ರಾಜ್ಯದಲ್ಲಿ ಕೆಲ ತಿಂಗಳುಗಳಿಂದ ಸದ್ದಿಲ್ಲದೆ ಸೈಲೆಂಟ್ ಆಗಿದ್ದ ಐಟಿ ಅಧಿಕಾರಿಗಳು, ಚುನಾವಣಾ ಸಮಯದಲ್ಲಿ ಮತ್ತೆ ಸದ್ದು ಮಾಡುತ್ತಿದ್ದಾರೆ. ರಾಜ್ಯಾದ್ಯಂತ ಹಲವೆಡೆ ಅದರಲ್ಲೂ ಕಾಂಗ್ರೆಸ್ ಮುಖಂಡರ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ.
ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದ ಕೆಜಿಎಫ್ ಬಾಬು ಮನೆ ಮೇಲೆ ದಾಳಿ ಮಾಡುವ ಮೂಲಕ ಐಟಿ ಅಧಿಕಾರಿಗಳು ಮತ್ತೆ ಸದ್ದು ಮಾಡಿದ್ದರು. ಈ ಬೆನ್ನಲ್ಲೇ ಬಾಗಲಕೋಟೆ, ಮಂಗಳೂರು, ಮೈಸೂರು ಸೇರಿದಂತೆ ರಾಜ್ಯದ 50 ಭಾಗಗಳಲ್ಲಿ ಕಾಂಗ್ರೆಸ್ ಮುಖಂಡರ ಮನೆ ಮೇಲೆ ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲಿಸಿದ್ದಾರೆ ಎಂದು ತಿಳಿದುಬಂದಿದೆ.
ಬಾಗಲಕೋಟೆ ಜಿಲ್ಲೆಯಲ್ಲಿ ಎರಡು ಕಡೆ ಐಟಿ ಅಧಿಕಾರಿಗಳು ನಡೆಸಿದ್ದಾರೆ. ನವನಗರದಲ್ಲಿರುವ ಬಾಲಾಜಿ ಸಕ್ಕರೆ ಕಾರ್ಖಾನೆ ನಿರ್ದೇಶಕ ಹೆಚ್.ಎಲ್ ಪಾಟೀಲ್ ಮನೆ ಮತ್ತು ಮುಧೋಳದ ಹನಮಂತಗೌಡ ಪಾಟೀಲ ಅವರ ಮನೆ ಏಲೆ ದಾಳಿ ನಡೆಸಿದ್ದಾರೆ. ಅವರಿಬ್ಬರೂ ಕಾಂಗ್ರೆಸ್ನಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಕೆಲವು ದಿನಗಳ ಹಿಂದೆ ಎಸ್.ಆರ್ ಪಾಟೀಲ್ ಅವರ ಭಾವಚಿತ್ರವಿದ್ದ ಗೋಡೆ ಗಡಿಯಾರ ಮತ್ತು ಟಿ-ಶರ್ಟ್ಗಳು ಪತ್ತೆಯಾಗಿದ್ದವು ಎಂದು ಹೇಳಲಾಗಿತ್ತು.
ಈ ಸುದ್ದಿ ಓದಿದ್ದೀರಾ?: ಕೆಜಿಎಫ್ ಬಾಬು ಮನೆ ಮೇಲೆ ಐಟಿ ದಾಳಿ ಅಂತ್ಯ; ದೂರು ದಾಖಲಿಸಿದ ಚುನಾವಣಾಧಿಕಾರಿಗಳು
ಅಲ್ಲದೆ, ಉಡುಪಿಯ ಉದ್ಯಮಿ ಜಿ ಶಂಕರ್ ಅವರ ನಿವಾಸ ಮತ್ತು ಕಚೇರಿ ಮೇಲೂ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅವರು ಅಕ್ರಮ ಹಣ ವಹಿವಾಟು ನಡೆಸಿದ್ದಾರೆಂದು ಆರೋಪಿಸಲಾಗಿದೆ.