ಜೆಡಿಎಸ್ ಎರಡನೇ ಪಟ್ಟಿ ಬಿಡುಗಡೆ : ಹಾಸನಕ್ಕೆ ಅಭ್ಯರ್ಥಿಯಾದ ಸ್ವರೂಪ್

Date:

Advertisements
  • ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ
  • ಸ್ವರೂಪ್ ಪಾಲಾದ ಹಾಸನ ವಿಧಾನಸಭಾ ಕ್ಷೇತ್ರ

ಹಾಸನದ ಟಿಕೆಟ್ ಸಲುವಾಗಿ ಜೆಡಿಎಸ್‌ನಲ್ಲಿ ಎದ್ದಿದ್ದ ಅಂತೆ ಕಂತೆಗಳ ಲೆಕ್ಕಾಚಾರಕ್ಕೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತೆರೆ ಎಳೆದಿದ್ದಾರೆ.

ಇಂದು ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಕುಮಾರಸ್ವಾಮಿ, ಹಾಸನದಿಂದ ಸ್ವರೂಪ್ ನಮ್ಮ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂದರು.

ಕುಮಾರಸ್ವಾಮಿ ಪತ್ರಿಕಾಗೋಷ್ಠಿ ವೇಳೆ ಹೊಳೆನರಸೀಪುರ ಶಾಸಕ, ಕುಮಾರಸ್ವಾಮಿ ಸಹೋದರ ಎಚ್ ಡಿ ರೇವಣ್ಣ ಕೂಡ ಉಪಸ್ಥಿತರಿದ್ದರು.

Advertisements

ಹಾಸನ ಟಿಕೆಟ್ ವಿಚಾರದಲ್ಲಿ ದೇವೇಗೌಡರದ್ದೇ ಅಂತಿಮ ನಿರ್ಧಾರ ಎಂದಿದ್ದ ಇಬ್ಬರೂ ನಾಯಕರುಗಳು ಈಗ ಏಕಾಏಕಿ ಪತ್ರಿಕಾಗೋಷ್ಠಿ ನಡೆಸಿ ಪ್ರಕಾಶ್‌ಗೆ ಟಿಕೆಟ್ ಘೋಷಣೆ ಮಾಡಿ ಅಚ್ಚರಿ ಮೂಡಿಸಿದ್ದಾರೆ.

ಇದಾದ ಬಳಿಕ ಜೆಡಿಎಸ್ ಪಕ್ಷದ 49 ಉಮೇದುವಾರರ ಎರಡನೇ ಪಟ್ಟಿಯನ್ನೂ ಕುಮಾರಸ್ವಾಮಿ ಬಿಡುಗಡೆ ಮಾಡಿದರು.ಎರಡನೇ ಪಟ್ಟಿ

ಈ ವೇಳೆ ಮಾತನಾಡಿದ ಕುಮಾರಸ್ವಾಮಿ, ಹಾಸನದ ಟಿಕೆಟ್‌ ವಿಚಾರವಾಗಿ ಭವಾನಿ ಹಾಗೂ ರೇವಣ್ಣ ಅವರ ಜೊತೆಗೆ ಚರ್ಚೆ ಮಾಡಿಯೇ ನಿರ್ಧಾರ ತೆಗೆದುಕೊಂಡು ಅವರ ಸಹಮತದೊಂದಿಗೆ ಹಾಸನದಲ್ಲಿ ಸ್ವರೂಪ್‌ ಪ್ರಕಾಶ್‌ಗೆ ಟಿಕೆಟ್‌ ಘೋಷಣೆ ಮಾಡಲಾಗಿದೆ ಎಂದರು.

ಈ ಸುದ್ದಿ ಓದಿದ್ದೀರಾ? : ಜೆಡಿಎಸ್‌ಗೆ ವರವಾದ ರಾಷ್ಟ್ರೀಯ ಪಕ್ಷಗಳ ಬಂಡಾಯ : ಕಾಂಗ್ರೆಸ್‌ನ ರಘು ಆಚಾರ್ ಸೇರಿದಂತೆ ಹಲವರ ಸೇರ್ಪಡೆ

ಎರಡನೇ ಪಟ್ಟಿಯಂತೆ ಕುಡುಚಿ ಕ್ಷೇತ್ರದಿಂದ ಆನಂದ್ ಮಾಳಗಿ, ರಾಯಭಾಗ ಕ್ಷೇತ್ರದಲ್ಲಿ ಪ್ರದೀಪ್ ಮಾಳಗಿ, ಅಥಣಿ ಶಶಿಕಾಂತ ಪಡಸಲಗಿ, ಜೇವರ್ಗಿ ದೊಡ್ಡಪ್ಪಗೌಡ ಪಾಟೀಲ್ ಗೆ ಟಿಕೆಟ್ ನೀಡಲಾಗಿದೆ.

ಕಡೂರಿನಲ್ಲಿ ಪಕ್ಷಕ್ಕೆ ಮರಳಿದ ವೈ ಎಸ್‌ ವಿ ದತ್ತ, ಸಕಲೇಶಪುರದಲ್ಲಿ ಮಾಜಿ ಪಕ್ಷಾಧ್ಯಕ್ಷ ಎಚ್‌ ಕೆ ಕುಮಾರಸ್ವಾಮಿ, ಬೇಲೂರಿನಿಂದ ಲಿಂಗೇಶ್‌, ಭಟ್ಕಳ – ನಾಗೇಂದ್ರ ನಾಯ್ಕ್, ಯಲ್ಲಾಪುರ -ನಾಗೇಶ್‌ ನಾಯ್ಕ್‌ , ಹಗರಿ ಬೊಮ್ಮನಹಳ್ಳಿ – ಪರಮೇಶ್ವರಪ್ಪ ನವರಿಗೆ ಟಿಕೆಟ್‌ ನೀಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X