ಹಾಸನ | ಎನ್.ಆರ್ ಸಂತೋಷ್‌ ಬೆಂಬಲಿಗರ ಆಕ್ರೋಶ; ಬಿಜೆಪಿ ಬಾವುಟ, ಫ್ಲೆಕ್ಸ್‌ಗಳಿಗೆ ಬೆಂಕಿ

Date:

Advertisements
  • ಬಿಜೆಪಿ ಅಭ್ಯರ್ಥಿ ಜಿ.ವಿ ಬಸವರಾಜು 5 ಸಾವಿರ ಮತ ಪಡೆಯಲು ಸಾಧ್ಯವಿಲ್ಲ
  • ʼಬಿಜೆಪಿ ಸೋಲಲಿ ಎಂದು ಗಡ್ಡ ಬೋಳಿಸಿ ಬೆಂಗಳೂರಿನ ಬಿಜೆಪಿ ಕಚೇರಿಗೆ ಕಳುಹಿಸಿತ್ತೇನೆʼ

ಅರಸೀಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಎನ್.ಆರ್ ಸಂತೋಷ್‌ ಅವರಿಗೆ ಟಿಕೆಟ್ ತಪ್ಪಿದ್ದರಿಂದ ಬೆಂಬಲಿಗರು ಆಕ್ರೋಶಗೊಂಡಿದ್ದು, ಬಿಜೆಪಿ ಬಾವುಟಗಳು, ಫ್ಲೆಕ್ಸ್‌ಗಳನ್ನು ಸುಟ್ಟು ಹಾಕಿದ್ದಾರೆ. 

ಹಾಸನ ಜಿಲ್ಲೆ ಅರಸೀಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಎನ್.ಆರ್ ಸಂತೋಷ್‌ ಬೆಂಬಲಿಗರು ಬಿಜೆಪಿ ಫ್ಲೆಕ್ಸ್‌ಗಳನ್ನು ಹರಿದು ಹಾಕಿದ್ದು, ಯಡಿಯೂರಪ್ಪ, ವಿಜಯೇಂದ್ರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಬಿಜೆಪಿ ಟಿಕೆಟ್ ನೀಡಿರುವ ಜಿ.ವಿ ಬಸವರಾಜು 5 ಸಾವಿರ ಮತ ಪಡೆಯಲು ಸಾಧ್ಯವಿಲ್ಲ. ಇಡೀ ಅರಸೀಕೆರೆ ಕ್ಷೇತ್ರದಲ್ಲಿ ಬಿಜೆಪಿ ಪಕ್ಷವನ್ನು ಹಾಳು ಮಾಡಿದ್ದಾರೆ” ಎಂದು ಆರೋಪಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಅರಸೀಕೆರೆ | ಕೈ ತಪ್ಪಿದ ಬಿಜೆಪಿ ಟಿಕೆಟ್‌; ಜೆಡಿಎಸ್‌ನತ್ತ ಎನ್‌ ಆರ್‌ ಸಂತೋಷ್‌

“ನಾನು ಎನ್.ಆರ್ ಸಂತೋಷ್ ಗೆಲ್ಲಲಿ ಎಂದು ಗಡ್ಡ ಬಿಟ್ಟಿದ್ದೆ. ಈಗ ಅವರಿಗೆ ಟಿಕೆಟ್ ನೀಡಿಲ್ಲ. ಬಿಜೆಪಿ ಸೋಲಲಿ ಎಂದು ಗಡ್ಡ ಬೋಳಿಸಿ ಬೆಂಗಳೂರಿನ ಬಿಜೆಪಿ ಕಚೇರಿಗೆ ಕಳುಹಿಸಿತ್ತೇನೆ” ಎಂದು ಸಂತೋಷ್ ಬೆಂಬಲಿಗ ರಂಗನಾಥ್ ಅಸಮಾಧಾನ ವ್ಯಕ್ತಪಡಿಸಿದರು.

ಈ ಮಧ್ಯೆ ಎನ್‌.ಆರ್‌. ಸಂತೋಷ್‌ ಬೆಂಬಲಿಗರ ಜೊತೆ ಸಭೆ ನಡೆಸಿದ್ದು, “ಸೋಮವಾರ ನಾಮಪತ್ರ ಸಲ್ಲಿಸುತ್ತೇನೆ. ಜೆಡಿಎಸ್‌ನಿಂದ ಬಿ.ಫಾರಂ ದೊರೆತಲ್ಲಿ ಜೆಡಿಎಸ್‌ನಿಂದ ಇಲ್ಲವೇ ಪಕ್ಷೇತರವಾಗಿ ಸ್ಪರ್ಧೆ ಮಾಡುತ್ತೇನೆ” ಎಂದು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಧ್ಯಪ್ರದೇಶ ಚುನಾವಣೆ | ಆಡಳಿತ ವಿರೋಧಿ ಅಲೆಯ ನಡುವೆಯೂ ಬಿಜೆಪಿ ಜಯಭೇರಿ

ಮಧ್ಯಪ್ರದೇಶದಲ್ಲಿ ಬಿಜೆಪಿ ಉಗ್ರ ಹಿಂದುತ್ವ ಪ್ರತಿಪಾದಿಸಿದರೆ, ಕಾಂಗ್ರೆಸ್‌ನ ಕಮಲನಾಥ್ ಸಾಫ್ಟ್ ಹಿಂದುತ್ವದ...

ಛತ್ತೀಸ್‌ಗಡ: ಹಗರಣಗಳ ಆರೋಪಕ್ಕೆ ಸಿಲುಕಿ ಅಧಿಕಾರ ಕಳೆದುಕೊಂಡ ಕಾಂಗ್ರೆಸ್

ಛತ್ತೀಸ್‌ಗಢ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿ ರಾಜ್ಯದಲ್ಲಿ ಮತ್ತೆ ಅಧಿಕಾರ...

ಕಾಂಗ್ರೆಸ್‌ ಕೈ ಜಾರಿದ ರಾಜಸ್ಥಾನ- ವಾಡಿಕೆ ತಪ್ಪಿಸದೆ ಪಕ್ಷ ಬದಲಿಸಿದ ಮತದಾರರು

ರಾಜಸ್ಥಾನದಲ್ಲಿ ಪ್ರತಿ ಅವಧಿಗೂ ಸರ್ಕಾರ ಬದಲಾಯಿಸುವ ರೂಢಿಯಿದೆ ಹಾಲಿ ಚುನಾವಣೆಯಲ್ಲಿ...

ತೆಲಂಗಾಣ ಫಲಿತಾಂಶ: ಕೆಸಿಆರ್ ಸರ್ವಾಧಿಕಾರಕ್ಕೆ ಏಟು; ಕಾಂಗ್ರೆಸ್ ಗ್ಯಾರಂಟಿಗಳಿಗೆ ಓಟು

2014ರಿಂದಲೂ ಕಾಂಗ್ರೆಸ್ ತೆಲಂಗಾಣದ ಗದ್ದುಗೆ ಮೇಲೆ ಕಣ್ಣಿಟ್ಟಿತ್ತು. ಈ ಬಾರಿ ಕರ್ನಾಟಕದಲ್ಲಿ...

Download Eedina App Android / iOS

X