ಬಂಗಾರಪೇಟೆ ಹಾಲಿ ಶಾಸಕ, ಕಾಂಗ್ರೆಸ್ ಅಭ್ಯರ್ಥಿ ಎಸ್.ಎನ್ ನಾರಾಯಣಸ್ವಾಮಿ ಅವರಿಗೆ ಆದಾಯ ತೆರಿಗೆ (ಐಟಿ) ಇಲಾಖೆ ನೋಟಿಸ್ ನೀಡಿದೆ ಎಂದು ವರದಿಯಾಗಿದೆ.
ಬಂಗಾರಪೇಟೆ ತಾಲೂಕಿನ ರೆಸಾರ್ಟ್ ಒಂದರ ಮೇಲೆ ದಾಳಿ ಪೊಲೀಸರು ದಾಳಿ ನಡೆಸಿದ್ದರು. ಆ ವೇಳೆ, ರೆಸಾರ್ಟ್ನ ವಿಲ್ಲಾದಲ್ಲಿ 4.04 ಕೋಟಿ ರೂ. ಹಣ ಪತ್ತೆಯಾಗಿತ್ತು. ಮತದಾರರಿಗೆ ಹಂಚಲು ಇಟ್ಟಿದ್ದ ಹಣವೆಂದು ಹೇಳಿದ್ದ ಪೊಲೀಸರು, ಶಾಸಕ ನಾರಾಯಣಸ್ವಾಮಿ ಮತ್ತು ಉದ್ಯಮಿ ರಮೇಶ್ ಯಾದವ್ ವಿರುದ್ಧ ಎಫ್ಐಆರ್ ದಾಖಲಿಸಿದ್ದರು.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಐಟಿ ಅಧಿಕಾರಿಗಳು ಶಾಸಕರಿಗೆ ನೋಟಿಸ್ ನೀಡಿದೆ. ಇಂದು (ಮೇ 9) ಮಧ್ಯಾಹ್ನ 3.30ಕ್ಕೆ ಐ.ಟಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ ಎಂದು ತಿಳಿದುಬಂದಿದೆ.