ಗೊಂದಲ ಗಲಭೆ ಇಲ್ಲದ ಚುನಾವಣೆ ನಡೆಯಲಿ: ಶೋಭಾ ಕರಂದ್ಲಾಜೆ

Date:

  • ಈ ಬಾರಿ ಚುನಾವಣೆ ಶಾಂತಿಯುತ ಮತದಾನದಿಂದ ಕೂಡಿರಲಿ ಶೋಭಾ ಕರಂದ್ಲಾಜೆ
  • ಜನತೆ ಡಬಲ್ ಎಂಜಿನ್ ಸರ್ಕಾರ ರಚನೆಗೆ ಮತ್ತೆ ಅವಕಾಶ ಮಾಡಿಕೊಡಲಿದ್ದಾರೆ

ಚುನಾವಣಾ ದಿನಾಂಕ ನಿಗದಿಪಡಿಸಿಕೊಂಡಿರುವ ರಾಜ್ಯ ವಿಧಾನಸಭಾ ಚುನಾವಣೆ ಗೊಂದಲ ಗಲಭೆ ಇಲ್ಲದೆ ನಡೆಯುವಂತಾಗಲಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಶಯ ವ್ಯಕ್ತಪಡಿಸಿದರು.

- Advertisement -

ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ರಾಜ್ಯ ಕಚೇರಿಯಲ್ಲಿನ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶೋಭಾ ಕರಂದ್ಲಾಜೆ ಮರುಮತದಾನವಾಗದ ಚುನಾವಣೆ ನಡೆಯಲಿ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಒಂದೇ ಹಂತದಲ್ಲಿ ಚುನಾವಣೆ ನಡೆಯಬೇಕು ಎಂಬುವುದು ನಮ್ಮ ನಿರೀಕ್ಷೆಯಾಗಿತ್ತು. ಅದರಂತೆಯೇ ಚುನಾವಣೆ ನಡೆಯುತ್ತಿದೆ. ಶಾಂತಿಯುತ ಮತದಾನದಿಂದ ಕೂಡಿರಲಿ, ಈ ಬಾರಿ ಚುನಾವಣೆಯಲ್ಲಿ 9.17 ಲಕ್ಷ ಯುವಜನರು ಮೊದಲ ಬಾರಿಗೆ ಮತದಾನ ಮಾಡಲಿದ್ದಾರೆ ಎಂದರು.

ಒಟ್ಟಾರೆ ಮತದಾರ ಪಟ್ಟಿಗೆ ನೋಂದಣಿ ಮಾಡಿಸಲು ಏಪ್ರಿಲ್ 11ವರೆಗೆ ಅವಕಾಶ ನೀಡಲಾಗಿದೆ. ಇದು ಸ್ವಾಗತಾರ್ಹ ಎಂದು ಕೇಂದ್ರ ಸಚಿವೆ ತಿಳಿಸಿದರು.

80 ವರ್ಷಕ್ಕಿಂತ ಮೇಲ್ಪಟ್ಟ 12 ಲಕ್ಷಕ್ಕೂ ಹೆಚ್ಚು ಮತದಾರರು, ಸಾವಿರಾರು ದಿವ್ಯಾಂಗ ಮತದಾರರು ಮನೆಯಲ್ಲೇ ಕುಳಿತು ಮತದಾನ ಮಾಡಲು ಅವಕಾಶ ನೀಡಲಾಗಿದೆ.

ಚುನಾವಣಾ ಆಯೋಗದ ಈ ನಡೆ ಸ್ವಾಗತಾರ್ಹ. ತಂತ್ರಜ್ಞಾನಕ್ಕೆ ಒತ್ತುಕೊಟ್ಟ ಕಾರಣ ಇದು ಸಾಧ್ಯವಾಗಿದೆ ಎಂದು ಶೋಭಾ ಕರಂದ್ಲಾಜೆ ಹೇಳಿದರು.

ಬೆಂಗಳೂರಿಗೆ ಒತ್ತು

ಬೆಂಗಳೂರಿನಲ್ಲಿ ಮತದಾನದ ಶೇಕಡಾವಾರು ಕಡಿಮೆ ಆಗುವ ಕುರಿತು ಆಯೋಗ ಆತಂಕ ವ್ಯಕ್ತಪಡಿಸಿದೆ. ಜತೆಗೆ ಈ ವಿಚಾರದ ಬಗ್ಗೆ ನಾಗರಿಕರು ಹೆಚ್ಚು ಒತ್ತು ಕೊಡಲು ಕೋರಿದೆ.

ಇದಕ್ಕಾಗಿ ನಗರದ ಮತದಾರರನ್ನು ಕರೆತರಲು ಮತ್ತು ಮನ ಒಲಿಸಲು ವಿಶೇಷ ಪ್ರಯತ್ನ ಅಗತ್ಯ. ಇದನ್ನು ಪಕ್ಷಾತೀತವಾಗಿ ಎಲ್ಲರೂ ಮಾಡುವಂತಾಗಬೇಕು ಎಂದು ಅವರು ನುಡಿದರು.

ರಾಜ್ಯದ ಹಲವು ಕ್ಷೇತ್ರಗಳಲ್ಲಿ ಪುರುಷ ಮತದಾರರು ಬಹುತೇಕ ಸರಿಸಮವಾಗಿ ಮಹಿಳಾ ಮತದಾರರರಿದ್ದಾರೆ, ಕೆಲವೆಡೆ ಹೆಚ್ಚು ಮತದಾರರಿರುವುದೂ ಖುಷಿಯ ವಿಚಾರ ಎಂದು ಕೇಂದ್ರ ಸಚಿವೆ ಮೆಚ್ಚುಗೆ ವ್ಯಕ್ತಪಡಿಸಿದರು.

2018ರಲ್ಲಿ ಬಿಜೆಪಿ 104 ಸೀಟುಗಳ ಜೊತೆ ಅತ್ಯಂತ ದೊಡ್ಡ ಪಕ್ಷವಾಗಿ ಜನಾಶೀರ್ವಾದ ಪಡೆದಿತ್ತು. ಆದರೆ, ಬಹುಮತ ಸಿಗಲಿಲ್ಲ. ಕಾಂಗ್ರೆಸ್-ಜೆಡಿಎಸ್ ಅಪವಿತ್ರ ಮೈತ್ರಿ ಸರಕಾರ ರಚಿಸಲಾಯಿತು.

ಆದರೆ ಮುಂದಿನ ಚುನಾವಣೆಯಲ್ಲಿ ಜನ ಇದಕ್ಕೆ ಆಸ್ಪದ ನೀಡದೆ ಬಿಜೆಪಿಗೆ ಪೂರ್ಣ ಬಹುಮತ ನೀಡಲಿದ್ದಾರೆ ಎಂದು ಶೋಭಾ ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಚುನಾವಣೆ ಬಂದಾಗ ಗ್ಯಾರಂಟಿ ಕೊಡುವ ಪಕ್ಷಗಳು. ಚುನಾವಣೆಗಾಗಿ ಜಾತಿ, ಧರ್ಮದ ಹೆಸರು ಹೇಳಿ ಒಡೆದು ಆಳುವ ಕೆಲಸ ಮಾಡುತ್ತವೆ ಎಂದು ಶೋಭಾ ಆರೋಪಿಸಿದರು.

2013-18ರ ಕಾಲಾವಧಿಯಲ್ಲಿ ಕೂಡ ಕಾಂಗ್ರೆಸ್ ಆಡಳಿತವಿದ್ದಾಗ ಆ ಪಕ್ಷ ಇದನ್ನೇ ಮಾಡಿತ್ತು. ಸಿದ್ದರಾಮಯ್ಯರ ಸರಕಾರ ಸಮಾಜ, ಧರ್ಮವನ್ನು ಒಡೆಯುವ ದುಷ್ಕೃತ್ಯ ಮಾಡಿತ್ತು ಎಂದು ವಿವರಿಸಿದರು.

ಈ ಸುದ್ದಿ ಓದಿದ್ದೀರಾ?:ಈ ಬಾರಿಯ ಚುನಾವಣೆಗೆ ಹೊಸ ಇವಿಎಂ, ವಿವಿಪ್ಯಾಟ್ ಬಳಕೆ…

ಬಿಜೆಪಿ ಸರ್ವ ಜನಾಂಗವನ್ನು ಒಟ್ಟಿಗೆ ಒಯ್ಯುವ, ಯಾವುದೇ ಯೋಜನೆ ಇದ್ದರೂ ಎಲ್ಲ ಜನಾಂಗಗಳ ಕೊನೆ ವ್ಯಕ್ತಿಗಳಿಗೆ ತಲುಪಿಸುವ ಕಾರ್ಯವನ್ನು ಮಾಡಿದೆ.

ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರಕಾರ ಇದ್ದಾಗ ಹೆಚ್ಚು ವೇಗವಾಗಿ ಅಭಿವೃದ್ಧಿ ಕಾರ್ಯ ಸಾಧ್ಯ ಎಂದು ಜನರು ಅಭಿಪ್ರಾಯ ಹೊಂದಿದ್ದಾರೆ.

ಕರ್ನಾಟಕದಲ್ಲಿ ಯಡಿಯೂರಪ್ಪ- ಬಸವರಾಜ ಬೊಮ್ಮಾಯಿ ಸರ್ಕಾರದ ಯೋಜನೆಗಳನ್ನು ನಾವು ನಿರಂತರವಾಗಿ ಜನರಿಗೆ ತಿಳಿಸುತ್ತಿದ್ದೆವು. ಚುನಾವಣೆ ಇಲ್ಲದ ಕಾಲದಲ್ಲೂ ನಾವು ಇದನ್ನು ಶಿಸ್ತಿನಿಂದ ಮಾಡಿದ್ದೇವೆ ಎಂದು ಅವರು ಹೇಳಿದರು.

ಹೀಗಾಗಿ ಮೇ 10ರಂದು ನಡೆಯುವ ಚುನಾವಣೆಯಲ್ಲಿ ಜನತೆ ಡಬಲ್ ಎಂಜಿನ್ ಸರ್ಕಾರ ರಚನೆಗೆ ಮತ್ತೆ ಅವಕಾಶ ಮಾಡಿಕೊಡಲಿದ್ದಾರೆ ಎಂದು ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ ಕರಂದ್ಲಾಜೆ ವಿಶ್ವಾಸ ವ್ಯಕ್ತಪಡಿದರು.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜಸ್ಥಾನ | ಬಿಜೆಪಿಗೆ ಮುಖಭಂಗ; ಮಾಜಿ ಸಿಎಂ ಭದ್ರಕೋಟೆ ಭೇದಿಸಿದ ಕಾಂಗ್ರೆಸ್

ರಾಜಸ್ಥಾನದಲ್ಲಿ ನಡೆದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ...

ಭಾರತದ ಇತರ ಭಾಷೆಗಳನ್ನು ಗೌರವಿಸಿ, ರಕ್ಷಿಸಿದಾಗ ಮಾತ್ರ ಹಿಂದಿಯ ಪ್ರಗತಿಗೆ ಅರ್ಥ: ಅಮಿತ್ ಶಾ

ಭಾರತೀಯ ಇತರ ಭಾಷೆಗಳ ಗೌರವ, ಪ್ರಚಾರ ಮತ್ತು ರಕ್ಷಣೆಯನ್ನು ಖಚಿತಪಡಿಸಿಕೊಳ್ಳುವ ಮೂಲಕ...

ಬಂಗಾಳದ 252 ಮದರಸಾಗಳು ಬಂದ್; ಭಯೋತ್ಪಾದಕರ ಆಶ್ರಯತಾಣ ಎಂದ ಸಚಿವ: ಬಿಜೆಪಿ ಸರ್ಕಾರಕ್ಕೆ ಮುಸ್ಲಿಮರೇ ಗುರಿಯೇ?

ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ಬಿಜೆಪಿ ಸರ್ಕಾರವು ರಾಜ್ಯಾದ್ಯಂತ ಕಾರ್ಯಾಚರಣೆ ನಡೆಸುತ್ತಿರುವ ಮದರಸಾಗಳ...

ಬಿಜೆಪಿಯಲ್ಲಿ ಆಂತರಿಕ ಕುಸ್ತಿ; ಪ್ರತಾಪ್ ಸಿಂಹ – ನಾಗೇಂದ್ರ‌ ಬೀದಿ ಕಾಳಗ

ಮೈಸೂರು ಜಿಲ್ಲೆಯ ಟಿ. ನರಸೀಪುರ ಗಣೇಶೋತ್ಸವ ಮೆರವಣಿಗೆ ವಿಚಾರವಾಗಿ ಇನ್ಸ್‌ಪೆಕ್ಟರ್ ಧನಂಜಯ್‌...