ಕಲಬುರಗಿ | ಇವಿಎಂ ಸಮಸ್ಯೆಯಿಂದ ಮತದಾನಕ್ಕೆ ಅಡಚಣೆ; ಮತದಾರರ ಬೇಸರ

Date:

Advertisements

ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಮತಗಟ್ಟೆ ಸಂಖ್ಯೆ 3ರಲ್ಲಿ ಇವಿಎಂ ಸಮಸ್ಯೆ ಎದುರಾಗಿದ್ದು, ಮತದಾರರಿಗೆ ಮತ ಚಲಾಯಿಸಲು ತೊಂದರೆ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಕೆಲವರು ಮತ ಚಲಾಯಿಸದೆ ಹಿಂತಿರುಗಿದ್ದಾರೆ ಎಂದು ತಿಳಿದುಬಂದಿದೆ.

ಮತಗಟ್ಟೆ ಕ್ರಮ ಸಂಖ್ಯೆ 3ರಲ್ಲಿ 2018ರ ಚುನಾವಣೆಯಲ್ಲಿ ಎರಡು ಬೂತ್‌ಗಳನ್ನು ರಚಿಸಲಾಗಿತ್ತು. ಈ ಬಾರಿ ಕೇವಲ ಒಂದೇ ಬೂತ್ ಇದ್ದು, ಅದೂ ಕೂಡ ಪದೇ ಪದೆ ಕೈ ಕೊಡುತ್ತಿದ್ದರಿಂದ ಬಹುತೇಕ ಮತದಾರರು ಮತ ಚಲಾಯಿಸಲು ಸಾಧ್ಯವಾಗಿಲ್ಲ ಎಂದು ಸ್ಥಳೀಯ ಮತದಾರರು ಅಸಮಾಧಾನ ವ್ಯಕ್ತಪಡಿಸಿದರು.

ಸ್ಥಳೀಯ ಮತದಾರರು ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಬೂತ್‌ ಸಂಖ್ಯೆ 3ರಲ್ಲಿ ಪ್ರತಿಬಾರಿ ಎರಡು ಮತಗಟ್ಟೆಗಳಿರುತ್ತಿದ್ದವು. ಪ್ರಸ್ತುತ ಚುನಾವಣೆಯಲ್ಲಿ ಒಂದೇ ಬೂತ್‌ನಲ್ಲಿ ಮತ ಚಲಾಯಿಸುವಂತೆ ಮಾಡಿದ್ದು ತುಂಬಾ ತೊಂದರೆಯಾಯಿತು. ಮತದಾರರ ಸಂಖ್ಯೆ ಹೆಚ್ಚಿದ್ದ ಕಾರಣ ಸುಮಾರು ಹೊತ್ತಿನಿಂದ ಕಾದು ನಿಂತ ಮತದಾರರು ಮತ ಚಲಾಯಿಸದೇ ಹೊರಟರು” ಎಂದು ತಿಳಿಸಿದರು.

Advertisements
ಸೇಡಂ ಮತದಾರರ ಅಳಲು
ಸೇಡಂ ವಿಧಾನಸಭಾ ಕ್ಷೇತ್ರದ ಮತದಾರರು

ಇವಿಎಂ ಸಮಸ್ಯೆಯಿಂದ ಮತದಾನ ಪ್ರಕ್ರಿಯೆಗಳು ವೇಗವಾಗಿ ನಡೆಯದ ಕಾರಣ ದೂರದಿಂದ ಬಂದಿದ್ದವರು ಮತ ಚಲಾಯಿಸದೆ ಹೊರಟರು. ಚುನಾವಣೆಗೂ ಮುನ್ನವೇ ಚುನಾವಣಾಧಿಕಾರಿಗಳು ಅವೆಲ್ಲವನ್ನು ಗಮನಿಸಿಕೊಂಡು ಮತದಾನಕ್ಕೆ ಸರಾಗ ಮಾಡಿಕೊಟ್ಟು ಸಹಕರಿಸಬೇಕು. ಮುಂದಿನ ಚುನಾವಣೆಯಲ್ಲಾದರೂ ಮುಂಜಾಗೃತ ಕ್ರಮ ವಹಿಸಬೇಕು” ಎಂದು ಮತದಾರು ತಿಳಿಸಿದರು.

ಸೇಡಂ ಮತದಾರ

“ಮತದಾನ ಮಾಡಲು 200 ರಿಂದ 300 ಮಂದಿ ಸಾಲಿನಲ್ಲಿ ನಿಂತಿದ್ದರು. ತುಂಬಾ ಜನ ಇದ್ದಾರೆ, ವೇಗವಾಗಿ ಮತದಾನ ಪ್ರಕ್ರಿಯೆ ನಡೆಯುತ್ತಿಲ್ಲ ಅಂದುಕೊಂಡು ಕೆಲವೊಬ್ಬರು ನಿಂತು ಆಯಾಸಗೊಂಡು ಹೊರಗಡೆ ಹೋಗಿ ಕುಳಿತುಕೊಂಡಿದ್ದರು. 6 ಗಂಟೆ ಆಗುತ್ತಲೇ ಗೇಟ್ ಬಂದ್ ಮಾಡಿದ ಪೊಲೀಸ್ ಸಿಬ್ಬಂದಿಗಳು ಮತದಾರರಿಗೆ ಒಳಗೆ ಪ್ರವೇಶ ನೀಡಲಿಲ್ಲ ನಮ್ಮ ನೆಚ್ಚಿನ ನಾಯಕನನ್ನು ಆಯ್ಕೆ ಮಾಡಲು ಸಾಧ್ಯವಾಗಲಿಲ್ಲ” ಎಂದು  ಮತದಾರರು ಬೇಸರ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಜಿಲ್ಲೆಯಲ್ಲಿ ಶೇ.78ರಷ್ಟು ಮತದಾನ: ಜಿಲ್ಲಾಧಿಕಾರಿ

“ಮತ ನೀಡುವಾಗ ಮತದಾರರಿಗೆ ಸಮಸ್ಯೆ ಎದುರಾಗಿದೆ. ಮತ ನೀಡಿ ಮೂರ್ನಾಲ್ಕು ನಿಮಿಷ ಆದರೂ ನಾವು ಯಾರಿಗೆ ಮತ ನೀಡಿದ್ದೇವೆ ಎನ್ನುವ ಸ್ಪಷ್ಟತೆ ನಮಗೆ ಸಿಗಲ್ಲಿಲ. ಚುನಾವಣಾಧಿಕಾರಿಗಳು ಸರ್ವರ್ ಸಮಸ್ಯೆ ನೆಪ ಹೇಳುತ್ತಿದ್ದಾರೆ” ಎಂದು ಆರೋಪಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X