- ಬಿಜೆಪಿ ಸಾಧನೆ ಬರೀ 40% ಭ್ರಷ್ಟಾಚಾರವಷ್ಟೇ
- 15 ಲಕ್ಷ ರೂಪಾಯಿ ಅದಾನಿ ಮನೆಯಲ್ಲಿರಬೇಕು
ಪ್ರಧಾನಿ ಮೋದಿ ವಿಷ ಸರ್ಪವಿದ್ದಂತೆ, ವಿಷ ಸರ್ಪ ನೆಕ್ಕಿದ್ರೆ ಸತ್ತು ಹೋಗ್ತಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
ಗದಗ ಜಿಲ್ಲೆಯ ನರೇಗಲ್ನಲ್ಲಿ ಮಾತನಾಡಿರುವ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಅಭ್ಯರ್ಥಿ ಜೆ ಎಸ್ ಪಾಟೀಲ್ ಅವರ ಪರ ಮತಯಾಚಿಸಿದ್ದಾರೆ.
ಆರ್ಎಸ್ಎಸ್ ಮತ್ತು ಬಿಜೆಪಿ ವಿರುದ್ಧ ಹರಿಹಾಯ್ದಿರುವ ಮಲ್ಲಿಕಾರ್ಜುನ ಖರ್ಗೆ, “ಅವರ ಮನೆಯಲ್ಲಿ ದೇಶಕ್ಕಾಗಿ ಒಂದು ನಾಯಿಯೂ ಸತ್ತಿಲ್ಲ. ದೇಶಕ್ಕಾಗಿ ಬಿಜೆಪಿ ಕೊಡುಗೆ ಏನೆಂಬುವುದನ್ನು ಹೇಳಲಿ” ಎಂದು ಕಿಡಿಕಾರಿದ್ದಾರೆ.
“ಉಚಿತ ಅಕ್ಕಿ ನೀಡುವ ಯೋಜನೆ ಜಾರಿಗೆ ತಂದಿದ್ದು ಕಾಂಗ್ರೆಸ್. ನರೇಗಾ ಮಾಡಿದ್ದು ನಾವು. ರಾಜ್ಯದಲ್ಲಿ ಬಿಜೆಪಿ ಸಾಧನೆ ಬರೀ 40%. ಅದೇ ಕಳ್ಳರನ್ನು ಮೋದಿ ತಮ್ಮ ಪಕ್ಕ ಕೂರಿಸಿಕೊಳ್ಳುತ್ತಾರೆ” ಎಂದು ಹರಿಹಾಯ್ದಿದ್ದಾರೆ.
ಈ ಸುದ್ದಿ ಓದಿದ್ದೀರಾ? ಹಾಸನ ಕ್ಷೇತ್ರ | ದಾಸ ಒಕ್ಕಲಿಗರ ನಡುವಿನ ಕಾದಾಟವಾದರೂ, ಮುಸ್ಲಿಂ ಮತದಾರರೆ ನಿರ್ಣಾಯಕ
“2014ಕ್ಕಿಂತ ಮೊದಲು ಮೋದಿ ಸ್ವಿಸ್ ಬ್ಯಾಂಕಿನ ಹಣ ತಂದು 15 ಲಕ್ಷ ರೂಪಾಯಿ ಕೊಡುವುದಾಗಿ ಹೇಳಿದ್ದರು. ಇನ್ನೂ ಆ ದುಡ್ಡು ಬಯಲಿಗೆ ಬರಲಿಲ್ಲ. ಬಹುಶಃ ಅವೆಲ್ಲ ದುಡ್ಡು ಅದಾನಿ ಬಳಿ ಇಟ್ಟಿರಬೇಕು” ಎಂದು ವ್ಯಂಗ್ಯವಾಡಿದ್ದಾರೆ.
“ಡಬಲ್ ಇಂಜಿನ್ ಎರಡು ಕಡೆ ಫೇಲ್ ಆಗಿದೆ. ಡಬಲ್ ಇಂಜಿನ್ ಯಾಕೆ ನೌಕರಿ ಕೊಡ್ತಿಲ್ಲ. ಮೋದಿ ದೊಡ್ಡ ಸುಳ್ಳುಗಾರ. ನಮ್ಮ ಸರ್ಕಾರ ಇದ್ದಾಗ ದೊಡ್ಡ ದೊಡ್ಡ ಡ್ಯಾಂ, ದೊಡ್ಡ ದೊಡ್ಡ ನೀರಾವರಿ ಯೋಜನೆ ಮಾಡಿದ್ದೇವೆ. ಒಂಬತ್ತು ವರ್ಷದಲ್ಲಿ ಮೋದಿ ಏನ್ ಮಾಡಿದ್ದಾರೆ” ಎಂದು ಪ್ರಶ್ನಿಸಿದ್ದಾರೆ.