಕರ್ತರು ದೇಣಿಗೆ ಹಣ ನೀಡಿದ್ದಾರೆ. ಈ ಮೂಲಕ ಪರಮೇಶ್ವರ್ ಅವರಿಗೆ ಶಕ್ತಿ ತುಂಬಲು ಮುಂದಾಗಿದ್ದಾರೆ.

ಕಾರ್ಯಕರ್ತರು ದೇಣಿಗೆ ನೀಡಿ, ಅದೇ ಹಣದಿಂದ ಠೇವಣಿ ಇರಿಸುವಂತೆ ಹೇಳಿದ್ದು, ಜನರ ಪ್ರೀತಿಗೆ ಜಿ ಪರಮೇಶ್ವರ್ ಭಾವುಕರಾಗಿದ್ದಾರೆ.

ಈ ಮೊದಲು ವೈ ಎಸ್ ವಿ ದತ್ತ ದೇಣಿಗೆ

ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ಮಾಜಿ ವಿಧಾನಪರಿಷತ್ ಸದಸ್ಯ ವೈಎಸ್ ವಿ ದತ್ತ ಅವರಿಗೆ ಕಡೂರಿನ ‘ಕೈ’ ಟಿಕೆಟ್ ತಪ್ಪಿತ್ತು. ಬಳಿಕ ಬೇಸರಗೊಂಡಿದ್ದ ಅವರು ಕಾರ್ಯಕರ್ತರ ಸಭೆ ಕರೆದಿದ್ದರು. ಕಾರ್ಯಕರ್ತರ ಸಭೆ ಬಳಿಕ ವೈ ಎಸ್‌ ವಿ ದತ್ತ ಅವರು ದೇಣಿಗೆ ಸಂಗ್ರಹಿಸಿ ಗಮನ ಸೆಳೆದಿದ್ದರು. ಬಳಿಕ ಕಾಂಗ್ರೆಸ್ ತೊರೆದು ಮರಳಿ ಜೆಡಿಎಸ್‌ಗೆ ಸೇರ್ಪಡೆಯಾಗಿ ಟಿಕೆಟ್ ಗಿಟ್ಟಿಸಿಕೊಂಡರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

ಬಿಹಾರದಲ್ಲಿ ಒಂದು ಮತವನ್ನೂ ಕದಿಯಲು ನಾವು ಬಿಡಲ್ಲ: ರಾಹುಲ್ ಗಾಂಧಿ

ಮತಗಳನ್ನು ಕದಿಯಲು ಚುನಾವಣಾ ಆಯೋಗ ಮತ್ತು ಬಿಜೆಪಿ ಪಾಲುದಾರಿಕೆ ಹೊಂದಿದೆ ಎಂದು...

Download Eedina App Android / iOS

X