ಚುನಾವಣೆ 2023 | ಗಡಿ ವಿವಾದ: ಕರ್ನಾಟಕದಲ್ಲಿ ಎಂಇಎಸ್ ಪರ ಪ್ರಚಾರಕ್ಕೆ ಮಹಾರಾಷ್ಟ್ರದ ಎಲ್ಲ ಪಕ್ಷಗಳಿಗೆ ಕರೆ

Date:

ಕರ್ನಾಟಕ ವಿಧಾನಸಭೆ ಚುನಾವಣೆಗೆ ಪ್ರಮುಖ ಪಕ್ಷಗಳಾದ ಕಾಂಗ್ರೆಸ್ ಬಿಜೆಪಿ ಮತ್ತು ಜೆಡಿಎಸ್‌ ಭಾರೀ ಕಸರತ್ತು ನಡೆಸುತ್ತಿವೆ. ಈ ಎಲ್ಲ ಪಕ್ಷಗಳಿಗೆ ಬೆಳಗಾವಿಯಲ್ಲಿ ಪೈಪೋಟಿ ನೀಡಲು ಬೆಳಗಾವಿಯನ್ನು ಮಹಾರಾಷ್ಟಕ್ಕೆ ಸೇರಿಸಬೇಕೆಂದು ಒತ್ತಾಯಿಸುತ್ತಲೇ ಇರುವಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಮುಂದಾಗಿದೆ. ಅದಕ್ಕಾಗಿ, ತನ್ನ ಅಭ್ಯರ್ಥಿಗಳ ಪರ ಪ್ರಚಾರ ಮಾಡಲು ಮಹಾರಾಷ್ಟ್ರದ ಪ್ರಮುಖ ರಾಜಕೀಯ ಪಕ್ಷಗಳ ನಾಯಕರನ್ನು ಆಹ್ವಾನಿಸಲು ನಿರ್ಧರಿಸಿದೆ.

ಗಡಿ ಜಿಲ್ಲೆ ಬೆಳಗಾವಿ ಮತ್ತು ಕರ್ನಾಟಕದ ಇತರ ಎರಡು ಜಿಲ್ಲೆಗಳಲ್ಲಿ ಮುಖ್ಯವಾಗಿ ಹೆಚ್ಚು ಮರಾಠಿಗರು ಇರುವ 865 ಹಳ್ಳಿಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕೆಂದು ಎಂಇಎಸ್ ಒತ್ತಾಯಿಸುತ್ತಿದೆ. ಆ ಭಾಗಗಳಲ್ಲಿ ತಮ್ಮ ಅಭ್ಯರ್ಥಿಗಳನ್ನು ಎಂಇಎಸ್‌ ಕಣಕ್ಕಿಳಿಸುತ್ತಿದೆ. ಅಲ್ಲದೆ, ತಮ್ಮ ಬೆಂಬಲಕ್ಕಾಗಿ ಎಲ್ಲ ರಾಜಕೀಯ ಪಕ್ಷಗಳಿಗೆ ಆಹ್ವಾನ ಕಳುಹಿಸುವುದಾಗಿ ಮತ್ತು ವಿವಿಧ ಪಕ್ಷಗಳ ಮುಖಂಡರನ್ನು ಸಂಪರ್ಕಿಸುವುದಾಗಿ ಎಂಇಎಸ್ ಹೇಳಿದೆ.

“ಮಹಾರಾಷ್ಟ್ರದ ರಾಜಕೀಯ ಪಕ್ಷಗಳು (ಶಿವಸೇನೆ, ಎನ್‌ಸಿಪಿ, ಬಿಜೆಪಿ, ಕಾಂಗ್ರೆಸ್‌) ಬೆಳಗಾವಿ ಹಾಗೂ ಬೀದರ್ ಮತ್ತು ಕಾರವಾರದಲ್ಲಿ ವಾಸಿಸುವ ಮರಾಠಿ ಮಾತನಾಡುವ ಜನರ ಪರವಾಗಿ ಯಾವಾಗಲೂ ನಿಂತಿವೆ. ಭಾಷೆಯ ಹೆಸರಿನಲ್ಲಿ ಕರ್ನಾಟಕ ಸರ್ಕಾರದ ನಿರಂತರ ಕಿರುಕುಳ ಮತ್ತು ದೌರ್ಜನ್ಯದಿಂದಾಗಿ ನಾವು ಮಹಾರಾಷ್ಟ್ರದೊಂದಿಗೆ ವಿಲೀನಗೊಳಿಸಬೇಕೆಂದು ಒತ್ತಾಯಿಸುತ್ತಿದ್ದೇವೆ,” ಎಂದು ಎಂಇಎಸ್‌ನ ಖಜಾಂಚಿ ಪ್ರಕಾಶ ಮಾರ್ಗಾಳೆ ಹೇಳಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“1956ರಲ್ಲಿ ಮಹಾರಾಷ್ಟ್ರದ ಗಡಿ ಪ್ರದೇಶಗಳನ್ನು ಕರ್ನಾಟಕಕ್ಕೆ ಸೇರಿಸಿದ ನಂತರ, ಮಹಾರಾಷ್ಟ್ರದ ಉನ್ನತ ನಾಯಕರಾದ ಆಚಾರ್ಯ ಅತ್ರೆ ಮತ್ತು ಮೃಣಾಲ್ ಗೋರ್ ಯಾವಾಗಲೂ ನಮ್ಮ ಅಭ್ಯರ್ಥಿಗಳನ್ನು ಬೆಂಬಲಿಸಿದರು. ಈ ಹಿಂದೆ ಮಹಾರಾಷ್ಟ್ರ ಕಾಂಗ್ರೆಸ್‌ನ ನಾಯಕರು ನಮ್ಮನ್ನು ಬೆಂಬಲಿಸುತ್ತಿದ್ದರು. ಆದರೆ, 2008ರಿಂದ ಕಾಂಗ್ರೆಸ್ ಮತ್ತು ಬಿಜೆಪಿಯ ಮುಖಂಡರು ಎಂಇಎಸ್ ಅಭ್ಯರ್ಥಿಗಳ ವಿರುದ್ಧ ಪ್ರಚಾರ ನಡೆಸಿದ್ದಾರೆ. ಮಹಾರಾಷ್ಟ್ರದಲ್ಲಿ ಒಂದೇ ದನಿಯಲ್ಲಿ ಮಾತನಾಡಿದ ಅವರು ಗಡಿ ಜಿಲ್ಲೆಗಳಿಗೆ ಬಂದಾಗ ಬೇರೆ ಬೇರೆ ಧ್ವನಿಯಲ್ಲಿ ಮಾತನಾಡಿದ್ದಾರೆ. ಅವರು ನಿಜವಾಗಿಯೂ ನಮ್ಮ ಹೋರಾಟಕ್ಕೆ ಬೆಂಬಲ ನೀಡಿದರೆ ಗಡಿ ಜಿಲ್ಲೆಗೆ ಬಂದು ಎಂಇಎಸ್ ಅಭ್ಯರ್ಥಿಗಳ ಪರ ಪ್ರಚಾರ ಮಾಡಬೇಕು,” ಎಂದು ಮಾರ್ಗಳೆ ಆಗ್ರಹಿಸಿದ್ದಾರೆ.

“ನಾವು ಇಡೀ ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಲು ಒತ್ತಾಯಿಸುವುದಿಲ್ಲ. ಮರಾಠಿ ಮಾತನಾಡುವ ಜನರು ಹೆಚ್ಚಿನ ಜನಸಂಖ್ಯೆಯಲ್ಲಿರುವ ಜಿಲ್ಲೆಯ 550 ಹಳ್ಳಿಗಳನ್ನು ಮತ್ತು ಇತರ ಎರಡು ಗಡಿ ಜಿಲ್ಲೆಗಳ 300ಕ್ಕೂ ಹೆಚ್ಚು ಹಳ್ಳಿಗಳನ್ನು ಮಾತ್ರ ಕೇಳುತ್ತಿದ್ದೇವೆ,” ಎಂದು ಅವರು ಹೇಳಿದ್ದಾರೆ.

“ಮರಾಠಿ ಮಾತನಾಡುವ ಜನರು ಹೆಚ್ಚಿರುವ ಬೆಳಗಾವಿ ಉತ್ತರ, ಬೆಳಗಾವಿ ದಕ್ಷಿಣ, ಬೆಳಗಾವಿ ಗ್ರಾಮಾಂತರ ಮತ್ತು ಖಾನಾಪುರ – ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಎಂಇಎಸ್ ನಿರ್ಧರಿಸಿದೆ. ನಮ್ಮ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಾಗಿದೆ,” ಎಂದು ಕಿನೇಕರ್ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಚುನಾವಣೆ 2023 | ಕಿತ್ತೂರು ಕರ್ನಾಟಕ: ಬಿಜೆಪಿ ಅಭ್ಯರ್ಥಿಗಳಿಗೆ ಬಿಸಿ ತಟ್ಟಲಿರುವ ಬಂಡಾಯ

ಶಿವಸೇನೆ (ಉದ್ಧವ್‌ ಠಾಕ್ರೆ ಬಣ) ಮತ್ತು ಎನ್‌ಸಿಪಿ ನಾಯಕರು ತಮ್ಮ ಪಕ್ಷಗಳ ಮುಖಂಡರೊಂದಿಗೆ ಚರ್ಚಿಸಿ, ಬೆಂಬಲ ನೀಡುವ ಬಗ್ಗೆ ನಿರ್ಧರಿಸುವುದಾಗಿ ಹೇಳಿವೆ. ಆದರೆ, ಕಾಂಗ್ರೆಸ್‌ ಮತ್ತು ಬಜೆಪಿ ನಾಯಕರು ಎಂಇಎಸ್‌ ಪರವಾಗಿ ಪ್ರಚಾರಕ್ಕೆ ಬರಲು ನಿರಾಕರಿಸಿವೆ.

“ಗಡಿ ಜಿಲ್ಲೆಗಳಲ್ಲಿ ನಮ್ಮದೇ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸುತ್ತಿರುವಾಗ ನಾವು ಎಂಇಎಸ್ ಅಭ್ಯರ್ಥಿಗಳನ್ನು ಬೆಂಬಲಿಸಲು ಸಾಧ್ಯವಾಗುವುದಿಲ್ಲ. ನಾವು ದೇಶದಲ್ಲಿ ಅಸ್ತಿತ್ವವನ್ನು ಹೊಂದಿರುವ ರಾಷ್ಟ್ರೀಯ ಪಕ್ಷ. ನಾವು ಎಂಇಎಸ್ ಉದ್ದೇಶವನ್ನು ಬೆಂಬಲಿಸುತ್ತೇವೆ. ಆದರೆ, ಅವರ ಅಭ್ಯರ್ಥಿಗಳನ್ನು ಬೆಂಬಲಿಸಲು ಸಾಧ್ಯವಿಲ್ಲ,” ಎಂದು ಮಹಾರಾಷ್ಟ್ರ ಕಾಂಗ್ರೆಸ್ ವಕ್ತಾರ ಅತುಲ್ ಲೋಂಧೆ ಹೇಳಿದ್ದಾರೆ.

“ಎಂಇಎಸ್ ತನ್ನ ಅಭ್ಯರ್ಥಿಗಳ ಪರ ಪ್ರಚಾರಕ್ಕಾಗಿ ನಮಗೆ ಆಹ್ವಾನ ನೀಡಿದರೆ, ನಾವು ಅದನ್ನು ನಮ್ಮ ಕೇಂದ್ರ ನಾಯಕತ್ವದ ಮುಂದೆ ಇಡುತ್ತೇವೆ. ಹೈಕಮಾಂಡ್‌ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತದೆ,” ಎಂದು ಬಿಜೆಪಿ ರಾಜ್ಯ ವಕ್ತಾರ ಮಾಧವ್ ಭಂಡಾರಿ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿಯಲ್ಲಿ ಬಿಜೆಪಿಗೆ ಹಿನ್ನಡೆ; ಮಾಲೀಕಯ್ಯ ಗುತ್ತೇದಾರ್ ಕಾಂಗ್ರೆಸ್‌ ಸೇರ್ಪಡೆ

ಲೋಕಸಭೆ ಚುನಾವಣೆಯ ವೇಳೆ ಕಲಬುರಗಿ ಕ್ಷೇತ್ರದಲ್ಲಿ ಬಿಜೆಪಿಗೆ ಹಿನ್ನಡೆ ಉಂಟಾಗಿದೆ. ಮಾಜಿ...

ನೇಹಾ ಕೊಲೆ ಪ್ರಕರಣ | ಹುಬ್ಬಳ್ಳಿ, ಬೆಳಗಾವಿಯಲ್ಲಿ ಚುನಾವಣೆ ಅಸ್ತ್ರ ಮಾಡಿಕೊಳ್ಳಲು ಬಿಜೆಪಿ ಯತ್ನ

ಹುಬ್ಬಳ್ಳಿ-ಧಾರವಾಡ ಪಾಲಿಕೆಯ ಕಾಂಗ್ರೆಸ್ ಸದಸ್ಯ ನಿರಂಜನ ಹಿರೇಮಠ ಪುತ್ರಿ ನೇಹಾ ಕೊಲೆ...

ಲೋಕಸಭೆ ಚುನಾವಣೆ | ಏ. 25, 26ರಂದು ನಂದಿ ಗಿರಿಧಾಮಕ್ಕೆ ಪ್ರವೇಶ ನಿರ್ಬಂಧ

ಏ.19 ರಿಂದ ದೇಶದಲ್ಲಿ ಮೊದಲ ಹಂತದ ಚುನಾವಣೆ ಆರಂಭವಾಗಿದೆ. ಕರ್ನಾಟಕದಲ್ಲಿ ಎರಡು...

ನೇಹಾ ಕೊಲೆಗೂ ರಾಜಕೀಯಕ್ಕೂ ಸಂಬಂಧವಿಲ್ಲ: ಸಚಿವ ಡಾ. ಜಿ ಪರಮೇಶ್ವರ್‌ ಸ್ಪಷ್ಟನೆ

ಹುಬ್ಬಳ್ಳಿಯ ಬಿವಿಬಿ ಇಂಜಿನಿಯರ್​​ ಕಾಲೇಜು ಆವರಣದಲ್ಲಿ ನಡೆದ ವಿದ್ಯಾರ್ಥಿನಿ ನೇಹಾ ಕೊಲೆ...