ಕರಂದ್ಲಾಜೆ ವಿವಾದಾತ್ಮಕ ಪತ್ರ | ಚುನಾವಣೆ ನಡೆಸುತ್ತಿರುವುದು ಆಯೋಗವೋ, ಬಿಜೆಪಿಯೋ: ಸಿದ್ದರಾಮಯ್ಯ ಪ್ರಶ್ನೆ

Date:

  • ಕರಂದ್ಲಾಜೆಯಿಂದ ಮಾಹಿತಿ ವಶಕ್ಕೆ ಸಿದ್ದರಾಮಯ್ಯ ಒತ್ತಾಯ
  • ಕೇಂದ್ರ ಚುನಾವಣಾ ಆಯುಕ್ತರ ಮಧ್ಯಪ್ರವೇಶಕ್ಕೆ ಆಗ್ರಹ

ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ಅವರು ಪಕ್ಷದ ಪಧಾದಿಕಾರಿಗಳಿಗೆ ಪತ್ರ ಬರೆದು ಕ್ಷೇತ್ರದ ಸೂಕ್ಷ್ಮ – ಅತಿಸೂಕ್ಷ್ಮ ಪ್ರದೇಶಗಳನ್ನು ಗುರುತಿಸುವಂತೆ ತಿಳಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ತನಿಖೆಗೆ ಒತ್ತಾಯಿಸಿದ್ದಾರೆ.

“ಯಾವ ಯಾವ ಮತಗಟ್ಟೆಗಳನ್ನು ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಎಂದು ಘೋಷಿಸಬೇಕು. ಯಾವ ಭಾಗಗಳಲ್ಲಿ ಕೇಂದ್ರ ಸೇನಾಪಡೆಗಳು, ಅಥವಾ ಅರೇ ಸೇನಾಪಡೆ ತುಕಡಿಗಳನ್ನು ನಿಯೋಜಿಸಬೇಕು ಹಾಗೂ ಯಾವ ಮತಗಟ್ಟೆಗಳಿಗೆ ‘ವೆಬ್ ಕಾಸ್ಟಿಂಗ್’ ಮತ್ತು ‘ವಿಡಿಯೋ ರೆಕಾರ್ಡಿಂಗ್’ ಸೇವೆ ಅಗತ್ಯವಿದೆ ಎನ್ನುವುದನ್ನು ಪದಾಧಿಕಾರಿಗಳು ಬೇಗ ತಿಳಿಸಬೇಕು” ಎಂದು ಶೋಭಾ ಕರಂದ್ಲಾಜೆ ಪತ್ರ ಬರೆದಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, “ರಾಜ್ಯದಲ್ಲಿ ಚುನಾವಣೆ ನಡೆಸುತ್ತಿರುವುದು
ಚುನಾವಣಾ ಆಯೋಗವೋ? ಬಿಜೆಪಿಯೋ? ಪಕ್ಷದ ಪದಾಧಿಕಾರಿಗಳು ನಿರ್ಧರಿಸಲಿರುವುದು
ಸೂಕ್ಷ್ಮ, ಅತಿಸೂಕ್ಷ್ಮ ಮತಗಟ್ಟೆಗಳನ್ನೋ? ಬಿಜೆಪಿ ಪರ ಮತ್ತು ವಿರೋಧಿ ಮತದಾರರು ಇರುವ ಮತಗಟ್ಟೆಗಳನ್ನೋ?” ಎಂದು ಪ್ರಶ್ನಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ತಮ್ಮ ಪಕ್ಷದ ಪರವಾಗಿಲ್ಲದ ಮತದಾರರು ಇರುವ ಮತಗಟ್ಟೆಗಳಲ್ಲಿ‌ ಭದ್ರತೆಯ ನೆಪದಲ್ಲಿ ಕೇಂದ್ರ ಸೇನಾಪಡೆಗಳನ್ನು ನಿಯೋಜಿಸಿ ಮತದಾರರನ್ನು ಬೆದರಿಸಿ ಅವರು ಮತದಾನ ಮಾಡದಂತೆ ತಡೆಯುವುದು ಈ ಪತ್ರದ ದುರುದ್ದೇಶವಾಗಿದೆ” ಎಂದು ಆರೋಪಿಸಿದ್ದಾರೆ.

“ಚುನಾವಣಾ ಮತಗಟ್ಟೆಗಳಲ್ಲಿ ‘ವೆಬ್ ಕಾಸ್ಟಿಂಗ್’ ಮತ್ತು ‘ವಿಡಿಯೋ ರೆಕಾರ್ಡಿಂಗ್’ ಮಾಡುವ ಹೊಣೆ ಚುನಾವಣಾ ಆಯೋಗದಲ್ಲವೇ? ಇದನ್ನು ನಡೆಸಲು ರಾಜಕೀಯ ಪಕ್ಷಕ್ಕೆ ಅನುಮತಿ ಕೊಟ್ಟವರು ಯಾರು?” ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

“ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರೇ ಈ ಪತ್ರ ಬರೆದಿರುವುದನ್ನು ನೋಡಿದರೆ ಕೇಂದ್ರ ಸರ್ಕಾರವೇ ಈ ಅಕ್ರಮ ಚಟುವಟಿಕೆಯಲ್ಲಿ ಶಾಮೀಲಾಗುರುವುದು ಸ್ಪಷ್ಟವಾಗಿದೆ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ರೈತರ ಹಕ್ಕೊತ್ತಾಯ ಈಡೇರಿಸುವುದಾಗಿ ಘೋಷಣೆ: ಪ್ರಮಾಣ ಪತ್ರಕ್ಕೆ ಸಹಿ ಹಾಕಿದ ಕಾಂಗ್ರೆಸ್ ಮತ್ತು ಜೆಡಿಎಸ್

“ಕೇಂದ್ರ ಚುನಾವಣಾ ಆಯುಕ್ತರು ತಕ್ಷಣ ಮಧ್ಯಪ್ರವೇಶಿಸಿ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ವಿಚಾರಣೆಗೊಳಪಡಿಸಿ ಅವರು ಯಾವುದೇ ಚುನಾವಣಾ ಪ್ರಚಾರದಲ್ಲಿ ಭಾಗವಹಿಸದಂತೆ ನಿಷೇಧಿಸಬೇಕು. ಅವರ ಪಕ್ಷದ ನಾಯಕರು ಮತ್ತು ಅಭ್ಯರ್ಥಿಗಳಿಂದ ಪಡೆದಿರುವ ಮಾಹಿತಿಯನ್ನು ವಶಕ್ಕೆ ಪಡೆಯಬೇಕು” ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಅಲೆಗೆ ಇಲ್ಲ ಬೆಲೆ; ಸೋಲಿನ ಭಯದ ‘ದ್ವೇಷ ಭಾಷಣ’ಕ್ಕೆ ಸಿಗುವುದೇ ಫಲ?

ಲೋಕಸಭಾ ಚುನಾವಣೆ ನಡೆಯುತ್ತಿದೆ. ಮೊದಲ ಎರಡು ಹಂತದ ಮತದಾನ ಮುಗಿದಿವೆ. ಪ್ರಧಾನಿ...

ಲೈಂಗಿಕ ದೌರ್ಜನ್ಯ ಪ್ರಕರಣ | ಎಸ್‌ಐಟಿ ಮುಂದೆ ಹಾಜರಾಗಲು ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ...

ಪ್ರಜ್ವಲ್ ಲೈಂಗಿಕ ಹಗರಣ | ಬಿಜೆಪಿಗೆ ರಾಷ್ಟ್ರೀಯ ಮಟ್ಟದಲ್ಲಿ ಹಾನಿ: ರಮೇಶ್‌ ಬಾಬು

"ಪೆನ್‌ ಡ್ರೈವ್‌ ವಿಚಾರ ಕುಮಾರಸ್ವಾಮಿ ಮತ್ತು ಬಿಜೆಪಿಯ ಎಲ್ಲ ನಾಯಕರಿಗೆ ಮೊದಲೇ...