ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿಯಲ್ಲಿ ಅಸಮಾಧಾನ ಸ್ಪೋಟಗೊಂಡಿದೆ. ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ಇದೀಗ, ಬಿಜೆಪಿಗೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ರಾಜೀನಾಮೆ ನೀಡಿದ್ದಾರೆ.
ಶೆಟ್ಟರ್ ಅವರಿಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ನೀರಾಕರಿಸಿದೆ. ತಮಗೆ ಟಿಕೆಟ್ ನೀಡುವಂತೆ ಒತ್ತಾಯಿಸಲು ಶೆಟ್ಟರ್ ದೆಹಲಿವರೆಗೂ ಹೋಗಿದ್ದರು. ಆದರೂ, ಟಿಕೆಟ್ ಪಡೆಯುವಲ್ಲಿ ಅವರು ವಿಫಲರಾಗಿದ್ದರು. ಅವರು ಈ ಚುನಾವಣೆಯಲ್ಲಿ ಖಂಡಿತಾ ಸ್ಪರ್ಧಿಸುತ್ತೇನೆಂದು ಹೇಳಿದ್ದರು. ಅವರ ಮನವೊಲಿಸಲು ಬಿಜೆಪಿ ನಾಯಕರು ಭಾರೀ ಕಸರತ್ತು ಮಾಡಿದ್ದರು. ಆದರೂ, ಶೆಟ್ಟರ್ ತಮ್ಮ ನಿರ್ಧಾರದಿಂದ ಹೆಂದೆ ಸರಿಯಲಿಲ್ಲ. ಇದೀಗ, ಬಿಜೆಪಿ ರಾಜೀನಾಮೆ ನೀಡಿದ್ದಾರೆ.
ಹುಬ್ಬಳ್ಳಿ-ಧಾರವಾಡ ಕೇಂದ್ರ ಕ್ಷೇತ್ರವನ್ನು ಜಗದೀಶ್ ಶೆಟ್ಟರ್ ಪ್ರತಿನಿಧಿಸುತ್ತಿದ್ದರು. ಅವರಿಗೆ ಟಿಕೆಟ್ ಸಿಗದ ಕಾರಣ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಅವರು ಬೇರೊಂದು ಪಕ್ಷವನ್ನು ಸೇರುತ್ತಾರೆಯೇ ಅಥವಾ ಪಕ್ಷೇತರವಾಗಿಯೇ ಸ್ಪರ್ಧಿಸುತ್ತಾರೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.