ಜೆಡಿಎಸ್‌ನ ಭರವಸೆ ಪತ್ರ ಬಿಡುಗಡೆ

Date:

Advertisements
  • ಪತ್ರದಲ್ಲಿ 12 ಭರವಸೆಗಳ ಉಲ್ಲೇಖ
  • ಕನ್ನಡವೇ ಮೊದಲು ಎಂದ ಜೆಡಿಎಸ್‌

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾದ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಜೆಡಿಎಸ್‌ನ ಪ್ರಣಾಳಿಕೆ ರೂಪದ ಭರವಸೆ ಪತ್ರ ಬಿಡುಗಡೆ ಮಾಡಿದ್ದಾರೆ.

ಚುನಾವಣಾ ತಯಾರಿಯಲ್ಲಿರುವ ಜೆಡಿಎಸ್‌ ರಾಜ್ಯದ ಮತದಾರರ ಮನಸ್ಸು ಗೆಲ್ಲಲು ಕಸರತ್ತು ನಡೆಸಿದೆ. ಇದರ ಭಾಗವಾಗಿಯೇ ಪ್ರಣಾಳಿಕೆ ರೂಪದ ಭರವಸೆ ಪತ್ರ ಬಿಡುಗಡೆಗೊಳಿಸಲಾಗಿದೆ.

ದೇವೇಗೌಡ ಬಿಡುಗಡೆ ಮಾಡಿರುವ ಪತ್ರದಲ್ಲಿ 12 ಭರವಸೆಗಳನ್ನು ಉಲ್ಲೇಖಿಸಲಾಗಿದೆ. ಜೆಡಿಎಸ್ ಅಧಿಕಾರಕ್ಕೆ ಬಂದರೆ ಜನರಿಗೆ ಸವಲತ್ತುಗಳನ್ನು ನೀಡುವುದಾಗಿ ಜೆಡಿಎಸ್ ಭರವಸೆ ನೀಡಿದೆ.

Advertisements

ಪಂಚರತ್ನ, ಸಾಲಮನ್ನಾ, ಮಹಿಳೆಯರಿಗೆ ನೀಡಲಾಗುವ ಸವಲತ್ತು, ಆಟೋ ಡ್ರೈವರ್ ಗಳಿಗೆ ನೀಡಲಾಗುವ ಮಾಸಿಕ ಧನ ಸಹಾಯ ಸೇರಿದಂತೆ ಹಲವು ಭರವಸೆಗಳನ್ನು ಅನಾವರಣಗೊಳಿಸಲಾಗಿದೆ. ಆದರೆ, ಜೆಡಿಎಸ್‌ನ ಪ್ರಣಾಳಿಕೆಯನ್ನು ಎಚ್‌ ಡಿ ಕುಮಾರಸ್ವಾಮಿ ಅವರು ಬಿಡುಗಡೆ ಮಾಡಲಿದ್ದಾರೆ.

ಈ ಸುದ್ದಿ ಓದಿದ್ದೀರಾ? ಜಗದೀಶ್ ಶೆಟ್ಟರ್‌ಗೆ ಟಿಕೆಟ್‌ ವಿಳಂಬ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ 16 ಸದಸ್ಯರ ರಾಜೀನಾಮೆ

“ಈಗ ನಾನು ಹನ್ನೆರಡು ಭರವಸೆಗಳನ್ನು ಬಿಡುಗಡೆ ಮಾಡುತ್ತೇನೆ. ಅಧಿಕಾರಕ್ಕೆ ಬಂದ ನಂತರ ಏನು ಮಾಡಬೇಕೆಂದು ಒಂದು ಕಮಿಟಿ ಮಾಡಿ ಅದರ ಮೂಲಕ ಕಾರ್ಯಕ್ರಮಗಳನ್ನು ಜಾರಿ ಮಾಡಲಿದ್ದಾರೆ” ಎಂದು ಎಚ್‌ ಡಿ ದೇವೇಗೌಡ ಅವರು ಹೇಳಿದ್ದಾರೆ.

“ಇದು ಭರವಸೆಯಷ್ಟೆ, ಪ್ರಣಾಳಿಕೆಯಲ್ಲ. ಹೆಣ್ಣು ಮಕ್ಕಳಿಗೆ ನಾನು ಮೀಸಲಾತಿ ನೀಡಿದ್ದೆ, ಮೋದಿಯವರಿಗೆ ಪತ್ರ ಕೂಡ ಬರೆದಿದ್ದೇನೆ. ಹೆಣ್ಣು ಮಕ್ಕಳ ಮೊದಲ ಬಾರಿಗೆ ಮೀಸಲಾತಿ ನೀಡಿದ್ದು ನಾನು” ಎಂದು ಹೇಳಿದ್ದಾರೆ.

12 ಭರವಸೆಗಳು

  • ಕನ್ನಡವೇ ಮೊದಲು
  • ಶಿಕ್ಷಣವೇ ಅಧುನಿಕ ಶಕ್ತಿ
  • ಧಾರ್ಮಿಕ ಅಲ್ಪ ಸಂಖ್ಯಾತರ ಪ್ರಗತಿ
  • ಹಿರಿಯ ನಾಗರಿಕರ ಸನ್ಮಾನ
  • ರೈತ ಚೈತನ್ಯ
  • ವಿಕಲ ಚೇತನರಿಗೆ ಆಸರೆ
  • ಆರಕ್ಷಕರಿಗೆ ಅಭಯ
  • ಮಹಿಳಾ ಸಬಲೀಕರಣ
  • ಪರಿಶಿಷ್ಟ ಜಾತಿ, ಪಂಗಡಗಳ ಏಳಿಗೆ
  • ಆರೋಗ್ಯ ಸಂಪತ್ತು
  • ಯುವಜನ ಸಬಲೀಕರಣ
  • ವೃತ್ತಿ ನಿರತ ವಕೀಲರ ಅಭ್ಯುದಯ
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X