ಹಾಸನ | ಬಿಜೆಪಿ ಅಭ್ಯರ್ಥಿಯ ಬೃಹತ್‌ ರ‍್ಯಾಲಿ; ಖರ್ಚಿನ ಲೆಕ್ಕವಿದೆಯೇ ಎನ್ನುತ್ತಿದ್ದಾರೆ ಸ್ಥಳೀಯರು

Date:

  • ಬೃಹತ್ ರ‍್ಯಾಲಿಯಲ್ಲಿ ಐವತ್ತು ಸಾವಿರಕ್ಕೂ ಹೆಚ್ಚು ಮಂದಿ ಭಾಗಿ
  • ಚೆಕ್‌ಪೋಸ್ಟ್‌ಗಳಲ್ಲಿ ನಡೆಯುತ್ತಿರುವ ವಾಹನಗಳ ತಪಾಸಣೆ

ವಿಧಾನಸಭಾ ಚುನಾವಣೆಯ ದಿನಾಂಕ ಈಗಾಗಲೇ ನಿಗದಿಯಾಗಿದ್ದು, ನೀತಿ ಸಂಹಿತೆಯೂ ಜಾರಿಯಲ್ಲಿದೆ. ಈ ವೇಳೆ ಯಾವ ಅಕ್ರಮವೂ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಹಾಸನ ಜಿಲ್ಲೆಯ ಹಲವೆಡೆ ಚೆಕ್‌ಪೋಸ್ಟ್‌ಗಳನ್ನು ತೆರೆದು ವಾಹನಗಳ ತಪಾಸಣೆ ನಡೆಸಲಾಗುತ್ತಿದೆ. ಚೆಕ್‌ಪೋಸ್ಟ್‌ಗಳಲ್ಲಿ ಸಿಸಿಟಿವಿಗಳನ್ನು ಅಳವಡಿಸಲಾಗಿದೆ.

ಈ ನಡುವೆ, ಹಾಸನ ನಗರದಲ್ಲಿ ಶುಕ್ರವಾರ ಬಿಜೆಪಿ ಅಭ್ಯರ್ಥಿ, ಶಾಸಕ ಪ್ರೀತಂ ಗೌಡ ಬೃಹತ್ ರ‍್ಯಾಲಿ ನಡೆಸಿದ್ದಾರೆ. ರ‍್ಯಾಲಿಗೆ ಸರಿಸುಮಾರು ಐವತ್ತು ಸಾವಿರಕ್ಕೂ ಹೆಚ್ಚು ಜನ ಸೇರಿರುವುದಾಗಿ ಮಾತುಗಳು ಕೇಳಿಬರುತ್ತಿವೆ. ಐವತ್ತು ಸಾವಿರಕ್ಕೂ ಅಧಿಕ ಮಂದಿ ಸುಮ್ಮನೇ ಬಂದಿಲ್ಲ. ಒಬ್ಬರಿಗೆ ₹500ರಿಂದ ₹1000 ಹಣ ಕೊಟ್ಟು ಕರೆದುಕೊಂಡು ಬಂದಿದ್ದಾರೆಂದು ಸ್ಥಳೀಯರು ಆರೋಪಿಸಿದ್ದಾರೆ.

“ಐವತ್ತು ಸಾವಿರಕ್ಕೂ ಹೆಚ್ಚಿನ ಜನಕ್ಕೆ ಹಂಚುವ ಹಣ ಎಲ್ಲಿಂದ ಬಂತು..? ಈಗ ಇರುವ ಚೆಕ್ ಪೋಸ್ಟ್‌ಗಳನ್ನು ದಾಟಿಕೊಂಡು ಅಕ್ರಮ ಹಣ ಕ್ಷೇತ್ರಕ್ಕೆ ಬಂದಿತೇ..? ಅಷ್ಟೂ ಮಂದಿಗೂ ಹಂಚಿರುವ ಟೋಪಿಗಳು ಎಲ್ಲಿಂದ ಬಂದವು” ಎಂಬುದು ಸ್ಥಳೀಯರ ಪ್ರಶ್ನೆಯಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಹೆಸರು ಹೇಳಲಿಚ್ಛಿಸದ ಹಾಸನ ನಿವಾಸಿಯೊಬ್ಬರು ಈ ದಿನ.ಕಾಮ್‌ ಜೊತೆ ಮಾತನಾಡಿದ್ದು, “ಟೋಪಿಗಳನ್ನು ಕ್ಷಣದಲ್ಲೇ ತರಿಸಿದ್ದಾರೆ ಅಂದರೆ ಸಹಸ್ರಾರು ಟೋಪಿಗಳನ್ನು ಹೇಗೆ ತರಿಸಲಾಯಿತು? ಅಥವಾ ಈ ಮೊದಲೇ ಎಲ್ಲಾದರೂ ಸ್ಟಾಕ್ ಮಾಡಿದ್ದರಾ? ಹಾಗೆ ಮಾಡಿದ್ದರೆ ಯಾಕೆ ಅದನ್ನು ಅಧಿಕಾರಿಗಳು ಪತ್ತೆ ಹಚ್ಚಿಲ್ಲ?” ಎಂದು ಪ್ರಶ್ನಿಸಿದ್ದಾರೆ.

“ಹಳೆಬೀಡು, ಬೇಲೂರುಗಳಲ್ಲಿ ಇದೇ ಪಕ್ಷದ ಅಭ್ಯರ್ಥಿಯದ್ದು ಎಂದು ತಿಳಿದುಬಂದಿದ್ದ ವಸ್ತುಗಳನ್ನು ಗೊಡೌನ್‌ಗಳಲ್ಲಿ ವಶ ಪಡಿಸಿಕೊಳ್ಳಲಾಗಿತ್ತು. ಪುನಃ ಇಲ್ಲಿ ಹೇಗೆ ಬಂದವು? ಟೋಪಿಗಳನ್ನು ಕೊಂಡು ತಂದ ಬಿಲ್ ತೋರಿಸಬಲ್ಲರೇ? ಊಟ ಕೂಡ ಪ್ಯಾಕೆಟ್ ಮೂಲಕ ಹಂಚುವುದು ಎಲ್ಲೆಡೆ ಕಾಣುತ್ತಿತ್ತು. ಅದರ ಖರ್ಚಿನ ವಿವರವೇನು?” ಎಂದು ಅವರು ಕೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಜೆಡಿಎಸ್ ಎರಡನೇ ಪಟ್ಟಿ ಬಿಡುಗಡೆ : ಹಾಸನಕ್ಕೆ ಅಭ್ಯರ್ಥಿಯಾದ ಸ್ವರೂಪ್

ಒಟ್ಟಾರೆಯಾಗಿ ಕೋಟಿಗಳ ಲೆಕ್ಕದಲ್ಲಿ ಹಣ ಖರ್ಚು ಮಾಡಲಾಗಿದೆ. ಈ ಚುನಾವಣಾ ನೀತಿಸಂಹಿತೆ ಕಾಲದಲ್ಲಿ ಹೀಗೆ ಲೆಕ್ಕವಿಲ್ಲದೇ ಕಾರ್ಯಕ್ರಮ ನಡೆಸಲು ಸಾಧ್ಯವೇ? ಎಂಬುದು ಜನಸಾಮಾನ್ಯರ ಪ್ರಶ್ನೆಯಾಗಿದೆ.

“ಹೇಗಾದರೂ ರಾಜಕೀಯ ಪ್ರಚಾರ ಮಾಡಿಕೊಳ್ಳಲಿ. ಆದರೆ, ಕೋಟಿಗಟ್ಟಲೆ ಹಣದ ಲೆಕ್ಕ ಪತ್ರಗಳು ತಿಳಿಯದಿದ್ದಲ್ಲಿ ಚುನಾವಣೆ ಹಿಡಿತಕ್ಕೆ ಸಿಗದಂತಾಗುತ್ತದೆ” ಎಂಬುದು ಹಾಸನ ನಗರದ ಜನಸಾಮಾನ್ಯರ ಅಭಿಪ್ರಾಯವಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾಂಗ್ರೆಸ್‌ ಕೈ ಜಾರಿದ ರಾಜಸ್ಥಾನ- ವಾಡಿಕೆ ತಪ್ಪಿಸದೆ ಪಕ್ಷ ಬದಲಿಸಿದ ಮತದಾರರು

ರಾಜಸ್ಥಾನದಲ್ಲಿ ಪ್ರತಿ ಅವಧಿಗೂ ಸರ್ಕಾರ ಬದಲಾಯಿಸುವ ರೂಢಿಯಿದೆ ಹಾಲಿ ಚುನಾವಣೆಯಲ್ಲಿ...

ತೆಲಂಗಾಣ ಫಲಿತಾಂಶ: ಕೆಸಿಆರ್ ಸರ್ವಾಧಿಕಾರಕ್ಕೆ ಏಟು; ಕಾಂಗ್ರೆಸ್ ಗ್ಯಾರಂಟಿಗಳಿಗೆ ಓಟು

2014ರಿಂದಲೂ ಕಾಂಗ್ರೆಸ್ ತೆಲಂಗಾಣದ ಗದ್ದುಗೆ ಮೇಲೆ ಕಣ್ಣಿಟ್ಟಿತ್ತು. ಈ ಬಾರಿ ಕರ್ನಾಟಕದಲ್ಲಿ...

ರಾಜಸ್ಥಾನ | ಬಿಜೆಪಿ ವಿರುದ್ಧ ಬಂಡಾಯವೆದ್ದ 26 ವರ್ಷದ ಸ್ವತಂತ್ರ ಅಭ್ಯರ್ಥಿಗೆ ಭಾರಿ ಮುನ್ನಡೆ

ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಬಂಡಾಯವೆದ್ದು ಸ್ಪರ್ಧಿಸಿದ್ದ ಅಭ್ಯರ್ಥಿಯೊಬ್ಬರು ಭಾರಿ...

ರಾಜಸ್ಥಾನ | ಬಿಜೆಪಿ ಮುನ್ನಡೆ ಕಾಯ್ದುಕೊಂಡಂತೆ ಸಿಎಂ ಸ್ಥಾನಕ್ಕೆ ಮೂವರ ಪೈಪೋಟಿ!

ರಾಜಸ್ಥಾನ ರಾಜ್ಯದ 199 ವಿಧಾನಸಭಾ ಕ್ಷೇತ್ರಗಳ ಪೈಕಿ ಮಧ್ಯಾಹ್ನ 12 ಗಂಟೆ...