ಬಿ ಎಲ್ ಸಂತೋಷ್ ವಿರುದ್ಧ ಸುಳ್ಳು ಸುದ್ದಿ ಸೃಷ್ಟಿ ಆರೋಪ; ದಿನೇಶ್‌ ಅಮಿನ್‌ಮಟ್ಟು ಸೇರಿ ಐವರ ವಿರುದ್ಧ ಎಫ್‌ಐಆರ್‌

Date:

  • ಬಿಜೆಪಿಯ ಬೆಂಗಳೂರು ಕೇಂದ್ರ ಜಿಲ್ಲೆಯ ಸಂಚಾಲಕ ಯಶವಂತರಿಂದ ದೂರು
  • ದೂರಿ‌ನ ಮೇರೆಗೆ ಮೈಸೂರು ನಗರ ಪೊಲೀಸರಿಂದ ದಿಲೀಪ್ ಗೌಡ ಬಂಧನ

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ವಿರುದ್ಧ ಸುಳ್ಳುಸುದ್ದಿ ಸೃಷ್ಟಿಸಿ ವೈರಲ್ ಮಾಡಿರುವ ಆರೋಪದ ಮೇಲೆ ಹಿರಿಯ ಪತ್ರಕರ್ತ ದಿನೇಶ್‌ ಅಮಿನ್‌ಮಟ್ಟು ಸೇರಿದಂತೆ ಐವರ ಮೇಲೆ ಬಿಜೆಪಿ ದೂರು ದಾಖಲಿಸಿದೆ.

ಭಾರತೀಯ ಜನತಾ ಪಕ್ಷದ ಕಾನೂನು ವಿಭಾಗದ ಬೆಂಗಳೂರು ಕೇಂದ್ರ ಜಿಲ್ಲೆಯ ಸಂಚಾಲಕ ಯಶವಂತ ಎಂ ಅವರು, ದಿನೇಶ್‌ ಅಮಿನ್‌ಮಟ್ಟು, ಬೈರಪ್ಪ ಹರೀಶ್‌ಕುಮಾರ್‌, ಹೇಮಂತ್‌ ಕುಮಾರ್‌, ದಿಲೀಪ್‌ ಗೌಡ ಹಾಗೂ ಬಿಂದು ಗೌಡ ಅವರ ಮೇಲೆ ಬೆಂಗಳೂರು ಉತ್ತರ ವಿಭಾಗದ ಸಿಇಎಸ್‌ ಕ್ರೈಂ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.  

“ಮೇ 5ರಂದು ದಿನಪತ್ರಿಕೆಯಲ್ಲಿ ಬಂದಿರುವ ಹಾಗೇ ಸುಳ್ಳು ಸುದ್ದಿಯಾದ ‘ನಾವು ಹಿಂದುತ್ವದಲ್ಲಿ ಮುಂದುವರಿಯುತ್ತೇವೆ, ಲಿಂಗಾಯತರ ಅಗತ್ಯವಿಲ್ಲ: ಬಿ ಎಲ್‌ ಸಂತೋಷ್‌’ ಎಂಬ ಒಂದು ವರದಿ ಬಂದಿರುವ ಹಾಗೇ ಸೃಷ್ಟಿಸಿ, ಅದನ್ನು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್‌ ಮಾಡಿದ್ದು, ಲಿಂಗಾಯತ ಸಮುದಾಯವನ್ನು ಬಿಜೆಪಿ ವಿರುದ್ಧ ಎತ್ತಿ ಕಟ್ಟುವ ಸಲುವಾಗಿ ಸುಳ್ಳು ಸುದ್ದಿ ಸೃಷ್ಟಿಸಿದ್ದಾರೆ” ಎಂದು ಯಶವಂತ ಎಂ ದೂರಿನಲ್ಲಿ ಆರೋಪಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಬಿಜೆಪಿ ನೀಡಿದ ದೂರಿ‌ನ ಮೇರೆಗೆ ದಿಲೀಪ್ ಗೌಡ ಅವರನ್ನು ಈಗಾಗಲೇ ಮೈಸೂರು ನಗರ ಪೊಲೀಸರು ಬಂಧಿಸಿದ್ದಾರೆ.

ಬಿ ಎಲ್‌ ಸಂತೋಷ್

ಬಿ ಎಲ್ ಸಂತೋಷ್ ವಿರುದ್ಧ ಸುಳ್ಳು ಸುದ್ದಿ ಸೃಷ್ಟಿಗೆ ದಿಲೀಪ್ ಗೌಡ ಬಂಧನಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಹಿರಿಯ ಪತ್ರಕರ್ತೆ ಹೇಮಾ ವೆಂಕಟ್ ಬಿಜೆಪಿಯ ನಡೆಯನ್ನು ಟೀಕಿಸಿ ಪೋಸ್ಟ್‌ ಹಾಕಿದ್ದು, “ಸುಳ್ಳು ಸುದ್ದಿ ಹರಡುವುದನ್ನು, ಸತ್ಯವನ್ನು ತಿರುಚುವುದನ್ನು ನಾನು ಬೆಂಬಲಿಸಲ್ಲ. ಆದರೆ ಒಂದು ರಾಷ್ಟ್ರೀಯ ಪಕ್ಷದ ಅಧ್ಯಕ್ಷ, ಮತ್ತವರ ಇಡೀ ಕುಟುಂಬವನ್ನು ಕತ್ತರಿಸಿ ಹಾಕುತ್ತೇನೆ ಎಂದು ಹೇಳಿಕೆ ನೀಡಿರುವ ರೌಡಿ, ಮೇಲಾಗಿ ‘ಸಂಸ್ಕೃತಿ ರಕ್ಷಕರ ಪಕ್ಷ’ ಬಿಜೆಪಿಯ ಅಭ್ಯರ್ಥಿ ಮಣಿಕಂಠ ರಾಥೋಡ್‌ನ ಬಂಧನವಾಗದಿದ್ದರೆ, ಚುನಾವಣಾ ಕಣದಿಂದ ಅನರ್ಹಗೊಳಿಸದಿದ್ದರೆ ಅದು ಈ ನೆಲದ ಕಾನೂನಿಗೆ ಮಾಡುವ ಘೋರ ಅವಮಾನ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಿಜೆಪಿಯಿಂದ ಖರ್ಗೆ ಕುಟುಂಬ ಹತ್ಯೆಗೆ ಸಂಚು, ಮೋದಿ ಮೌನಕ್ಕೆ ಶರಣು : ಸುರ್ಜೇವಾಲ ಗಂಭೀರ ಆರೋಪ

ಮುಂದುವರಿದು, “ಇದೇ ಬೆದರಿಕೆ ಮುಖ್ಯಮಂತ್ರಿ ಬೊಮ್ಮಾಯಿ ಅವರ ಮೇಲೆ ಬಂದಿದ್ದರೆ, ಸರ್ಕಾರ ಸುಮ್ಮನಿರುತ್ತಿತ್ತೇ? ಸುಳ್ಳು ಸುದ್ದಿ ಹರಡಿದವನ ಬಂಧನ ಮಾಡುವಲ್ಲಿ ಪೊಲೀಸರಿಗೆ ಇರುವ ಅದೇ ಬದ್ಧತೆ, ಕೊಲೆ ಬೆದರಿಕೆ ಹಾಕಿದವನನ್ನು ಬಂಧಿಸುವಲ್ಲಿಯೂ ಇರಬೇಕಲ್ಲ? ಬೆಂಗಳೂರಿನ ಆರ್ ಆರ್ ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ತನ್ನ ಎದುರಾಳಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರ ಮೇಲೆ ನಡೆಸುತ್ತಿರುವ ದಾಳಿ ನೋಡಿಯೂ ಸುಮ್ಮನಿರುವ ಚುನಾವಣಾ ಆಯೋಗದ ಅಧಿಕಾರಿಗಳು ಯಾವ ಸಂದೇಶ ರವಾನಿಸುತ್ತಿದ್ದಾರೆ? ನಿನ್ನೆ ರಾತ್ರಿ ಪುಂಡನೊಬ್ಬ ಕೆಲವೇ ಬೆಂಬಲಿಗರ ಜೊತೆಗಿದ್ದ ಕುಸುಮಾ ಅವರನ್ನು ನಡು ರಸ್ತೆಯಲ್ಲಿ ತಳ್ಳಿರುವ ದೃಶ್ಯ ಹರಿದಾಡುತ್ತಿದೆ. ಮತದಾನ ಮುಗಿಯುವ ಮುನ್ನ ಅಭ್ಯರ್ಥಿಗಳ ಕೊಲೆ ನಡೆದರೂ ಅಚ್ಚರಿಯಿಲ್ಲ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಮುವಾದಿ ಮಾತನ್ನಾಡುವ ಪ್ರಧಾನಿ ದೇಶಕ್ಕೆ ಬೇಕೆ?: ಸಚಿವ ಎಂ.ಸಿ ಸುಧಾಕರ್

'ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಂಗಳಸೂತ್ರ ಕಸಿಯುತ್ತಾರೆ, ದೇಶದ ಸಂಪತ್ತು ಹೆಚ್ಚು ಮಕ್ಕಳನ್ನು...

ಯಡಿಯೂರಪ್ಪ ಬಣದಲ್ಲಿ ಗುರುತಿಸಿಕೊಂಡಿದ್ದ ಕೆ ಪಿ ನಂಜುಂಡಿ ಕಾಂಗ್ರೆಸ್‌ ಸೇರ್ಪಡೆ

ವಿಧಾನ ಪರಿಷತ್ ಸ್ಥಾನಕ್ಕೆ ಮತ್ತು ಬಿಜೆಪಿಯ ಪಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವ...

ಬೆಂ. ದಕ್ಷಿಣ ಲೋಕಸಭಾ ಕ್ಷೇತ್ರ | 16 ಕಡೆ ಶೋಧ ಕಾರ್ಯ: 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಪತ್ತೆ

ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕಳೆದ ಎರಡು ದಿನಗಳಿಂದ ಬೆಂಗಳೂರು ದಕ್ಷಿಣ...

ಬೆಂಗಳೂರು | ಅಗ್ನಿ ಅವಘಡ: ₹5 ಕೋಟಿ ಮೌಲ್ಯದ ಬಟ್ಟೆ, 40 ಬೈಕ್ ಭಸ್ಮ

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಸಿಂಗಸಂದ್ರದ ಮಣಿಪಾಲ್​ ಕಂಟ್ರಿ ರೋಡ್​​ನಲ್ಲಿರುವ ಟಿಂಬರ್​ ಯಾರ್ಡ್​ನಲ್ಲಿ...