ಕರಂದ್ಲಾಜೆ ವಿವಾದಾತ್ಮಕ ಪತ್ರ | ಚುನಾವಣೆ ನಡೆಸುತ್ತಿರುವುದು ಆಯೋಗವೋ, ಬಿಜೆಪಿಯೋ: ಸಿದ್ದರಾಮಯ್ಯ ಪ್ರಶ್ನೆ

Date:

  • ಕರಂದ್ಲಾಜೆಯಿಂದ ಮಾಹಿತಿ ವಶಕ್ಕೆ ಸಿದ್ದರಾಮಯ್ಯ ಒತ್ತಾಯ
  • ಕೇಂದ್ರ ಚುನಾವಣಾ ಆಯುಕ್ತರ ಮಧ್ಯಪ್ರವೇಶಕ್ಕೆ ಆಗ್ರಹ

ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ಅವರು ಪಕ್ಷದ ಪಧಾದಿಕಾರಿಗಳಿಗೆ ಪತ್ರ ಬರೆದು ಕ್ಷೇತ್ರದ ಸೂಕ್ಷ್ಮ – ಅತಿಸೂಕ್ಷ್ಮ ಪ್ರದೇಶಗಳನ್ನು ಗುರುತಿಸುವಂತೆ ತಿಳಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ತನಿಖೆಗೆ ಒತ್ತಾಯಿಸಿದ್ದಾರೆ.

- Advertisement -

“ಯಾವ ಯಾವ ಮತಗಟ್ಟೆಗಳನ್ನು ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಎಂದು ಘೋಷಿಸಬೇಕು. ಯಾವ ಭಾಗಗಳಲ್ಲಿ ಕೇಂದ್ರ ಸೇನಾಪಡೆಗಳು, ಅಥವಾ ಅರೇ ಸೇನಾಪಡೆ ತುಕಡಿಗಳನ್ನು ನಿಯೋಜಿಸಬೇಕು ಹಾಗೂ ಯಾವ ಮತಗಟ್ಟೆಗಳಿಗೆ ‘ವೆಬ್ ಕಾಸ್ಟಿಂಗ್’ ಮತ್ತು ‘ವಿಡಿಯೋ ರೆಕಾರ್ಡಿಂಗ್’ ಸೇವೆ ಅಗತ್ಯವಿದೆ ಎನ್ನುವುದನ್ನು ಪದಾಧಿಕಾರಿಗಳು ಬೇಗ ತಿಳಿಸಬೇಕು” ಎಂದು ಶೋಭಾ ಕರಂದ್ಲಾಜೆ ಪತ್ರ ಬರೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, “ರಾಜ್ಯದಲ್ಲಿ ಚುನಾವಣೆ ನಡೆಸುತ್ತಿರುವುದು
ಚುನಾವಣಾ ಆಯೋಗವೋ? ಬಿಜೆಪಿಯೋ? ಪಕ್ಷದ ಪದಾಧಿಕಾರಿಗಳು ನಿರ್ಧರಿಸಲಿರುವುದು
ಸೂಕ್ಷ್ಮ, ಅತಿಸೂಕ್ಷ್ಮ ಮತಗಟ್ಟೆಗಳನ್ನೋ? ಬಿಜೆಪಿ ಪರ ಮತ್ತು ವಿರೋಧಿ ಮತದಾರರು ಇರುವ ಮತಗಟ್ಟೆಗಳನ್ನೋ?” ಎಂದು ಪ್ರಶ್ನಿಸಿದ್ದಾರೆ.

“ತಮ್ಮ ಪಕ್ಷದ ಪರವಾಗಿಲ್ಲದ ಮತದಾರರು ಇರುವ ಮತಗಟ್ಟೆಗಳಲ್ಲಿ‌ ಭದ್ರತೆಯ ನೆಪದಲ್ಲಿ ಕೇಂದ್ರ ಸೇನಾಪಡೆಗಳನ್ನು ನಿಯೋಜಿಸಿ ಮತದಾರರನ್ನು ಬೆದರಿಸಿ ಅವರು ಮತದಾನ ಮಾಡದಂತೆ ತಡೆಯುವುದು ಈ ಪತ್ರದ ದುರುದ್ದೇಶವಾಗಿದೆ” ಎಂದು ಆರೋಪಿಸಿದ್ದಾರೆ.

“ಚುನಾವಣಾ ಮತಗಟ್ಟೆಗಳಲ್ಲಿ ‘ವೆಬ್ ಕಾಸ್ಟಿಂಗ್’ ಮತ್ತು ‘ವಿಡಿಯೋ ರೆಕಾರ್ಡಿಂಗ್’ ಮಾಡುವ ಹೊಣೆ ಚುನಾವಣಾ ಆಯೋಗದಲ್ಲವೇ? ಇದನ್ನು ನಡೆಸಲು ರಾಜಕೀಯ ಪಕ್ಷಕ್ಕೆ ಅನುಮತಿ ಕೊಟ್ಟವರು ಯಾರು?” ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

“ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರೇ ಈ ಪತ್ರ ಬರೆದಿರುವುದನ್ನು ನೋಡಿದರೆ ಕೇಂದ್ರ ಸರ್ಕಾರವೇ ಈ ಅಕ್ರಮ ಚಟುವಟಿಕೆಯಲ್ಲಿ ಶಾಮೀಲಾಗುರುವುದು ಸ್ಪಷ್ಟವಾಗಿದೆ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ರೈತರ ಹಕ್ಕೊತ್ತಾಯ ಈಡೇರಿಸುವುದಾಗಿ ಘೋಷಣೆ: ಪ್ರಮಾಣ ಪತ್ರಕ್ಕೆ ಸಹಿ ಹಾಕಿದ ಕಾಂಗ್ರೆಸ್ ಮತ್ತು ಜೆಡಿಎಸ್

“ಕೇಂದ್ರ ಚುನಾವಣಾ ಆಯುಕ್ತರು ತಕ್ಷಣ ಮಧ್ಯಪ್ರವೇಶಿಸಿ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ವಿಚಾರಣೆಗೊಳಪಡಿಸಿ ಅವರು ಯಾವುದೇ ಚುನಾವಣಾ ಪ್ರಚಾರದಲ್ಲಿ ಭಾಗವಹಿಸದಂತೆ ನಿಷೇಧಿಸಬೇಕು. ಅವರ ಪಕ್ಷದ ನಾಯಕರು ಮತ್ತು ಅಭ್ಯರ್ಥಿಗಳಿಂದ ಪಡೆದಿರುವ ಮಾಹಿತಿಯನ್ನು ವಶಕ್ಕೆ ಪಡೆಯಬೇಕು” ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ: ರಾಜಕೀಯ ಲಾಭ ಸಿಗುತ್ತಾ?

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು...

ರಾಜಸ್ಥಾನದ ಬುಡಕಟ್ಟು ಶಾಲೆಗಳ ದುಸ್ಥಿತಿ: ‘ಖಾಲಿ ಜಾಗ, ಕುಡಿಯುವ ನೀರಿಲ್ಲ’ – ಸಿಜೆಪಿ ಆಕ್ರೋಶ

ರಾಜಸ್ಥಾನದ ಬುಡಕಟ್ಟು (ಆದಿವಾಸಿ) ಪ್ರದೇಶಗಳಲ್ಲಿರುವ ಸರ್ಕಾರಿ ಶಾಲೆಗಳ ಶೋಚನೀಯ ಸ್ಥಿತಿಯನ್ನು ಖಂಡಿಸಿ...

ಚಿಕ್ಕಮಗಳೂರು | ಕಸ್ತೂರಿರಂಗನ್ ವರದಿಗೆ ಪಕ್ಷಾತೀತ ವಿರೋಧ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...