ನರೇಂದ್ರ ಮೋದಿಗೆ ಖಡಕ್ ಸವಾಲೆಸೆದ ಜಗದೀಶ್ ಶೆಟ್ಟರ್

Date:

Advertisements
  • ಪಕ್ಷದಲ್ಲಿ ಬದಲಾವಣೆ ಬಯಸುವ ಮೋದಿ ತಾವೂ ಅದಕ್ಕೆ ಒಳಪಡುತ್ತಾರಾ?
  • ಜನಮನ್ನಣೆ ಇರುವವರೆಗೂ ರಾಜಕೀಯದಲ್ಲಿರಬೇಕು ಎಂದ ಜಗದೀಶ್ ಶೆಟ್ಟರ್

ಇನ್ನೊಬ್ಬರನ್ನು ಅಧಿಕಾರದ ಆಸೆಯಿಂದ ಬೇರೆ ಕಡೆ ಹೋದರು ಎನ್ನುವ ನರೇಂದ್ರ ಮೋದಿ ಅವರು, ತಾವೂ ಅಧಿಕಾರದಿಂದ ದೂರ ಸರಿಯುತ್ತಾರಾ? ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಪ್ರಶ್ನಿಸಿದರು.

ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಜಗದೀಶ್ ಶೆಟ್ಟರ್, ನರೇಂದ್ರ ಮೋದಿ ಅವರು ನಾಲ್ಕು ಬಾರಿ ಸಿಎಂ ಎರಡು ಬಾರಿ ಪ್ರಧಾನಿಯಾಗಿದ್ದಾರೆ. ಅವರು ಈಗ ರಾಜಕೀಯ ಬಿಡ್ತಾರಾ..? ಅದು ಸಾಧ್ಯವಿಲ್ಲ ಇನ್ನೊಮ್ಮೆ ಪ್ರಧಾನಿಯಾಗಲು ಪ್ರಯತ್ನ ಮಾಡುತ್ತಾರೆ. ಆದರೆ ಬೇರೆಯವರು ಅಧಿಕಾರಕ್ಕಾಗಿ ಅನ್ಯ ಪಕ್ಷಕ್ಕೆ ಹೋಗುತ್ತಾರೆಂದು ಪಕ್ಷ ಬಿಟ್ಟವರ ಬಗ್ಗೆ ಮೋದಿ ಹೇಳುತ್ತಾರೆ ಎಂದು ಶೆಟ್ಟರ್ ಪ್ರಧಾನಿಗಳನ್ನು ಕುಟುಕಿದರು.

ನಾನು ಏನೋ ಆಗಬೇಕೆಂಬ ಆಸೆಯಿಂದ ಕಾಂಗ್ರೆಸ್ ಸೇರಿಲ್ಲ. ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಬಿಜೆಪಿಯವರು ಮಾಡಿದ ಮೋಸದಿಂದ ಕಾಂಗ್ರೆಸ್ ಸೇರಿದೆ. ಶಾಸಕನಾದರೆ ಮನಸ್ಸಿಗೆ ಸಮಾಧಾನ ಆಗುತ್ತದೆ ಎಂದು ಪಕ್ಷ ಬದಲಾಯಿಸಿದೆ. ಇದೇ ವಿಚಾರವನ್ನು ಬಿಜೆಪಿಯವರಿಗೆ ಹೇಳಿದ್ದೆ. ಆದರೆ ಅವರಾರೂ ಇದಕ್ಕೆ ಗಮನ ಕೊಡದೆ ಅಪಮಾನಿಸಿದರು ಎಂದು ಶೆಟ್ಟರ್ ಹೇಳಿದರು.

Advertisements

ರಾಜಕೀಯ ಎನ್ನುವುದು ಜನರು ನೀಡುವ ಆಶೀರ್ವಾದ. ಹೀಗಾಗಿ ಜನಾಶೀರ್ವಾದ ಇರುವವರೆಗೂ ರಾಜಕೀಯದಲ್ಲಿ ಇರಬೇಕು ಎಂದು ಜಗದೀಶ್ ಶೆಟ್ಟರ್ ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ?:ನಾವು ಸ್ಪಷ್ಟ ಬಹುಮತ ಪಡೆಯುತ್ತೇವೆ; ಈ ಮಾತಿಗೆ ನಾನು ಈಗಲೂ ಬದ್ಧ : ಸಿಎಂ ಬೊಮ್ಮಾಯಿ

ಬಿಜೆಪಿ ಹಾಗೂ ಸಿಎಂ ಬೊಮ್ಮಾಯಿ ವಿರುದ್ದ ವಾಗ್ದಾಳಿ ನಡೆಸಿದ ಶೆಟ್ಟರ್, ಉತ್ತರ ಕರ್ನಾಟಕದವರೇ ಸಿಎಂ ಆದರೂ ಅಭಿವೃದ್ಧಿ ಮಾಡಿಲ್ಲ. ಸರ್ಕಾರದ ಭ್ರಷ್ಟಾಚಾರ, ಬೆಲೆ ಏರಿಕೆ ಜನರಿಗೆ ಬೇಸರ ಮೂಡಿಸಿದೆ. ಸರ್ಕಾರದ ಯೋಜನೆಗಳು ಜನರಿಗೆ ತಲುಪಲಿಲ್ಲ. ಮೀಸಲಾತಿಯನ್ನೂ ಸಮರ್ಪಕವಾಗಿ ಅನುಷ್ಠಾನ ಮಾಡಲಿಲ್ಲ, ಈ ಎಲ್ಲ ಕಾರಣಗಳಿಂದ ಜನ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದರು ಎಂದು ಶೆಟ್ಟರ್ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X