ಧಾರವಾಡ | ಸರ್ಕಾರ ʼಗ್ಯಾರಂಟಿʼ ಯೋಜನೆ ನೀಡದಿದ್ದರೂ ಪರವಾಗಿಲ್ಲ, ಮದ್ಯ ಮಾರಾಟ ಬಂದ್‌ ಮಾಡಲಿ

Date:

Advertisements

ರಾಜ್ಯದ 600 ಸಣ್ಣ ಗ್ರಾಮ ಪಂಚಾಯತಿಗಳಲ್ಲಿ ಮದ್ಯ ಮಾರಾಟಕ್ಕೆ ಪರವಾನಿಗೆ ಕೊಡುವ ರಾಜ್ಯ ಸರ್ಕಾರದ ನಿರ್ಧಾರ ಖಂಡನೀಯವಾದದ್ದು, ಕೂಡಲೇ ಮದ್ಯಮಾರಾಟದ ಪರವಾನಿಗೆಗೆ ರದ್ದುಗೊಳಿಸುವಂತೆ ರಾಜ್ಯ ಮಹಿಳಾ ಒಕ್ಕೂಟ ಮತ್ತು ಮದ್ಯನಿಷೇಧ ಆಂದೋಲನ ಕಾರ್ಯಕರ್ತರು ಒತ್ತಾಯಿಸಿದರು.

ಈ ಕುರಿತು ಕಲಘಟಗಿ ತಾಲೂಕು ಘಟಕದ ಕಾರ್ಯಕರ್ತರು ಮದ್ಯಮಾರಾಟ ನಿಷೇಧಿಸುವಂತೆ ತಹಶಿಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ‌ ಮನವಿ ಪತ್ರ ಸಲ್ಲಿಸಿದರು.

“ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತ್ರತ್ವದ ರಾಜ್ಯ ಸರ್ಕಾರ ನಮಗೆ ಐದು ಗ್ಯಾರಂಟಿ ಯೋಜನೆ ನಮಗೆ ಕೊಡದಿದ್ದರೂ ಪರವಾಗಿಲ್ಲ, ಆದರೆ ಮದ್ಯಮಾರಾಟ ಮಾತ್ರ ಸಂಪೂರ್ಣ ಬಂದ್ ಮಾಡಲೇಬೇಕು ಎಂದು ಆಗ್ರಹಿಸಿದ್ದಾರೆ. ಸಾರಾಯಿ ಬಂದ್ ವಿಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಮದ್ಯ ಮಾರಾಟ ನಿಷೇಧಿಸಬೇಕೆಂದು” ಆಗ್ರಹಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಪಂಚಾಯತಿ ಮಟ್ಟದಲ್ಲಿ ಸಾವಿರ ಹೊಸ ಮದ್ಯದಂಗಡಿಗಳಿಗೆ ಸರ್ಕಾರದಿಂದ ಪ್ರಸ್ತಾವ: ಸಾಣೇಹಳ್ಳಿ ಶ್ರೀ ವಿರೋಧ

ಈ ಬಗ್ಗೆ ಈದಿನ.ಕಾಮ್ ಜೊತೆಗೆ ಕಾರ್ಯಕರ್ತೆ ನಿಂಗಮ್ಮ‌ ಸವಣೂರ ಮಾತನಾಡಿ, ” ಮದ್ಯ ಮಾರಾಟದಿಂದ ಹಲವರು ಕುಡಿತಕ್ಕೆ ಬಲಿಯಾಗಿದ್ದಾರೆ, ಇದರಿಂದ ಅನೇಕ ಸಂಸಾರಗಳು ಬೀದಿಗೆ ಬಂದಿವೆ. ಮದ್ಯಪಾನ‌ ಆರೋಗ್ಯಕ್ಕೆ ಹಾನಿಕಾರಕ ಎಂಬುದು ಗೊತ್ತಿದ್ದರೂ ಅನೇಕ ಸೇವಿಸುತ್ತಾರೆ. ಇತ್ತೀಚೆಗೆ ನಮ್ಮ ಸಮಾಜ ಕುಡುಕರ ಸಾಮ್ರಾಜ್ಯವೆಂಬಂತೆ ರೂಪುಗೊಳ್ಳುತ್ತಿರುವುದು ದುರಂತ. ಅಪ್ರಾಪ್ತ ವಯಸ್ಸಿನವರು ಮದ್ಯಪಾನ ದುಶ್ಚಟಕ್ಕೆ ಸಿಲುಕಿ ತಮ್ಮ‌ಬದುಕನ್ನೇ ಹಾಳು ಮಾಡಿಕೊಳ್ಳುತ್ತಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದರು.‌

ಈ ಸಂದರ್ಭದಲ್ಲಿ ಮಹಿಳಾ ಸಂಘಟನೆ, ಮದ್ಯಪಾನ ನಿಷೇಧ ಆಂದೋಲನ ಹಾಗೂ ಗ್ರಾಮೀಣ ಕೂಲಿ ಕಾರ್ಮಿಕ ಸಂಘಟನೆಯ ಮಹಿಳೆಯರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X