ಚುನಾವಣೆಯಲ್ಲಿ ಇವಿಎಂ, ಇಡಿ ದುರ್ಬಳಕೆ ಆಗಬಾರದು : ಬಿ ಕೆ ಹರಿಪ್ರಸಾದ್

Date:

Advertisements
  • ಖಾಸಗಿ ಕಾರು ಏರಿ ಹೊರಟ ಮುನಿರತ್ನ
  • ಕಮಲ ಪಡೆ ವಿರುದ್ಧ ಕುಟುಕಿದ ಹರಿಪ್ರಸಾದ್

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ವಿದ್ಯುನ್ಮಾನ ಯಂತ್ರ, ಜಾರಿ ನಿರ್ದೇಶನಾಲಯ ಮತ್ತು ಕಂದಾಯ ಇಲಾಖೆ ದುರ್ಬಳಕೆ ಆಗಬಾರದು ಎಂದು ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಬಿ ಕೆ ಹರಿಪ್ರಸಾದ್ ಹೇಳಿದ್ದಾರೆ.

ಮೇ 10ಕ್ಕೆ ರಾಜ್ಯ ವಿಧಾನಸಭಾ ಚುನಾವಣೆಯ ದಿನಾಂಕ ನಿಗದಿಯಾಗಿದೆ. ಬಿಜೆಪಿ ಇವಿಎಂ ಸೇರಿದಂತೆ ಕೆಲವು ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎನ್ನುವ ಆರೋಪ ಎದುರಿಸುತ್ತಾ ಬಂದಿದೆ. ಈ ನಡುವೆ ಬಿ ಕೆ ಹರಿಪ್ರಸಾದ್ ಕಮಲ ಪಡೆಗೆ ಕುಟುಕಿದ್ದಾರೆ.

ಚುನಾವಣಾ ಘೋಷಣೆ ಹಿನ್ನೆಲೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, “ಕಾಂಗ್ರೆಸ್‌ನೊಳಗೆ ಅಲ್ಲೋಲ ಕಲ್ಲೋಲ ಆಗುತ್ತದೆ ಎಂದು ಬಿಜೆಪಿ ಭಾವಿಸಿತ್ತು. ಆದರೆ, ನಾವು ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬರುತ್ತೇವೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Advertisements

“ಪ್ರಜಾಪ್ರಭುತ್ವದ ಹಬ್ಬದ ದಿನಾಂಕ ನಿಗದಿಯಾಗಿದೆ.‌ ಮೇ 10 ರಂದು ಕರ್ನಾಟಕದಲ್ಲಿ ಸರಿಯಾದ ಸಮಯಕ್ಕೆ ಚುನಾವಣೆ ಆಗಲಿದೆ. ‌ಮತ ಎಣಿಕೆಗೆ ಬಹಳ ಅಂತರ ಕೊಡದೇ ಒಂದೇ ಹಂತದಲ್ಲಿ ಮಾಡುವುದು ಒಳ್ಳೆಯ ನಿರ್ಣಯ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? 40% ಸರ್ಕಾರ ತೊಲಗಲಿ, ಕರ್ನಾಟಕ ಗೆಲ್ಲಲಿ: ರಣದೀಪ್ ಸುರ್ಜೇವಾಲ

“ಈ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬಹಳಷ್ಟು ಅನುಕೂಲವಾಗಲಿದೆ. ಚಿಲುಮೆ ಮತದಾರರ ಪಟ್ಟಿಯಲ್ಲಿ ಹೆಚ್ಚು ಕಡಿಮೆಯಾಗಿತ್ತು. ಬಿಜೆಪಿಯವರು ಹೆಚ್ಚಿ‌ನ ಅಂಶ ಮತದಾರರನ್ನು ಡಿಲೀಟ್ ಮಾಡಿಸಿದ್ದಾರೆ.‌ ಈ ಬಗ್ಗೆ ಚುನಾವಣಾ ಆಯೋಗ ನಿಷ್ಪಕ್ಷಪಾತವಾಗಿ ನಿರ್ಣಯ ತೆಗೆದುಕೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

ಖಾಸಗಿ ಕಾರಿನಲ್ಲಿ ಮುನಿರತ್ನ

ನೀತಿ ಸಂಹಿತೆ ಜಾರಿಯಾಗುವ ಮುನ್ಸೂಚನೆ ಇದ್ದ ಸಚಿವ ಮುನಿರತ್ನ ಅವರು ವಿಕಾಸಸೌಧದಲ್ಲಿನ ಪತ್ರಿಕಾಗೋಷ್ಠಿಗೆ ಸರ್ಕಾರಿ ವಾಹನ ತೊರೆದು ತಮ್ಮ ಖಾಸಗಿ ವಾಹನದಲ್ಲಿ ಹೋಗಿದ್ದಾರೆ. ತಮ್ಮ ಸರ್ಕಾರಿ ಕಾರಿನಲ್ಲಿ ಇದ್ದ ವಸ್ತುಗಳನ್ನು ಖಾಸಗಿ ಕಾರಿಗೆ ಶಿಫ್ಟ್ ಮಾಡುವಂತೆ ಸಿಬ್ಬಂದಿಗೆ ಸೂಚಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X