ಚುನಾವಣೆಯಲ್ಲಿ ಇವಿಎಂ, ಇಡಿ ದುರ್ಬಳಕೆ ಆಗಬಾರದು : ಬಿ ಕೆ ಹರಿಪ್ರಸಾದ್

Date:

  • ಖಾಸಗಿ ಕಾರು ಏರಿ ಹೊರಟ ಮುನಿರತ್ನ
  • ಕಮಲ ಪಡೆ ವಿರುದ್ಧ ಕುಟುಕಿದ ಹರಿಪ್ರಸಾದ್

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ವಿದ್ಯುನ್ಮಾನ ಯಂತ್ರ, ಜಾರಿ ನಿರ್ದೇಶನಾಲಯ ಮತ್ತು ಕಂದಾಯ ಇಲಾಖೆ ದುರ್ಬಳಕೆ ಆಗಬಾರದು ಎಂದು ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಬಿ ಕೆ ಹರಿಪ್ರಸಾದ್ ಹೇಳಿದ್ದಾರೆ.

- Advertisement -

ಮೇ 10ಕ್ಕೆ ರಾಜ್ಯ ವಿಧಾನಸಭಾ ಚುನಾವಣೆಯ ದಿನಾಂಕ ನಿಗದಿಯಾಗಿದೆ. ಬಿಜೆಪಿ ಇವಿಎಂ ಸೇರಿದಂತೆ ಕೆಲವು ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎನ್ನುವ ಆರೋಪ ಎದುರಿಸುತ್ತಾ ಬಂದಿದೆ. ಈ ನಡುವೆ ಬಿ ಕೆ ಹರಿಪ್ರಸಾದ್ ಕಮಲ ಪಡೆಗೆ ಕುಟುಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಚುನಾವಣಾ ಘೋಷಣೆ ಹಿನ್ನೆಲೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, “ಕಾಂಗ್ರೆಸ್‌ನೊಳಗೆ ಅಲ್ಲೋಲ ಕಲ್ಲೋಲ ಆಗುತ್ತದೆ ಎಂದು ಬಿಜೆಪಿ ಭಾವಿಸಿತ್ತು. ಆದರೆ, ನಾವು ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬರುತ್ತೇವೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

“ಪ್ರಜಾಪ್ರಭುತ್ವದ ಹಬ್ಬದ ದಿನಾಂಕ ನಿಗದಿಯಾಗಿದೆ.‌ ಮೇ 10 ರಂದು ಕರ್ನಾಟಕದಲ್ಲಿ ಸರಿಯಾದ ಸಮಯಕ್ಕೆ ಚುನಾವಣೆ ಆಗಲಿದೆ. ‌ಮತ ಎಣಿಕೆಗೆ ಬಹಳ ಅಂತರ ಕೊಡದೇ ಒಂದೇ ಹಂತದಲ್ಲಿ ಮಾಡುವುದು ಒಳ್ಳೆಯ ನಿರ್ಣಯ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? 40% ಸರ್ಕಾರ ತೊಲಗಲಿ, ಕರ್ನಾಟಕ ಗೆಲ್ಲಲಿ: ರಣದೀಪ್ ಸುರ್ಜೇವಾಲ

“ಈ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬಹಳಷ್ಟು ಅನುಕೂಲವಾಗಲಿದೆ. ಚಿಲುಮೆ ಮತದಾರರ ಪಟ್ಟಿಯಲ್ಲಿ ಹೆಚ್ಚು ಕಡಿಮೆಯಾಗಿತ್ತು. ಬಿಜೆಪಿಯವರು ಹೆಚ್ಚಿ‌ನ ಅಂಶ ಮತದಾರರನ್ನು ಡಿಲೀಟ್ ಮಾಡಿಸಿದ್ದಾರೆ.‌ ಈ ಬಗ್ಗೆ ಚುನಾವಣಾ ಆಯೋಗ ನಿಷ್ಪಕ್ಷಪಾತವಾಗಿ ನಿರ್ಣಯ ತೆಗೆದುಕೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

ಖಾಸಗಿ ಕಾರಿನಲ್ಲಿ ಮುನಿರತ್ನ

ನೀತಿ ಸಂಹಿತೆ ಜಾರಿಯಾಗುವ ಮುನ್ಸೂಚನೆ ಇದ್ದ ಸಚಿವ ಮುನಿರತ್ನ ಅವರು ವಿಕಾಸಸೌಧದಲ್ಲಿನ ಪತ್ರಿಕಾಗೋಷ್ಠಿಗೆ ಸರ್ಕಾರಿ ವಾಹನ ತೊರೆದು ತಮ್ಮ ಖಾಸಗಿ ವಾಹನದಲ್ಲಿ ಹೋಗಿದ್ದಾರೆ. ತಮ್ಮ ಸರ್ಕಾರಿ ಕಾರಿನಲ್ಲಿ ಇದ್ದ ವಸ್ತುಗಳನ್ನು ಖಾಸಗಿ ಕಾರಿಗೆ ಶಿಫ್ಟ್ ಮಾಡುವಂತೆ ಸಿಬ್ಬಂದಿಗೆ ಸೂಚಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜಸ್ಥಾನ | ಬಿಜೆಪಿಗೆ ಮುಖಭಂಗ; ಮಾಜಿ ಸಿಎಂ ಭದ್ರಕೋಟೆ ಭೇದಿಸಿದ ಕಾಂಗ್ರೆಸ್

ರಾಜಸ್ಥಾನದಲ್ಲಿ ನಡೆದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ...

ಭಾರತದ ಇತರ ಭಾಷೆಗಳನ್ನು ಗೌರವಿಸಿ, ರಕ್ಷಿಸಿದಾಗ ಮಾತ್ರ ಹಿಂದಿಯ ಪ್ರಗತಿಗೆ ಅರ್ಥ: ಅಮಿತ್ ಶಾ

ಭಾರತೀಯ ಇತರ ಭಾಷೆಗಳ ಗೌರವ, ಪ್ರಚಾರ ಮತ್ತು ರಕ್ಷಣೆಯನ್ನು ಖಚಿತಪಡಿಸಿಕೊಳ್ಳುವ ಮೂಲಕ...

ಬಂಗಾಳದ 252 ಮದರಸಾಗಳು ಬಂದ್; ಭಯೋತ್ಪಾದಕರ ಆಶ್ರಯತಾಣ ಎಂದ ಸಚಿವ: ಬಿಜೆಪಿ ಸರ್ಕಾರಕ್ಕೆ ಮುಸ್ಲಿಮರೇ ಗುರಿಯೇ?

ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ಬಿಜೆಪಿ ಸರ್ಕಾರವು ರಾಜ್ಯಾದ್ಯಂತ ಕಾರ್ಯಾಚರಣೆ ನಡೆಸುತ್ತಿರುವ ಮದರಸಾಗಳ...

ಬಿಜೆಪಿಯಲ್ಲಿ ಆಂತರಿಕ ಕುಸ್ತಿ; ಪ್ರತಾಪ್ ಸಿಂಹ – ನಾಗೇಂದ್ರ‌ ಬೀದಿ ಕಾಳಗ

ಮೈಸೂರು ಜಿಲ್ಲೆಯ ಟಿ. ನರಸೀಪುರ ಗಣೇಶೋತ್ಸವ ಮೆರವಣಿಗೆ ವಿಚಾರವಾಗಿ ಇನ್ಸ್‌ಪೆಕ್ಟರ್ ಧನಂಜಯ್‌...