ಕೊಪ್ಪಳ | ಬಿಜೆಪಿಯ ತತ್ವ, ಸಿದ್ಧಾಂತಗಳ ಮಾತು ಕೇಳಿದರೆ ವಾಂತಿ ಬರುತ್ತದೆ: ಜನಾರ್ದನ ರೆಡ್ಡಿ

Date:

Advertisements

ಹಿರಿಯ ನಾಯಕ ಜಗದೀಶ್ ಶೆಟ್ಟರ್ ಮತ್ತು ಲಕ್ಷ್ಮಣ್ ಸವದಿ ಬಿಜೆಪಿಯಿಂದ ಹೊರಬಂದಿದ್ದಾರೆ. ಯಡಿಯೂರಪ್ಪನವರು ಮಗನ ಸಲುವಾಗಿ ಅಲ್ಲಿಯೇ ಉಳಿದುಕೊಂಡಿದ್ದಾರೆ. ಬಿಜೆಪಿಯ ತತ್ವ, ಸಿದ್ಧಾಂತಗಳ ಮಾತು ಕೇಳಿದರೆ ವಾಂತಿ ಬರುತ್ತದೆ ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಜನಾ‌ರ್ದನ ರೆಡ್ಡಿ ಹೇಳಿದ್ದಾರೆ.

ಕೊಪ್ಪಳ ತಾಲೂಕಿನ ಇರಕಲ್‌ಗಡ ಗ್ರಾಮದಲ್ಲಿ ವಿಧಾನಪರಿಷತ್‌ ಮಾಜಿ ಸದಸ್ಯ ಕರಿಯಣ್ಣ ಸಂಗಟಿ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡು ಅವರು ಮಾತನಾಡಿದರು. “ಬಿಜೆಪಿ ಮಾತಿಗಷ್ಟೇ ಸಿದ್ಧಾಂತವೆನ್ನುತ್ತದೆ. ಅಲ್ಲಿ ಯಾವ ತತ್ವವೂ ಇಲ್ಲ, ಸಿದ್ಧಾಂತವೂ ಇಲ್ಲ” ಎಂದು ಅಣಕಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕೋಲಾರ | ಹಸು ಹೊಟ್ಟೆಯಿಂದ 15 ಕೆಜಿ ಪ್ಲಾಸ್ಟಿಕ್‌ ಹೊರತೆಗೆದ ವೈದ್ಯರು!

Advertisements

“ಈ ಹಿಂದೆ ಇಕ್ಬಾಲ್ ಅನ್ಸಾರಿಯನ್ನು ಸೋಲಿಸಲು ಬಿಜೆಪಿ ಅಭ್ಯರ್ಥಿ ಪರಣ್ಣ ಮುನವಳ್ಳಿ ಅವರನ್ನು ಬೆಂಬಲಿಸಿದ್ದೆ. ಈಗ ಗಂಗಾವತಿಯಿಂದ ಅವರಿಬ್ಬರ ಎದುರು ಫುಟ್‌ಬಾಲ್‌ ಆಡಲು ಅವಕಾಶ ಸಿಕ್ಕಿದೆ. 12 ‌ವರ್ಷಗಳ ಹಿಂದೆ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ರಚಿಸಲು ನಾನು ಪ್ರಮುಖ ಪಾತ್ರ ವಹಿಸಿದ್ದೆ. ಈಗ ಬಿಜೆಪಿಯಲ್ಲಿ ಇರುವವರು ತಂತ್ರ, ಕುತಂತ್ರ ಮಾಡಿ ತಮ್ಮ ಭವಿಷ್ಯ ರೂಪಿಸಿಕೊಳ್ಳುತ್ತಾರೆ. ಪಕ್ಷ ನಿಷ್ಠರನ್ನು ಹೊರ ದಬ್ಬುತ್ತಾರೆ” ಎಂದು ಆರೋಪಿಸಿದರು.

ಪಕ್ಷದ ವಕ್ತಾರ ಸಂಗಮೇಶ ಬಾದವಾಡಗಿ, ತಾಲೂಕು ಘಟಕದ ಅಧ್ಯಕ್ಷ ಮಲ್ಲೇಶಪ್ಪ ಗುಮಗೇರಿ, ಮಹಾಂತೇಶ ಸಂಗಟಿ, ಅಮರೇಶ ಹೊಸಮನಿ, ಗಂಗಾಧರಯ್ಯಸ್ವಾಮಿ ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

Download Eedina App Android / iOS

X