ಉತ್ತರ ಕರ್ನಾಟಕ | ಬಿಜೆಪಿ, ಕಾಂಗ್ರೆಸ್‌ನ ಬಂಡಾಯ ಅಭ್ಯರ್ಥಿಗಳು ಜೆಡಿಎಸ್‌ನತ್ತ

Date:

  • ಜೆಡಿಎಸ್‌ನತ್ತ ಸಾಗುತ್ತಿರುವ ಬಿಜೆಪಿ, ಕಾಂಗ್ರೆಸ್‌ನ ಬಂಡಾಯಗಾರರು
  • 35-40 ಸ್ಥಾನಗಳನ್ನು ಸುಲಭವಾಗಿ ಗೆಲ್ಲುವ ಭರವಸೆಯಲ್ಲಿರುವ ಜೆಡಿಎಸ್

ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಭಾಗದ ಹಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳಿಗಾಗಿ ಹೆಣಗಾಡುತ್ತಿದ್ದ ಜೆಡಿಎಸ್‌ಗೆ ಈಗ ಬಿಜೆಪಿ ಮತ್ತು ಕಾಂಗ್ರೆಸ್ ಟಿಕೆಟ್ ನಿರಾಕರಿಸಿದವರು ಸಂಪರ್ಕಿಸುತ್ತಿದ್ದಾರೆ.

ಬಿಜೆಪಿ, ಕಾಂಗ್ರೆಸ್‌ನ ಮೊದಲ ಮತ್ತು ಎರಡನೇ ಪಟ್ಟಿಗಳು ಬಿಡುಗಡೆಯಾದ ಬಳಿಕ ಬಂಡಾಯ ಅಭ್ಯರ್ಥಿಗಳು (ಸ್ವತಂತ್ರವಾಗಿ ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸದವರು) ಟಿಕೆಟ್‌ಗಾಗಿ ಜಾತ್ಯತೀತ ಪಕ್ಷದತ್ತ ನೋಡುತ್ತಿದ್ದಾರೆ.

ಎರಡು ಪ್ರಮುಖ ಪಕ್ಷಗಳಲ್ಲಿನ ಇತ್ತೀಚಿನ ಬಂಡಾಯವು ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶಗಳಲ್ಲಿ ಜೆಡಿಎಸ್ ತನ್ನ ಪಕ್ಷವನ್ನು ಭದ್ರಪಡಿಸಿಕೊಳ್ಳಲು ಅನುಕೂಲವಾಗಿದೆ. ಇತರ ಪಕ್ಷಗಳ ಅತೃಪ್ತ ಅಭ್ಯರ್ಥಿಗಳಿಗೆ ಬಾಗಿಲು ತೆರೆಯುವ ಮೂಲಕ, ವಿಧಾನಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷಗಳಿಗೆ ಸಡ್ಡು ಹೊಡೆಯಲು ಕಲ್ಯಾಣ ಕರ್ನಾಟಕ ಪ್ರದೇಶಗಳ ಹಲವಾರು ಕ್ಷೇತ್ರಗಳಲ್ಲಿ ಗೆಲ್ಲುವ ಅಭ್ಯರ್ಥಿಗಳತ್ತ ಜೆಡಿಎಸ್ ಗಮನ ಹರಿಸುತ್ತಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“2018ರ ಚುನಾವಣೆಯಲ್ಲಿ ನಾವು ಉತ್ತರ ಕರ್ನಾಟಕದ ಪ್ರದೇಶಗಳಲ್ಲಿ ಆರು ಸ್ಥಾನಗಳನ್ನು ಗೆದ್ದಿದ್ದೇವೆ. ಈ ಪ್ರದೇಶಗಳಲ್ಲಿ ನಾವು ಈ ಹಿಂದೆ 18 ರಿಂದ 20 ಸ್ಥಾನಗಳನ್ನು ಗೆದ್ದಿದ್ದೆವು. ಕಾಂಗ್ರೆಸ್ ಮತ್ತು ಬಿಜೆಪಿಯ ಮೊದಲ ಪಟ್ಟಿ, ಎರಡನೇ ಪಟ್ಟಿಗಳು ಬಿಡುಗಡೆಯಾದ ಬಳಿಕ ಬಿಜೆಪಿ, ಕಾಂಗ್ರೆಸ್‌ನ ಬಂಡಾಯಗಾರರು ನಮ್ಮ ಪಕ್ಷದತ್ತ ಕಾಲಿಡುತ್ತಿದ್ದಾರೆ” ಎಂದು ಜೆಡಿಎಸ್ ವಕ್ತಾರ ಗುರುರಾಜ್ ಹುಣಸಿಮರದ  ಹೇಳಿದ್ದಾರೆ.‌

ಈ ಸುದ್ದಿ ಓದಿದ್ದೀರಾ? ಕುಟುಂಬ ರಾಜಕಾರಣದ ವಿರುದ್ಧ ಮಾತನಾಡುವ ಬಿಜೆಪಿಯಿಂದಲೇ 40 ಮಂದಿಗೆ ಟಿಕೆಟ್: ಪ್ರಿಯಾಂಕ್ ಖರ್ಗೆ

“ಧಾರವಾಡ, ಬೆಳಗಾವಿ, ಬಾಗಲಕೋಟೆ, ಕಲಬುರಗಿ, ಬೀದರ್, ಯಾದಗಿರಿ, ಹಾವೇರಿ ಮತ್ತು ಗದಗ ಜಿಲ್ಲೆಗಳಿಂದ ಜೆಡಿಎಸ್ ಟಿಕೆಟ್ ಆಕಾಂಕ್ಷಿಗಳಿಂದ ಕರೆಗಳು ಬರುತ್ತಿವೆ. ಅವರಲ್ಲಿ ಹೆಚ್ಚಿನವರು ಪಕ್ಷವನ್ನು ಮುನ್ನಡೆಸುವ ಬದಲು ತಮ್ಮ ಸಾಮರ್ಥ್ಯದಲ್ಲಿ ಗೆದ್ದಿದ್ದಾರೆ. 35-40 ಸ್ಥಾನಗಳನ್ನು ಸುಲಭವಾಗಿ ಗೆಲ್ಲುವುದರ ಜೊತೆಗೆ ಕಾಂಗ್ರೆಸ್ ಮತ್ತು ಬಿಜೆಪಿಗೆ ಕಠಿಣ ಸ್ಪರ್ಧೆ ನೀಡುವ ಭರವಸೆಯೊಂದಿಗೆ ನಾವು ಅಭ್ಯರ್ಥಿಗಳನ್ನು ಅಂತಿಮಗೊಳಿಸುತ್ತಿದ್ದೇವೆ” ಎಂದು ಹೇಳಿದರು.

ರಾಷ್ಟ್ರೀಯ ಪಕ್ಷಗಳಿಂದ ಟಿಕೆಟ್ ನಿರಾಕರಿಸಲ್ಪಟ್ಟ ಲಕ್ಷ್ಮಣ ಸವದಿಯಂತಹ ನಾಯಕರೊಂದಿಗೆ ಜೆಡಿಎಸ್ ನಾಯಕರು ಸಂಪರ್ಕದಲ್ಲಿದ್ದಾರೆ. ಪಕ್ಷದ ಮುಖ್ಯಸ್ಥ ಎಚ್.ಡಿ ಕುಮಾರಸ್ವಾಮಿ ಮತ್ತು ಇತರ ಹಿರಿಯರು ಮುಂದಿನ ದಿನಗಳಲ್ಲಿ ಈ ಪ್ರದೇಶಗಳಲ್ಲಿ ರ‍್ಯಾಲಿಗಳನ್ನು ನಡೆಸಬಹುದು ಎಂದು ತಿಳಿದುಬಂದಿದೆ.

+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತೆಲಂಗಾಣ ಫಲಿತಾಂಶ: ಕೆಸಿಆರ್ ಸರ್ವಾಧಿಕಾರಕ್ಕೆ ಏಟು; ಕಾಂಗ್ರೆಸ್ ಗ್ಯಾರಂಟಿಗಳಿಗೆ ಓಟು

2014ರಿಂದಲೂ ಕಾಂಗ್ರೆಸ್ ತೆಲಂಗಾಣದ ಗದ್ದುಗೆ ಮೇಲೆ ಕಣ್ಣಿಟ್ಟಿತ್ತು. ಈ ಬಾರಿ ಕರ್ನಾಟಕದಲ್ಲಿ...

ರಾಜಸ್ಥಾನ | ಬಿಜೆಪಿ ವಿರುದ್ಧ ಬಂಡಾಯವೆದ್ದ 26 ವರ್ಷದ ಸ್ವತಂತ್ರ ಅಭ್ಯರ್ಥಿಗೆ ಭಾರಿ ಮುನ್ನಡೆ

ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಬಂಡಾಯವೆದ್ದು ಸ್ಪರ್ಧಿಸಿದ್ದ ಅಭ್ಯರ್ಥಿಯೊಬ್ಬರು ಭಾರಿ...

ರಾಜಸ್ಥಾನ | ಬಿಜೆಪಿ ಮುನ್ನಡೆ ಕಾಯ್ದುಕೊಂಡಂತೆ ಸಿಎಂ ಸ್ಥಾನಕ್ಕೆ ಮೂವರ ಪೈಪೋಟಿ!

ರಾಜಸ್ಥಾನ ರಾಜ್ಯದ 199 ವಿಧಾನಸಭಾ ಕ್ಷೇತ್ರಗಳ ಪೈಕಿ ಮಧ್ಯಾಹ್ನ 12 ಗಂಟೆ...

ಛತ್ತೀಸ್‌ಗಢ ಮತ ಎಣಿಕೆ: ಕ್ಷಣದಿಂದ ಕ್ಷಣಕ್ಕೆ ಕಾಂಗ್ರೆಸ್ – ಬಿಜೆಪಿ ನಡುವೆ ತೀವ್ರ ಜಿದ್ದಾಜಿದ್ದಿ

ಛತ್ತೀಸ್‌ಗಢ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕುತೂಹಲದಿಂದ ಕೂಡಿದ್ದು ಕಾಂಗ್ರೆಸ್ ಹಾಗೂ...