ದೊಡ್ಡಬಳ್ಳಾಪುರ | ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ನಗರಸಭೆಯ 8 ಸದಸ್ಯರು

Date:

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷಾಂತರ ಹವಾ ಜೋರಾಗಿದೆ. ತಮಗೆ ಅಥವಾ ತಮ್ಮ ನೆಚ್ಚಿನವರಿಗೆ ಟಿಕೆಟ್ ಸಿಗಲಿಲ್ಲವೆಂದು ಪಕ್ಷ ತೊರೆದು ಮತ್ತೊಂದು ಪಕ್ಷ ಸೇರುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಇದೇ ವೇಳೆ, ದೊಡ್ಡಬಳ್ಳಾಪುರ ನಗರಸಭೆಯ ಎಂಟು ಬಿಜೆಪಿ ಸದಸ್ಯರು ‘ಕೈ’ ಹಿಡಿದಿದ್ದಾರೆ.

ಚುನಾವಣೆಗೆ ದಿನಗಣನೆ ಶುರುವಾದ ಹೊತ್ತಲ್ಲೇ ಬಿಜೆಪಿಯಲ್ಲಿ ಬಂಡಾಯದ ಬಿಸಿ ಜೋರಾಗಿದೆ. ಪ್ರತಿದಿನವೂ ಒಬ್ಬಲ್ಲ ಒಬ್ಬ ನಾಯಕ ಕಾಂಗ್ರೆಸ್ ಸೇರುತ್ತಿದ್ದಾರೆ.

ದೊಡ್ಡ ಬಳ್ಳಾಪುರದ ನಗರಸಭೆ ಸದಸ್ಯರಾದ ಶಿವಶಂಕರ್, ನಾಗರಾಜ್, ಶಂಕರ್, ಶಿವರಾಜು ಸೇರಿದಂತೆ ಪ್ರಮುಖರು ಬಿಜೆಪಿ ತೊರೆದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಷ್ಟ್ರೀಯ ಪಕ್ಷಗಳು ಲಿಂಗಾಯತ ನಾಯಕನನ್ನು ಸಿಎಂ ಮಾಡುತ್ತೇವೆ ಎಂದು ಘೋಷಿಸಲಿ: ಮೃತ್ಯುಂಜಯ ಸ್ವಾಮೀಜಿ

ಅವರನ್ನು ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿರುವ ಡಿ.ಕೆ ಶಿವಕುಮಾರ್, “ಇಂದು ದೊಡ್ಡಬಳ್ಳಾಪುರದ 8 ಹಾಲಿ ನಗರಸಭಾ ಸದಸ್ಯರು ಸೇರಿದಂತೆ ಬಿಜೆಪಿಯ ಪ್ರಮುಖ ನಾಯಕರು ಕಾಂಗ್ರೆಸ್ ಸೇರುತ್ತಿದ್ದಾರೆ. ನೀವು ಇಂದು ಕಾಂಗ್ರೆಸ್ ಸೇರುತ್ತಾ ದೇಶದ ತ್ರಿವರ್ಣ ಧ್ವಜವನ್ನು ನಿಮ್ಮ ಮೇಲೆ ಹಾಕಿಕೊಳ್ಳುವ ಪವಿತ್ರವಾದ ಅವಕಾಶ ಸಿಕ್ಕಿದೆ” ಎಂದಿದ್ದಾರೆ.

“ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿ, ಪುಟ್ಟಣ್ಣ ಸೇರಿದಂತೆ ಪ್ರಮುಖ ನಾಯಕರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ನಿನ್ನೆ ಬೈಂದೂರಿನಲ್ಲಿ ಒಂದೂವರೆ ಸಾವಿರ ಜನ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದರು. ಇಂದು ನಿಮ್ಮನ್ನು ಬಹಳ ತುಂಬುಹೃದಯದಿಂದ ಪಕ್ಷಕ್ಕೆ ಸೇರಿಸಿಕೊಳ್ಳುತ್ತಿದ್ದೇನೆ” ಎಂದು ಹೇಳಿದ್ದಾರೆ.

ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಎಂ ರೇವಣ್ಣ, ಶಾಸಕ ವೆಂಕಟರಮಣಯ್ಯ, ಲಗ್ಗೆರೆ ನಾರಾಯಣಸ್ವಾಮಿ ಮತ್ತಿತರರು ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕಕ್ಕೆ ನೀಡಲು ‘ಇಲ್ಲ’ ಎಂದಿದ್ದ ‘ಅಕ್ಕಿ’ ಸಿಂಗಾಪುರಕ್ಕೆ ರಫ್ತು ಮಾಡಲು ಹೊರಟ ಕೇಂದ್ರ ಸರ್ಕಾರ!

ಕರ್ನಾಟಕ ಸರ್ಕಾರವು ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ನೀಡುವಂತೆ ಕೇಳಿದಾಗ 'ನಿಮಗೆ...

ಬೆಳಗಾವಿ | ಆಪರೇಷನ್ ಹಸ್ತದ ಬಗ್ಗೆ ಲಕ್ಷ್ಮಣ್ ಸವದಿ ಮಾರ್ಮಿಕ ಹೇಳಿಕೆ

ಬಹಳಷ್ಟು ಮಂದಿ ಜೆಡಿಎಸ್‌-ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಬರುಲು ಸಿದ್ದರಾಗಿದ್ದಾರೆ. ಎಲ್ಲದಕ್ಕೂ ಕಾಲ...

ಕಟುಕ, ಕಟಿಕ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರ್ಪಡೆ ಮಾಡಲು ಸಿಎಂಗೆ ಮನವಿ

ರಾಜ್ಯ ಕಟಿಕ ಸಮಾಜದ ನಿಯೋಗವು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ...

ಅರಣ್ಯ ಇಲಾಖೆಯ 50 ಅಧಿಕಾರಿ ಮತ್ತಿ ಸಿಬ್ಬಂದಿಗೆ ಮುಖ್ಯಮಂತ್ರಿ ಪದಕ ವಿತರಣೆ

ಕರ್ನಾಟಕ ಅರಣ್ಯ ಇಲಾಖೆ ವತಿಯಿಂದ ನಡೆಯುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ನೀಡುವ...