ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರುವ ಬದಲು ಪಕ್ಷೇತರರಾಗಬಹುದಿತ್ತು : ಬಿ ವೈ ವಿಜಯೇಂದ್ರ

Date:

  • ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಗೆ ವಿಜಯೇಂದ್ರ ಬೇಸರ
  • ಯಡಿಯೂರಪ್ಪ ಕೇವಲ ವ್ಯಕ್ತಿಯಲ್ಲ ಒಂದು ಶಕ್ತಿ ಎಂದ ಬಿವೈವಿ

ಲಿಂಗಾಯತ ವೀರಶೈವರೆಂದು ಜಾತಿ ಒಡೆಯಲು ಹೋದ ಕಾಂಗ್ರೆಸ್ ಪಕ್ಷ ಸೇರುವ ಬದಲು ಜಗದೀಶ್ ಶೆಟ್ಟರ್ ಪಕ್ಷೇತರರಾಗಬಹುದಿತ್ತು ಎಂದು ಬಿಜೆಪಿ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು.

ಮೈಸೂರಿನಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಶೆಟ್ಟರ್ ಹಿರಿಯರು ಅವರ ಬಗ್ಗೆ ಕೀಳಾಗಿ ಮಾತನಾಡುವುದಿಲ್ಲ. ಆದರೆ ವೀರೇಂದ್ರ ಪಾಟೀಲ್ ಅವರಂತಹ ದೊಡ್ಡ ನಾಯಕರನ್ನೇ ಸರಿಯಾಗಿ ನಡೆಸಿಕೊಳ್ಳದ ಕಾಂಗ್ರೆಸ್ ಇವರಿಗೇನು ಸ್ಥಾನಮಾನ ಕೊಡುತ್ತದೆಂದು ಆ ಪಕ್ಷ ಸೇರಿದರೋ ತಿಳಿಯದು ಎಂದರು.

ಅವರು ಕಾಂಗ್ರೆಸ್ ಸೇರಿದ್ದರ ಬಗ್ಗೆ ನೋವಿದೆ. ಬೇರೆ ಬೇರೆ ಜಾತಿಗಳನ್ನು ಒಡೆಯಲು ಪ್ರಯತ್ನಿಸಿದ್ದ ಕಾಂಗ್ರೆಸ್ ಪಕ್ಷವನ್ನ ಜಗದೀಶ್ ಶೆಟ್ಟರ್ ಸೇರಿದ್ದು ನಿಜಕ್ಕೂ ದುರಂತ. ಸಮಾಜ ಸಮಾಜಗಳನ್ನು ಒಡೆದು ಬೆಂಕಿ ಹಾಕುವ ಪಕ್ಷ ಕಾಂಗ್ರೆಸ್ ಎಂದು ಕಿಡಿಕಾರಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇನ್ನು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ದೇಶದಲ್ಲಿ ಕಾಂಗ್ರೆಸ್ ಪಕ್ಷ ದಿವಾಳಿಯಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಹೈಕಮಾಂಡ್‌ಗೆ ಎಟಿಎಂ ಆಗಲು ಪಿತೂರಿ ನಡೆಸಿದೆ. ಇದಕ್ಕೆ ರಾಜ್ಯದ ಜನ ಅವಕಾಶ ನೀಡುವುದಿಲ್ಲ ಎಂದರು.

ಯಡಿಯೂರಪ್ಪ, ಕಾಮನ್ ಮ್ಯಾನ್ ಸಿಎಂ ಬಸವರಾಜ ಬೊಮ್ಮಾಯಿ ಅವರು ಮಾಡಿದ ಅಭಿವೃದ್ಧಿ ಕೆಲಸ ಬಿಜೆಪಿಗೆ ಸ್ಪಷ್ಟ ಬಹುಮತ ತಂದು ಕೊಡುತ್ತದೆ. ಬಿಜೆಪಿ ಒಬ್ಬರು ಇಬ್ಬರ ಮೇಲೆ ಡಿಪೆಂಡ್ ಆಗಿಲ್ಲ. ಇದು ಕಾರ್ಯಕರ್ತರ ಪಕ್ಷ ಎಂದರು.

ಇನ್ನು ತಮ್ಮ ತಂದೆ ಪಕ್ಷದ ಹಿರಿಯ ನಾಯಕ ಬಿಎಸ್‌ವೈ ಅವರನ್ನು ಪಕ್ಷ ಮೂಲೆಗುಂಪು ಮಾಡುತ್ತಿದೆ. ಬಳಸಿ ಬಿಸಾಡುವಂತೆ ನಡೆದುಕೊಳ್ಳುತ್ತದೆ ಎನ್ನುವ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಯಡಿಯೂರಪ್ಪ ಒಂದು ಶಕ್ತಿ ಇದ್ದಂತೆ. ಅವರನ್ನು ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ?:“ನಮ್ಮಲ್ಲಿ ಮಾತನಾಡೋಕೆ ಪ್ರತಾಪ್ ಸಿಂಹನಂತವರು ಇದ್ದಾರೆ ನಾನೇಕೆ ಮಾತನಾಡಲಿ” : ಬಿ ಎಲ್ ಸಂತೋಷ್

ಬಳಿಕ ಜೆಡಿಎಸ್ ಮೇಲೂ ವಾಗ್ಪ್ರಹಾರ ನಡೆಸಿದ ಅವರು, ಜೆಡಿಎಸ್ ಪಕ್ಷ ಅತಂತ್ರ ಪರಿಸ್ಥಿತಿ ಕನಸು ಕಾಣುತ್ತಿದೆ. ಪ್ರಜ್ಞಾವಂತ ಮತದಾರರು ಬಿಜೆಪಿಯನ್ನು ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ತರುತ್ತಾರೆ ಎಂದರು.

ವರುಣಾ ಕ್ಷೇತ್ರದಲ್ಲಿನ ಪ್ರಚಾರ ಕಾರ್ಯದ ಬಗ್ಗೆ ಮಾತನಾಡಿದ ಬಿಜೆಪಿ ಉಪಾಧ್ಯಕ್ಷರು ವರುಣ ಜನ ನನ್ನನ್ನು ರಾಜ್ಯಕ್ಕೆ ಪರಿಚಯ ಮಾಡಿಸಿದವರು. ವರುಣ ಕ್ಷೇತ್ರದ ಕಾರ್ಯಕರ್ತರ ಸಭೆ ನಡೆಸಿದ್ದೇನೆ. ಈ ಬಾರಿ ವರುಣ ಮತದಾರರು ಬದಲಾವಣೆ ಬಯಸಿದ್ದಾರೆ. ಮತ್ತೆ ವರುಣಗೆ ನಾನು ಪ್ರಚಾರಕ್ಕೆ ಬರುತ್ತೇನೆ ಎಂದು ಹೇಳಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಯಗೊಂಡಿರುವ ಪ್ರಧಾನಿ ವೇದಿಕೆಯಲ್ಲೇ ಕಣ್ಣೀರು ಹಾಕಬಹುದು: ರಾಹುಲ್ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ನಡೆಸಿರುವ ವಾಗ್ದಾಳಿಗೆ ತಿರುಗೇಟು ನೀಡಿರುವ...

ರಣಹೇಡಿ ನಾನಲ್ಲ, ಗಿಫ್ಟ್ ಕೂಪನ್ ಕೊಡುವವರು ರಣಹೇಡಿಗಳು: ಡಿಕೆಶಿಗೆ ಕುಮಾರಸ್ವಾಮಿ ತಿರುಗೇಟು

ರಣಹೇಡಿ ನಾನಲ್ಲ, ನೇರವಾಗಿ ಚುನಾವಣೆ ಎದುರಿಸಲಾಗದೆ ರಾತ್ರೋರಾತ್ರಿ ಮತದಾರರಿಗೆ QR ಕೋಡ್...

ಸತ್ಯ ಹರಿಶ್ಚಂದ್ರನ ಮೊಮ್ಮಗ ತರ ಕುಮಾರಸ್ವಾಮಿ ಮಾತಾಡ್ತಾರೆ: ಡಿ ಕೆ ಶಿವಕುಮಾರ್ ವಾಗ್ದಾಳಿ

ಕುಮಾರಸ್ವಾಮಿ ಅವರಿಗೆ ಮಾನ ಮರ್ಯಾದೆ ಇದೆಯೇ?, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿಯವರು...

ಕೋಮು ದ್ವೇಷ ಭಾಷಣ; ಮೋದಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಚು.ಆಯೋಗಕ್ಕೆ 93 ನಿವೃತ ಅಧಿಕಾರಿಗಳ ಪತ್ರ

ರಾಜಸ್ಥಾನದ ಬನ್ಸ್‌ವಾರಾದಲ್ಲಿ ಏಪ್ರಿಲ್ 21ರಂದು ನಡೆದ ಚುನಾವಣಾ ರ್‍ಯಾಲಿಯಲ್ಲಿ ಪ್ರಧಾನಿ ನರೇಂದ್ರ...