ಕೊಪ್ಪಳ | ಬಿಜೆಪಿಯ ತತ್ವ, ಸಿದ್ಧಾಂತಗಳ ಮಾತು ಕೇಳಿದರೆ ವಾಂತಿ ಬರುತ್ತದೆ: ಜನಾರ್ದನ ರೆಡ್ಡಿ

Date:

ಹಿರಿಯ ನಾಯಕ ಜಗದೀಶ್ ಶೆಟ್ಟರ್ ಮತ್ತು ಲಕ್ಷ್ಮಣ್ ಸವದಿ ಬಿಜೆಪಿಯಿಂದ ಹೊರಬಂದಿದ್ದಾರೆ. ಯಡಿಯೂರಪ್ಪನವರು ಮಗನ ಸಲುವಾಗಿ ಅಲ್ಲಿಯೇ ಉಳಿದುಕೊಂಡಿದ್ದಾರೆ. ಬಿಜೆಪಿಯ ತತ್ವ, ಸಿದ್ಧಾಂತಗಳ ಮಾತು ಕೇಳಿದರೆ ವಾಂತಿ ಬರುತ್ತದೆ ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಜನಾ‌ರ್ದನ ರೆಡ್ಡಿ ಹೇಳಿದ್ದಾರೆ.

ಕೊಪ್ಪಳ ತಾಲೂಕಿನ ಇರಕಲ್‌ಗಡ ಗ್ರಾಮದಲ್ಲಿ ವಿಧಾನಪರಿಷತ್‌ ಮಾಜಿ ಸದಸ್ಯ ಕರಿಯಣ್ಣ ಸಂಗಟಿ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡು ಅವರು ಮಾತನಾಡಿದರು. “ಬಿಜೆಪಿ ಮಾತಿಗಷ್ಟೇ ಸಿದ್ಧಾಂತವೆನ್ನುತ್ತದೆ. ಅಲ್ಲಿ ಯಾವ ತತ್ವವೂ ಇಲ್ಲ, ಸಿದ್ಧಾಂತವೂ ಇಲ್ಲ” ಎಂದು ಅಣಕಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕೋಲಾರ | ಹಸು ಹೊಟ್ಟೆಯಿಂದ 15 ಕೆಜಿ ಪ್ಲಾಸ್ಟಿಕ್‌ ಹೊರತೆಗೆದ ವೈದ್ಯರು!

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಈ ಹಿಂದೆ ಇಕ್ಬಾಲ್ ಅನ್ಸಾರಿಯನ್ನು ಸೋಲಿಸಲು ಬಿಜೆಪಿ ಅಭ್ಯರ್ಥಿ ಪರಣ್ಣ ಮುನವಳ್ಳಿ ಅವರನ್ನು ಬೆಂಬಲಿಸಿದ್ದೆ. ಈಗ ಗಂಗಾವತಿಯಿಂದ ಅವರಿಬ್ಬರ ಎದುರು ಫುಟ್‌ಬಾಲ್‌ ಆಡಲು ಅವಕಾಶ ಸಿಕ್ಕಿದೆ. 12 ‌ವರ್ಷಗಳ ಹಿಂದೆ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ರಚಿಸಲು ನಾನು ಪ್ರಮುಖ ಪಾತ್ರ ವಹಿಸಿದ್ದೆ. ಈಗ ಬಿಜೆಪಿಯಲ್ಲಿ ಇರುವವರು ತಂತ್ರ, ಕುತಂತ್ರ ಮಾಡಿ ತಮ್ಮ ಭವಿಷ್ಯ ರೂಪಿಸಿಕೊಳ್ಳುತ್ತಾರೆ. ಪಕ್ಷ ನಿಷ್ಠರನ್ನು ಹೊರ ದಬ್ಬುತ್ತಾರೆ” ಎಂದು ಆರೋಪಿಸಿದರು.

ಪಕ್ಷದ ವಕ್ತಾರ ಸಂಗಮೇಶ ಬಾದವಾಡಗಿ, ತಾಲೂಕು ಘಟಕದ ಅಧ್ಯಕ್ಷ ಮಲ್ಲೇಶಪ್ಪ ಗುಮಗೇರಿ, ಮಹಾಂತೇಶ ಸಂಗಟಿ, ಅಮರೇಶ ಹೊಸಮನಿ, ಗಂಗಾಧರಯ್ಯಸ್ವಾಮಿ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಹಾಡಹಗಲೇ ಪಾರ್ಕ್‌ನಲ್ಲಿ ಕುಳಿತಿದ್ದ ಇಬ್ಬರ ಬರ್ಬರ ಹತ್ಯೆ

ರಾಜ್ಯ ರಾಜಧಾನಿ ಬೆಂಗಳೂರಿನ ಸಾರಕ್ಕಿ ಮಾರ್ಕೆಟ್ ಬಳಿಯ ಪಾರ್ಕ್‌ನಲ್ಲಿ ಕುಳಿತಿದ್ದ ಇಬ್ಬರನ್ನು...

ಹುಬ್ಬಳ್ಳಿ | ಬಿವಿಬಿ ಕಾಲೇಜ್ ಕ್ಯಾಂಪಸ್‌ನಲ್ಲೇ ವಿದ್ಯಾರ್ಥಿನಿಗೆ ಚಾಕು ಇರಿದು ಕೊಲೆ

ಹುಬ್ಬಳ್ಳಿಯ ವಿದ್ಯಾನಗರದ ಬಿವಿಬಿ ಕ್ಯಾಂಪಸ್‌ನೊಳಗೆ ನುಗ್ಗಿ ವಿದ್ಯಾರ್ಥಿನಿಯೋರ್ವಳಿಗೆ ಯುವಕನೋರ್ವ ಮನಬಂದಂತೆ ಚಾಕುವಿನಿಂದ...

ದಾವಣಗೆರೆ | ಯುಪಿಎಸ್‌ಸಿ ಪರೀಕ್ಷೆಯಲ್ಲಿ ಸೌಭಾಗ್ಯ ಬೀಳಗಿಮಠ 101ನೇ ರ್‍ಯಾಂಕ್‌; ಜಿಲ್ಲಾಧಿಕಾರಿಯಿಂದ ಸನ್ಮಾನ

ದ್ವಿತೀಯ ಪಿಯುಸಿ ವರೆಗೆ ದಾವಣಗೆರೆಯಲ್ಲಿ ವ್ಯಾಸಂಗ ಮಾಡಿ ಬಿಎಸ್ಸಿ ಕೃಷಿಯೊಂದಿಗೆ ಯುಪಿಎಸ್‌ಸಿ...