ಪ್ರಧಾನಿ ಮೋದಿ ವಿಷ ಸರ್ಪವಿದ್ದಂತೆ : ಮಲ್ಲಿಕಾರ್ಜುನ ಖರ್ಗೆ

Date:

  • ಬಿಜೆಪಿ ಸಾಧನೆ ಬರೀ 40% ಭ್ರಷ್ಟಾಚಾರವಷ್ಟೇ
  • 15 ಲಕ್ಷ ರೂಪಾಯಿ ಅದಾನಿ ಮನೆಯಲ್ಲಿರಬೇಕು

ಪ್ರಧಾನಿ ಮೋದಿ ವಿಷ ಸರ್ಪವಿದ್ದಂತೆ, ವಿಷ ಸರ್ಪ ನೆಕ್ಕಿದ್ರೆ ಸತ್ತು ಹೋಗ್ತಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಗದಗ ಜಿಲ್ಲೆಯ ನರೇಗಲ್‌ನಲ್ಲಿ ಮಾತನಾಡಿರುವ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಅಭ್ಯರ್ಥಿ ಜೆ ಎಸ್‌ ಪಾಟೀಲ್ ಅವರ ಪರ ಮತಯಾಚಿಸಿದ್ದಾರೆ.

ಆರ್‌ಎಸ್‌ಎಸ್‌ ಮತ್ತು ಬಿಜೆಪಿ ವಿರುದ್ಧ ಹರಿಹಾಯ್ದಿರುವ ಮಲ್ಲಿಕಾರ್ಜುನ ಖರ್ಗೆ, “ಅವರ ಮನೆಯಲ್ಲಿ ದೇಶಕ್ಕಾಗಿ ಒಂದು ನಾಯಿಯೂ ಸತ್ತಿಲ್ಲ. ದೇಶಕ್ಕಾಗಿ ಬಿಜೆಪಿ ಕೊಡುಗೆ ಏನೆಂಬುವುದನ್ನು ಹೇಳಲಿ” ಎಂದು ಕಿಡಿಕಾರಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಉಚಿತ ಅಕ್ಕಿ ನೀಡುವ ಯೋಜನೆ ಜಾರಿಗೆ ತಂದಿದ್ದು ಕಾಂಗ್ರೆಸ್. ನರೇಗಾ ಮಾಡಿದ್ದು ನಾವು. ರಾಜ್ಯದಲ್ಲಿ ಬಿಜೆಪಿ ಸಾಧನೆ ಬರೀ 40%. ಅದೇ ಕಳ್ಳರನ್ನು ಮೋದಿ ತಮ್ಮ ಪಕ್ಕ ಕೂರಿಸಿಕೊಳ್ಳುತ್ತಾರೆ” ಎಂದು ಹರಿಹಾಯ್ದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಹಾಸನ ಕ್ಷೇತ್ರ | ದಾಸ ಒಕ್ಕಲಿಗರ ನಡುವಿನ ಕಾದಾಟವಾದರೂ, ಮುಸ್ಲಿಂ ಮತದಾರರೆ ನಿರ್ಣಾಯಕ

“2014ಕ್ಕಿಂತ ಮೊದಲು ಮೋದಿ ಸ್ವಿಸ್‌ ಬ್ಯಾಂಕಿನ ಹಣ ತಂದು 15 ಲಕ್ಷ ರೂಪಾಯಿ ಕೊಡುವುದಾಗಿ ಹೇಳಿದ್ದರು. ಇನ್ನೂ ಆ ದುಡ್ಡು ಬಯಲಿಗೆ ಬರಲಿಲ್ಲ. ಬಹುಶಃ ಅವೆಲ್ಲ ದುಡ್ಡು ಅದಾನಿ ಬಳಿ ಇಟ್ಟಿರಬೇಕು” ಎಂದು ವ್ಯಂಗ್ಯವಾಡಿದ್ದಾರೆ.

“ಡಬಲ್ ಇಂಜಿನ್ ಎರಡು ಕಡೆ ಫೇಲ್ ಆಗಿದೆ. ಡಬಲ್ ಇಂಜಿನ್ ಯಾಕೆ ನೌಕರಿ ಕೊಡ್ತಿಲ್ಲ. ಮೋದಿ ದೊಡ್ಡ ಸುಳ್ಳುಗಾರ. ನಮ್ಮ ಸರ್ಕಾರ ಇದ್ದಾಗ ದೊಡ್ಡ ದೊಡ್ಡ ಡ್ಯಾಂ, ದೊಡ್ಡ ದೊಡ್ಡ ನೀರಾವರಿ ಯೋಜನೆ ಮಾಡಿದ್ದೇವೆ. ಒಂಬತ್ತು ವರ್ಷದಲ್ಲಿ‌ ಮೋದಿ ಏನ್ ಮಾಡಿದ್ದಾರೆ” ಎಂದು ಪ್ರಶ್ನಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜಸ್ಥಾನ | ಬಿಜೆಪಿ ವಿರುದ್ಧ ಬಂಡಾಯವೆದ್ದ 26 ವರ್ಷದ ಸ್ವತಂತ್ರ ಅಭ್ಯರ್ಥಿಗೆ ಭಾರಿ ಮುನ್ನಡೆ

ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಬಂಡಾಯವೆದ್ದು ಸ್ಪರ್ಧಿಸಿದ್ದ ಅಭ್ಯರ್ಥಿಯೊಬ್ಬರು ಭಾರಿ...

ರಾಜಸ್ಥಾನ | ಬಿಜೆಪಿ ಮುನ್ನಡೆ ಕಾಯ್ದುಕೊಂಡಂತೆ ಸಿಎಂ ಸ್ಥಾನಕ್ಕೆ ಮೂವರ ಪೈಪೋಟಿ!

ರಾಜಸ್ಥಾನ ರಾಜ್ಯದ 199 ವಿಧಾನಸಭಾ ಕ್ಷೇತ್ರಗಳ ಪೈಕಿ ಮಧ್ಯಾಹ್ನ 12 ಗಂಟೆ...

ಛತ್ತೀಸ್‌ಗಢ ಮತ ಎಣಿಕೆ: ಕ್ಷಣದಿಂದ ಕ್ಷಣಕ್ಕೆ ಕಾಂಗ್ರೆಸ್ – ಬಿಜೆಪಿ ನಡುವೆ ತೀವ್ರ ಜಿದ್ದಾಜಿದ್ದಿ

ಛತ್ತೀಸ್‌ಗಢ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕುತೂಹಲದಿಂದ ಕೂಡಿದ್ದು ಕಾಂಗ್ರೆಸ್ ಹಾಗೂ...

ಒಲಿಪಿಂಕ್ ಪದಕ ವಿಜೇತ ರಾಜವರ್ಧನ್ ಸಿಂಗ್ ರಾಥೋಡ್ ಹಿನ್ನಡೆ

ರಾಜಸ್ಥಾನ ವಿಧಾನಸಭೆ ಚುನಾವಣೆಯ ಆರಂಭಿಕ ಸುತ್ತಿನ ಮತ ಎಣಿಕೆಯಲ್ಲಿ  ಬಿಜೆಪಿ 105...