ಆದಿಚುಂಚನಗಿರಿ ಮಠಕ್ಕೆ ಡಿ ಕೆ ಶಿವಕುಮಾರ್ ಭೇಟಿ

Date:

  • ಬಾಬುರಾವ್‌ ಚಿಂಚನಸೂರ್ ಕಾಂಗ್ರೆಸ್ ಸೇರುವ ಸಾಧ್ಯತೆ
  • ನಾನು ಸಮುದಾಯದ ಪರ ಎಂದ ಡಿ ಕೆ ಶಿವಕುಮಾರ್

ಉರಿಗೌಡ – ದೊಡ್ಡ ನಂಜೇಗೌಡ ವಿಚಾರದಲ್ಲಿ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಅವರು ಬಿಜೆಪಿ ನಾಯಕರಿಗೆ ಎಚ್ಚರಿಕೆ ನೀಡಿದ್ದರು. ಈ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಚುಂಚನಗಿರಿ ಮಠಕ್ಕೆ ಭೇಟಿ ನೀಡಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಚುನಾವಣಾ ಅಖಾಡ ರಂಗೇರಿದೆ. ಟಿಪ್ಪು ಸುಲ್ತಾನನನ್ನು ಕೊಂದಿದ್ದು ಉರಿಗೌಡ ಮತ್ತು ನಂಜೇಗೌಡ ಎಂದು ವಾದಿಸುವ ಮೂಲಕ ಬಿಜೆಪಿ ಒಕ್ಕಲಿಗರಲ್ಲಿ ದ್ವೇಷಾಸೂಯೆಗಳನ್ನು ಬಿತ್ತಿ ಮತಬೇಟೆಗೆ ಯತ್ನಿಸಿತ್ತು. ಆದರೆ, ನಿರ್ಮಲಾನಂದನಾಥ ಸ್ವಾಮೀಜಿ ಮಧ್ಯಪ್ರವೇಶಿಸಿ ಒಕ್ಕಲಿಗರ ವಿಚಾರದಲ್ಲಿ ಸುಳ್ಳು ಸುದ್ದಿ ಹರಡದಂತೆ ಬಿಜೆಪಿ ನಾಯಕರಿಗೆ ಎಚ್ಚರಿಕೆ ನೀಡಿದ್ದರು.

ಈ ಕುರಿತು ಪ್ರತಿಕ್ರಿಯೆ ನೀಡಿದ್ದ ಡಿ ಕೆ ಶಿವಕುಮಾರ್, “ಇತಿಹಾಸವನ್ನು ತಿದ್ದುವ ಮತ್ತು ಸಮಾಜಕ್ಕೆ ತಪ್ಪು ಸಂದೇಶವನ್ನು ನೀಡುವವರ ವಿರುದ್ಧ ಹೋರಾಟ ನಡೆಸಬೇಕು” ಎಂದು ಸ್ವಾಮೀಜಿಗೆ ಮನವಿ ಮಾಡಿಕೊಂಡಿದ್ದರು.

ಈ ಬೆನ್ನಲ್ಲೇ ಮಂಡ್ಯ ಜಿಲ್ಲೆಯ ನಾಗಮಂಗಲ ಸಮೀಪದ ಆದಿಚುಂಚನಗಿರಿ ಮಠಕ್ಕೆ ಡಿಕೆ ಶಿವಕುಮಾರ್ ಭೇಟಿ ನೀಡಿ, ಕಾಲಭೈರೇಶ್ವರನಿಗೆ ಪೂಜೆ ಸಲ್ಲಿಸಿದ್ದಾರೆ. ಕಾಂಗ್ರೆಸ್‌ ನಾಯಕನ ಮಠ ಭೇಟಿ ನಾನಾ ಕುತೂಹಲಗಳನ್ನು ಹುಟ್ಟು ಹಾಕಿದೆ.

ಆದಿಚುಂಚನಗಿರಿ ಮಠದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, “ಅಶ್ವತ್ಥನಾರಾಯಣ ಅವರೇ ಉರಿಗೌಡ, ಸಿ.ಟಿ ರವಿಯೇ ನಂಜೇಗೌಡ. ಒಕ್ಕಲಿಗರನ್ನು ಕೆಟ್ಟದಾಗಿ ಬಿಂಬಿಸಲು ಬಿಜೆಪಿ ನಾಯಕರು ಈ ಪಾತ್ರಗಳನ್ನು ಸೃಷ್ಟಿಸಿದ್ದಾರೆ. ಯಾರೇ ಆಗಲಿ ಯಾವೊಂದು ಸಮುದಾಯಕ್ಕೂ ಸಹ ಧಕ್ಕೆ ತರುವಂತಹ ಕೆಲಸ ಮಾಡಬಾರದು. ಈ ಕುರಿತು ಈಗಾಗಲೇ ನಿರ್ಮಲಾನಂದ ಶ್ರೀಗಳು ಮಾತನಾಡಿದ್ದಾರೆ. ಸ್ವಾಮೀಜಿಗಳ ಎಚ್ಚರಿಕೆ ನಂತರ ಮುನಿರತ್ನ ಅವರು ಸಹ ಸಿನಿಮಾ ನಿರ್ಮಾಣ ಮಾಡುವ ವಿಚಾರದಿಂದ ಹಿಂದೆ ಸರಿದಿದ್ದಾರೆ” ಎಂದರು.

“ಉರಿಗೌಡ-ನಂಜೇಗೌಡ ವಿಚಾರದಲ್ಲಿ ನಾನು ಪಕ್ಷ ಬಿಟ್ಟು ಸಮುದಾಯದ ವ್ಯಕ್ತಿಯಾಗಿ ಹೋರಾಟ ಮಾಡುತ್ತೇನೆ” ಎಂದು ಡಿ.ಕೆ ಶಿವಕುಮಾರ್ ಬಿಜೆಪಿ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ.

ವಿಧಾನ ಪರಿಷತ್ ಸ್ಥಾನಕ್ಕೆ ಚಿಂಚನಸೂರ್ ರಾಜೀನಾಮೆ

ಗುರುಮಠಕಲ್ ಮತಕ್ಷೇತ್ರದ ಬಿಜೆಪಿ ನಾಯಕ ಬಾಬುರಾವ್ ಚಿಂಚನಸೂರ್ ಅವರು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ರಾಜೀನಾಮೆ ಅಂಗೀಕರಿಸಿದ್ದಾರೆ.

ಮೊದಲು ಕಾಂಗ್ರೆಸ್‌ನಲ್ಲಿದ್ದ ಬಾಬುರಾವ್ ಚಿಂಚನಸೂರ್ ಅವರು 2018ರ ವಿಧಾನಸಭಾ ಚುನಾವಣೆಯಲ್ಲಿ ಸೋತ ಬಳಿಕ ಬಿಜೆಪಿ ಸೇರಿದ್ದರು. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಅವರು ಬಿಜೆಪಿ ಟಿಕೆಟ್‌ ನೀಡುವಂತೆ ಪಟ್ಟು ಹಿಡಿದಿದ್ದಾರೆ. ಆದರೆ, ವಿಧಾನ ಪರಿಷತ್ ಸ್ಥಾನದ ನೆಪವೊಡ್ಡಿರುವ ಬಿಜೆಪಿ ಟಿಕೆಟ್‌ ನೀಡಲು ಹಿಂದೇಟು ಹಾಕುತ್ತಿದೆ. ಈ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಅವರು ಮೂಲ ಪಕ್ಷಕ್ಕೆ ಮರಳುವ ಸಿದ್ಧತೆಯಲ್ಲಿದ್ದಾರೆ ಎನ್ನಲಾಗುತ್ತಿದೆ.

ಈ ಕುರಿತು ಆದಿಚುಂಚನಗಿರಿ ಮಠದಲ್ಲಿ ಪ್ರತಿಕ್ರಿಯೆ ನೀಡಿರುವ ಡಿ.ಕೆ ಶಿವಕುಮಾರ್, “ನಾನು ಬಾಬುರಾವ್ ಚಿಂಚನಸೂರ್ ಅವರ ಜೊತೆಗೆ ಚರ್ಚಿಸಿದ್ದೇನೆ. ಚಿಂಚನಸೂರ್ ಪಕ್ಷದ ಆಸ್ತಿ ಆಗುತ್ತಾರೆ ಎನ್ನುವ ನಂಬಿಕೆ ಇದೆ. ಈ ಹಿಂದೆಯೂ ಚಿಂಚನಸೂರ್ ಅವರಿಗೆ ಕಾಂಗ್ರೆಸ್‌ ಎಲ್ಲ ಸ್ಥಾನಮಾನ ನೀಡಿದೆ” ಎಂದು ಹೇಳಿದ್ದಾರೆ.

+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯ ಸರ್ಕಾರದ ವಿರುದ್ಧ ಜೂನ್ 7, 8ರಂದು ಪ್ರತಿಭಟನೆ: ಬಿಜೆಪಿ

ನೂತನ ಸರ್ಕಾರದ ವಿರುದ್ಧ ಬೀದಿಗಿಳಿಯಲು ಸಿದ್ದವಾದ ಬಿಜೆಪಿ ಕಾಂಗ್ರೆಸ್ ಸರ್ಕಾರದ ಗೊಂದಲದ ನೀತಿಗಳ...

ಕೋಲಾರ | ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣ; ಆರೋಪಿಗೆ 30 ವರ್ಷ ಜೈಲು

ಅಪ್ರಾಪ್ತೆ ಮೇಲೆ ನಡೆದಿದ್ದ ಅತ್ಯಾಚಾರ ಪ್ರಕರಣದ ಆರೋಪಿಗೆ ಕೋಲಾರ ಸೆಷನ್ಸ್ ನ್ಯಾಯಾಲಯ...

ಸಚಿವ ವೆಂಕಟೇಶ್‌ ಕಸಾಯಿ ಖಾನೆಗೆ ಭೇಟಿ ನೀಡಿ ಬಳಿಕ ಹೇಳಿಕೆ ನೀಡಲಿ; ಪ್ರಭು ಚೌಹಾಣ್‌

ಪಶುಸಂಗೋಪನೆ ಸಚಿವ ಕೆ ವೆಂಕಟೇಶ್ ಹೇಳಿಕೆಗೆ ಮಾಜಿ ಸಚಿವ ತಿರುಗೇಟು ಗೋ ಹತ್ಯೆ...

ನಮ್ಮ ಸಚಿವರು | ಆರ್‌ ಬಿ ತಿಮ್ಮಾಪೂರ್‌ ಮಂತ್ರಿಯಾದರೂ ಮುಧೋಳ ಕ್ಷೇತ್ರದ ಜನರಿಗೆ ನೀಗದ ಬವಣೆ  

ಬಾಗಲಕೋಟೆ ಜಿಲ್ಲೆಯ ಏಕೈಕ ಎಸ್ಸಿ ಮೀಸಲು ಕ್ಷೇತ್ರದಲ್ಲಿ ಮಾಜಿ ಉಪ ಮುಖ್ಯಮಂತ್ರಿ,...