ಚುನಾವಣಾ ಅಕ್ರಮ | ₹147 ಕೋಟಿ ನಗದು, ₹375 ಕೋಟಿ ಮೌಲ್ಯದ ವಸ್ತುಗಳ ವಶ

Date:

Advertisements
  • 2018ರ ಚುನಾವಣೆಗೆ ಹೋಲಿಸಿದರೆ ಈ ಬಾರಿ 4.5 ಪಟ್ಟು ಹೆಚ್ಚಳ
  • ರಾಜ್ಯಾದ್ಯಂತ 2,896 ಎಫ್​ಐಆರ್​​ ದಾಖಲು; ಚುನಾವಣಾ ಆಯೋಗ

ಕರ್ನಾಟಕ ವಿಧಾನಸಭಾ ಚುನಾವಣೆಯ ಮತದಾನ ನಡೆಯುತಿದ್ದು, ರಾಜ್ಯದಲ್ಲಿ ಹಲವು ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಮತದಾರರನ್ನು ಸೆಳೆಯಲು ಹಣದ ಹೊಳೆಯನ್ನೇ ಹರಿಸಿದ್ದಾರೆ ಎಂಬುದಕ್ಕೆ ಚುನಾವಣಾ ಆಯೋಗ ವಶಪಡಿಸಿಕೊಂಡಿರುವ ಭಾರೀ ಮೊತ್ತದ ಹಣ, ಚಿನ್ನ ಮತ್ತು ವಸ್ತುಗಳೇ ಸಾಕ್ಷಿ.

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ನೀತಿ ಸಂಹಿತೆ ಜಾರಿಯಲ್ಲಿದ್ದು, ಈ ವೇಳೆ ಚುನಾವಣಾಧಿಕಾರಿಗಳು ಸಾಕಷ್ಟು ನಗದು ಮತ್ತು ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಅದು 2018ರ ಚುನಾವಣೆಗೆ ಹೋಲಿಸಿದರೆ ಈ ವರ್ಷ ವಶಪಡಿಸಿಕೊಂಡಿರುವ ಒಟ್ಟು ಮೌಲ್ಯ 4.5 ಪಟ್ಟು ಹೆಚ್ಚಳವಾಗಿದೆ.

ಚುನಾವಣಾ ಆಯೋಗ

ರಾಜ್ಯಾದ್ಯಂತ ಚುನಾವಣಾಧಿಕಾರಿಗಳು, ಐಟಿ ಅಧಿಕಾರಿಗಳ ದಾಳಿ ವೇಳೆ ಮತ್ತು ಚೆಕ್​ ಪೋಸ್ಟ್​ಗಳಲ್ಲಿ ಈವರೆಗೆ ಬರೋಬ್ಬರಿ ₹ 147 ಕೋಟಿ ಜಪ್ತಿ ಮಾಡಿದ್ದಾರೆ. ₹ 375 ಕೋಟಿ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಚುನಾವಣಾ ಆಯೋಗ ಅಧಿಕೃತ ಮಾಹಿತಿ ನೀಡಿದೆ.

Advertisements

ಇನ್ನು ಅಕ್ರಮವಾಗಿ ಹಣ ಸಂಗ್ರಹಿಸಿದ್ದ ನೂರಕ್ಕೂ ಅಧಿಕ ಕಡೆ ಐಟಿ ದಾಳಿ ನಡೆಸಿದ್ದು, ಬರೊಬ್ಬರಿ ₹ 42 ಕೋಟಿ ಹಣ ಸೀಜ್​ ಮಾಡಿದೆ. ವಿಜಿಲೆನ್ಸ್​, ಚೆಕ್​ ಪೋಸ್ಟ್​ಗಳಲ್ಲಿ ₹ 105 ಕೋಟಿ ನಗದು ಸೇರಿ ಒಟ್ಟು ₹147.46 ಕೋಟಿ  ವಶಪಡಿಸಿಕೊಳ್ಳಲಾಗಿದೆ.

ಚುನಾವಣೆ - ಚೆಕ್‌ ಪೋಸ್ಟ್

₹ 96.60 ಕೋಟಿಮೌಲ್ಯದ ಚಿನ್ನ ಹಾಗೂ ಬೆಳ್ಳಿ ಆಭರಣಗಳು. ಸೀರೆ, ಕುಕ್ಕರ್ ಸೇರಿ ₹ 24.21 ಕೋಟಿ ಮೌಲ್ಯದ ಹಲವು ಬಗೆಯ ಉಡುಗೊರೆಗಳು, ₹ 83.66 ಕೋಟಿ ಮೌಲ್ಯದ 22.27 ಲಕ್ಷ ಲೀಟರ್‌ ​ಮದ್ಯ, ₹ 23.67 ಕೋಟಿ ಮೌಲ್ಯದ ಮಾದಕ ವಸ್ತುಗಳು (ಡ್ರಗ್) ಸೀಜ್​ ಮಾಡಲಾಗಿದೆ. ಚುನಾವಣೆ ಅಕ್ರಮಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಒಟ್ಟು 2,896 ಎಫ್​ಐಆರ್​​ ದಾಖಲಾಗಿವೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.

2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಚುನಾವಣಾಧಿಕಾರಿಗಳು ಒಟ್ಟು ₹ 83.93 ಕೋಟಿ ಮೌಲ್ಯದ ವಸ್ತುಗಳು ಮತ್ತು ನಗದು ವಶಪಡಿಸಿಕೊಳ್ಳಲಾಗಿತ್ತು.

ಈ ಸುದ್ದಿ ಓದಿದ್ದೀರಾ? ಸ್ವಕ್ಷೇತ್ರದಲ್ಲಿ ಕೈ ಮುಗಿದು ಮತಭಿಕ್ಷೆ ಕೇಳಿದ ಎಚ್ಡಿಕೆ, ಡಿಕೆಶಿ, ಬೊಮ್ಮಾಯಿ: ಬಹಿರಂಗ ಪ್ರಚಾರಕ್ಕೆ ತೆರೆ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X