ಚುನಾವಣೆ 2023 | ಚಾಮರಾಜನಗರದಲ್ಲಿ ವಾಟಾಳ್‌ ಸ್ಪರ್ಧೆ; ಸೋಮಣ್ಣಗೆ ಮತ್ತೊಂದು ಸವಾಲು!

Date:

Advertisements

ಚಾಮರಾಜನಗರ ವಿಧಾನಸಭಾ ಕ್ಷೇತ್ರ ಈಗ ‘ಹೈ-ವೋಲ್ಟೇಜ್‌’ ಕ್ಷೇತ್ರವಾಗಿ ಮಾರ್ಪಟ್ಟಿದೆ. ವರುಣಾ ಮತ್ತು ಚಾಮರಾಜನಗರ ಎರಡೂ ಕ್ಷೇತ್ರಗಳಲ್ಲಿ ಒಂದೊಂದು ಕಾಲಿಟ್ಟಿರುವ ಸಚಿವ ವಿ ಸೋಮಣ್ಣ, ಎರಡಲ್ಲಿ ಒಂದಾದರೂ ಗೆಲ್ಲಬೇಕೆಂದು ಯತ್ನಿಸುತ್ತಿದ್ದಾರೆ. ಚಾಮರಾಜನಗರದಲ್ಲಿ ಸೋಮಣ್ಣಗೆ ಕಾಂಗ್ರೆಸ್‌ ಪ್ರಬಲ ಪೈಪೋಟಿ ನೀಡಿದೆ. ಇದೀಗ, ಮತ್ತಷ್ಟು ಪೈಪೋಟಿ ನೀಡಲು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಭ್ಯರ್ಥಿಯಾಗಿ ವಾಟಾಳ್‌ ನಾಗರಾಜ್ ಕಣಕ್ಕಿಳಿಸಿದ್ದಾರೆ. ಚಾಮರಾಜನಗರ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.

ಬುಧವಾರ, ತನ್ನ ಬೆಂಬಲಿಗರೊಂದಿಗೆ ಚುನಾವಣಾಧಿಕಾರಿ ಕಚೇರಿಗೆ ತೆರಳಿದ ವಾಟಾಳ್‌ ನಾಗರಾಜ್‌ ನಾಮಪತ್ರ ಸಲ್ಲಿಸಿದ್ದಾರೆ. ಅಲ್ಲದೆ, ಇದು ತಮ್ಮ ಕೊನೆ ಚುನಾವಣೆ ಎಂದು ಹೇಳಿದ್ದಾರೆ.

ನಾಮಪತ್ರ ಸಲ್ಲಿಸಿ ಮಾತನಾಡಿದ ವಾಟಾಳ್, “ಮತದಾರರು ಯಾವುದೇ ಆಸೆ, ಆಮಿಷಗಗಳಿಗೆ ಒಳಗಾಗಬಾರದು. ಕ್ಷೇತ್ರದ ಅಭಿವೃದ್ಧಿಗಾಗಿ ನನಗೆ ಮತ ನೀಡುವ ಮೂಲಕ ಅವಕಾಶ ನೀಡಬೇಕು” ಎಂದು ಹೇಳಿದರು.

Advertisements

“ಬಿಜೆಪಿ, ಆರ್‌ಎಸ್‌ಎಸ್ ವಿರುದ್ಧ ಹೋರಾಟ ಮಾಡಲು ನಾನು ಸಮರ್ಥನಾಗಿದ್ದೇನೆ. ಚಾಮರಾಜನಗರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಕಣದಲ್ಲಿಲ್ಲ. ಹಾಗಾಗಿ, ಜೆಡಿಎಸ್‌ ನನ್ನನ್ನು ಬೆಂಬಲಿಸಬೇಕು. ಕಾಂಗ್ರೆಸ್‌ಗೆ ನಿಜವಾಗಲೂ ಜಾತ್ಯತೀತ ವಾದದ ಮೇಲೆ ನಂಬಿಕೆ ಇದ್ದರೆ, ಪ್ರಚಂಡ ಹೋರಾಟ ಮಾಡಬೇಕು. ಕ್ಷೇತ್ರದಲ್ಲಿ ನನ್ನ ವಿರುದ್ಧ ಅಭ್ಯರ್ಥಿ ಹಾಕಬಾರದು” ಎಂದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X