ಗೃಹ ಸಚಿವರೇ, ಕ್ರಿಮಿನಲ್‌ ಪುನೀತ್ ಕೆರೆಹಳ್ಳಿಯನ್ನು ನಿಮ್ಮ ಮನೆಯಲ್ಲೆ ಅಡಗಿಸಿಟ್ಟಿದ್ದೀರಾ: ಜೆಡಿಎಸ್‌ ಪ್ರಶ್ನೆ

Date:

  • ‘ಕಾನೂನು ಸುವ್ಯವಸ್ಥೆ ಹದಗೆಟ್ಟು ಹೋಗಿದೆ’
  • ‘ಕ್ರಿಮಿನಲ್‌ನಿಂದ ಎಚ್‌ಡಿಕೆಗೆ ಬೆದರಿಕೆ’

ಸಾತನೂರಿನಲ್ಲಿ ನಡೆದ ಜಾನುವಾರು ವ್ಯಾಪಾರಿ ಹತ್ಯೆಗೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಪುನೀತ್‌ ಕೆರೆಹಳ್ಳಿಯನ್ನು ಪೊಲೀಸರು ಇನ್ನೂ ಬಂಧಿಸದ ಕುರಿತು ಜೆಡಿಎಸ್‌ ಅನುಮಾನ ವ್ಯಕ್ತಪಡಿಸಿದೆ.

ಪುನೀತ್‌ ಕೆರೆಹಳ್ಳಿ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದರು ಸಹ ಇನ್ನೂ ಆತನ ಬಂಧನವಾಗಿಲ್ಲ. ಪ್ರಮುಖ ಆರೋಪಿ ಫೇಸ್‌ಬುಕ್‌ ಲೈವ್‌ ಮೂಲಕ ಕಾಣಿಕೊಳ್ಳುತ್ತಿದ್ದಾನೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಜೆಡಿಎಸ್‌, ಗೃಹ ಸಚಿವ ಆರಗ ಜ್ಞಾನೇಂದ್ರ ಮತ್ತು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

“ಜಾನುವಾರು ವ್ಯಾಪಾರಿಯ ಕೊಲೆ ನಡೆದು ಇಷ್ಟು ದಿನಗಳಾದರೂ ಆರೋಪಿಯ ಬಂಧನವಾಗಿಲ್ಲ. ಆದರೆ ಕ್ರಿಮಿನಲ್ ಮಾತ್ರ ಸ್ವಚ್ಛಂದವಾಗಿ ತಿರುಗಾಡುತ್ತಾ ಮಾಜಿ ಸಿಎಂಗಳಾದ ಎಚ್‌ ಡಿ ಕುಮಾರಸ್ವಾಮಿ ಅವರಿಗೆ ಬೆದರಿಕೆ ಹಾಕುತ್ತಿದ್ದಾನೆ” ಎಂದು ಜೆಡಿಎಸ್‌ ಟ್ವೀಟ್ ಮಾಡಿದೆ.

ಈ ಸುದ್ದಿ ಓದಿದ್ದೀರಾ? ರಾಜ್ಯದಲ್ಲಿ ಗೃಹ ಇಲಾಖೆ ಸತ್ತು ಹೋಗಿದೆಯಾ ಆರಗ ಜ್ಞಾನೇಂದ್ರ ಅವರೇ?: ಕಾಂಗ್ರೆಸ್‌ ಕಿಡಿ

“ಬಿಜೆಪಿ ಸರ್ಕಾರದ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ಕೆಟ್ಟು ಹೋಗಿರುವುದಕ್ಕೆ ಇದು ಸಾಕ್ಷಿ” ಎಂದು ರಾಜ್ಯ ಬಿಜೆಪಿ ಸರ್ಕಾರವನ್ನು ಟೀಕಿಸಿದೆ.

“ಗೃಹ ಸಚಿವ ಆರಗ ಜ್ಞಾನೇಂದ್ರ ಅವರೇ ಎಲ್ಲಿದ್ದೀರಿ ನೀವು? ನಿಮಗಿನ್ನೂ ಈ ಸುದ್ದಿ ಮುಟ್ಟಿಲ್ಲವೆ? ಅಥವಾ ಕ್ರಿಮಿನಲ್‌ಗೆ ನಿಮ್ಮ ಮನೆಯಲ್ಲೆ ಅಡಗಿಸಿಟ್ಟಿದ್ದೀರಾ?” ಎಂದು ಜೆಡಿಎಸ್‌ ಪ್ರಶ್ನಿಸಿದೆ.

“ಬಿಜೆಪಿ ಸರ್ಕಾರ ರಾಜ್ಯದಾದ್ಯಂತ ಕ್ರಿಮಿನಲ್‌ಗಳನ್ನು ಮೂಳೆ ಹಾಕಿ ಸಾಕಿದ ಪರಿಣಾಮ, ರಾಜ್ಯವೀಗ ‘ಜಂಗಲ್ ರಾಜ್ಯ’ವಾಗಿದೆ” ಎಂದು ಕಿಡಿಕಾರಿದೆ.

“ಕೊಲೆ ಆರೋಪಿ ಮಾಜಿ ಸಿಎಂಗೆ ಬೆದರಿಕೆ ಹಾಕುತ್ತಾನೆಂದರೆ, ಜನಸಾಮಾನ್ಯರ ಗತಿಯೇನು? ಸರ್ವ ಜನಾಂಗದ ಶಾಂತಿಯ ತೋಟವನ್ನು ಓಟುಗಳಿಗಾಗಿ ಒಡೆದಿದ್ದೆ ಸರ್ಕಾರದ ಸಾಧನೆ. ಜನರಿಗೆ ರಾಜ್ಯ ಪೊಲೀಸ್ ಇಲಾಖೆಯ ಮೇಲೆ ನಂಬಿಕೆ ಇಲ್ಲವಾಗುತ್ತಿದೆ. ಇನ್ನಾದರೂ ಪೊಲೀಸ್ ಇಲಾಖೆ ತನ್ನ ಘನತೆ ಕಾಪಾಡಿಕೊಳ್ಳಲಿ, ಕ್ರಿಮಿನಲ್‌ಗಳನ್ನು ಜೈಲಿಗೆ ತಳ್ಳಿ” ಎಂದು ಜೆಡಿಎಸ್‌ ಆಗ್ರಹಿಸಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೃತ್ ಭಾರತ್ ನಿಲ್ದಾಣ ಯೋಜನೆಯಡಿ 15 ನಿಲ್ದಾಣಗಳ ಆಧುನೀಕರಣ: ಯೋಗೇಶ್ ಮೋಹನ್

“ಬಂಗಾರಪೇಟೆ, ಕೆಂಗೇರಿ, ಕೃಷ್ಣರಾಜಪುರ, ಮಂಡ್ಯ, ಚನ್ನಪಟ್ಟಣ, ಹೊಸೂರು, ಹಿಂದೂಪುರ, ಕುಪ್ಪಂ, ಮಾಲೂರು,...

ಶೂದ್ರರು, ದಲಿತರಿಗೆ ಆರ್‌ಎಸ್‌ಎಸ್‌ ಗರ್ಭಗುಡಿಗೆ ಪ್ರವೇಶ ಇಲ್ಲ ಎಂಬುದು ಮತ್ತೆ ಸಾಬೀತು: ಸಿದ್ದರಾಮಯ್ಯ

ಹೊರಬಾಗಿಲಲ್ಲಿ ನಿಂತು 'ಜೀ..ಜೀ..ಹುಜೂರ್' ಎಂದಷ್ಟೇ ಹೇಳಬೇಕು:‌ ಸಿದ್ದರಾಮಯ್ಯ ಗೂಳಿಹಟ್ಟಿ ಶೇಖರ್...

ಪ್ರಜಾಪ್ರಭುತ್ವ, ಜಾತ್ಯತೀತತೆ ಹಾಗೂ ಮಾನವ ಹಕ್ಕುಗಳ ಉಳಿವಿಗಾಗಿ ಆಂದೋಲನಕ್ಕೆ ಕರೆ

ಸೆಂಟರ್ ಫಾರ್ ಪ್ರೊಟೆಕ್ಟಿಂಗ್ ಡೆಮಾಕ್ರೆಟಿಕ್ ರೈಟ್ಸ್ ಅಂಡ್ ಸೆಕ್ಯುಲರಿಸಂ ಕರೆ ...

ರಾಷ್ಟ್ರದ ಭವಿಷ್ಯ ಯುವ ಸಮೂಹದ ಕೈಯಲ್ಲಿದೆ : ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

"ರಾಷ್ಟ್ರದ ಭವಿಷ್ಯ ಯುವ ಸಮೂಹದ ಕೈಯಲ್ಲಿದ್ದು, ಎಲ್ಲರೂ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿ...