ಹಾಸನ | ಕುಟುಂಬ ಸಹಿತ ಮತ ಚಲಾಯಿಸಿದ ಅಭ್ಯರ್ಥಿಗಳು

Date:

Advertisements

ಕರ್ನಾಟಕ ವಿಧಾನಸಭಾ ಚುನಾವಣೆ ಆರಂಭವಾಗಿದ್ದು, ಹಾಸನ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳು ಕುಟುಂಬ ಸಮೇತರಾಗಿ ಬಂದು ಮತ ಚಲಾಯಿಸಿದ್ದಾರೆ.

ಹಾಸನ ವಿಧಾನಸಭಾ ಕ್ಷೇತ್ರದ ಶಾಸಕ, ಬಿಜೆಪಿ ಅಭ್ಯರ್ಥಿ ಪ್ರೀತಂ ಗೌಡ ತಮ್ಮ ಕುಟುಂಬಸ್ಥರೊಂದಿಗೆ ಬಂದು ನಗರದ ಎಂಜಿ ರಸ್ತೆಯ ಬಿಜಿಎಸ್ ಶಾಲೆಯಲ್ಲಿ ಮತದಾನ ಮಾಡಿದ್ದಾರೆ.

ಪ್ರೀತಂಗೌಡ ಕುಟುಂಬ
ಮತ ಚಲಾಯಿಸಿದ ಪ್ರೀತಂ ಗೌಡ ಮತ್ತು ಪತ್ನಿ

ಅರಕಲಗೂಡು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮಾಜಿ ಸಚಿವ ಎ ಮಂಜು ಅವರು ಹನ್ಯಾಳು ಗ್ರಾಮದಲ್ಲಿ ತಮ್ಮ ಕುಟುಂಬದ ಸದಸ್ಯರೊಂದಿಗೆ ಮತ ಚಲಾಯಿಸಿದ್ದಾರೆ.

Advertisements
ಎ ಮಂಜು
ಮತ ಚಲಾಯಿಸಿದ ಜೆಡಿಎಸ್‌ ಅಭ್ಯರ್ಥಿ ಎ ಮಂಜು

ಅರಸೀಕೆರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಎಂ ಶಿವಲಿಂಗೇಗೌಡ ಅವರು ಮತದಾನ ಮಾಡಲು ಕುಟುಂಬದೊಂದಿಗೆ ಆಗಮಿಸಿದ್ದು, ಅರಸೀಕೆರೆಯ ಮಾರುತಿ ನಗರದಲ್ಲಿರುವ ಸರ್ಕಾರಿ ಶಾಲೆಯ ಮತಗಟ್ಟೆಯಲ್ಲಿ ಸಾಮಾನ್ಯರಂತೆ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ್ದಾರೆ.  

ಶಿವರಾಮೇಗೌಡ ಕುಟುಂಬ
ಅರಸೀಕೆರೆ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಕೆ ಎಂ ಶಿವಲಿಂಗೇಗೌಡ

ಹೊಳೆನರಸೀಪುರ ಕ್ಷೇತ್ರದ ಶಾಸಕ, ಜೆಡಿಎಸ್‌ ಅಭ್ಯರ್ಥಿ ಎಚ್‌.ಡಿ ರೇವಣ್ಣ ಮತ್ತವರ ಕುಟುಂಬಸ್ಥರು ಪಡುವಲಹಿಪ್ಪೆ ಮತಗಟ್ಟೆಯಲ್ಲಿ ಮತ ಚಲಾಯಿಸಿದ್ದು, ಸಂಸತ್ ಸದಸ್ಯ ಪ್ರಜ್ವಲ್ ರೇವಣ್ಣ, ಶಾಸಕ ಹೆಚ್.ಡಿ ರೇವಣ್ಣ, ವಿಧಾನ ಪರಿಷತ್‌ ಸದಸ್ಯ ಸೂರಜ್ ರೇವಣ್ಣ ಹಾಗೂ ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷೆ ಭವಾನಿ ರೇವಣ್ಣ ಮತ ಚಲಾಯಿಸಿದ್ದಾರೆ.

ರೇವಣ್ಣ ಅವರ ಕುಟುಂಬ
ಹೊಳೆನರಸೀಪುರ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಎಚ್‌ ಡಿ ರೇವಣ್ಣ ಅವರ ಕುಟುಂಬ

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಬಿಜೆಪಿ ಡೇಟಾ ಕಾಲ್ ಸೆಂಟರ್ ಮೇಲೆ ಪೊಲೀಸರ ದಾಳಿ

ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ಪತ್ನಿ ಚನ್ನಮ್ಮ ಅವರೊಂದಿಗೆ ಪಡುವಲಹಿಪ್ಪೆ ಮತಗಟ್ಟೆಯಲ್ಲಿ ಮತದಾನ ಮಾಡಿದ್ದಾರೆ.

ಪತ್ನಿ ಜೊತೆ ಬಂದ ದೇವೇಗೌಡರು
ಹೊಳೆನರಸೀಪುರ ಕ್ಷೇತ್ರದಲ್ಲಿ ಪತ್ನಿ ಜೊತೆ ಮತ ಚಲಾಯಿಸಿದ ದೇವೇಗೌಡರು
ಕುಟುಂಬ ಸಹಿತ ಮತ ಚಲಾಯಿಸಿದ ಅಭ್ಯರ್ಥಿಗಳು 2
ಹಾಸನ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಮೂರು ಪಕ್ಷದ ಅಭ್ಯರ್ಥಿಗಳು

ಬೇಲೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹುಲ್ಲಳ್ಳಿ ಸುರೇಶ್ ಅವರು ತಮ್ಮ ಕುಟುಂಬದೊಂದಿಗೆ ಬಂದು ಬೇಲೂರು ವಾರ್ಡ್ 9ರಲ್ಲಿ ಮತದಾನ ಮಾಡಿದ್ದಾರೆ.

ಹುಲ್ಲಳ್ಳಿ ಸುರೇಶ್‌ ಅವರ ಕುಟುಂಬ
ಬೇಲೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹುಲ್ಲಳ್ಳಿ ಸುರೇಶ್

ಸಕಲೇಶಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಿಮೆಂಟ್‌ ಮಂಜು‌ ಮತದಾನ ಮಾಡಿದ್ದು, ಜೆಡಿಎಸ್‌ ಅಭ್ಯರ್ಥಿ ಎಚ್‌ ಕೆ ಕುಮಾರಸ್ವಾಮಿ ಅವರು ಕುಟುಂಬ ಸಹಿತ ಮತದಾನ ಮಾಡಿದ್ದಾರೆ.

ಸಿಮೆಂಟ್‌ ಮಂಜು
ಸಕಲೇಶಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಿಮೆಂಟ್‌ ಮಂಜು
ಎಚ್‌ ಕೆ ಕುಮಾರಸ್ವಾಮಿ
ಸಕಲೇಶಪುರ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಎಚ್‌ ಕೆ ಕುಮಾರಸ್ವಾಮಿ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X