ಕೊಪ್ಪಳ | ಗಂಗಾವತಿ ಪ್ರತ್ಯೇಕ ಜಿಲ್ಲೆ ಕೂಗು; ಸರ್ಕಾರಕ್ಕೆ ಹೋರಾಟದ ಎಚ್ಚರಿಕೆ

Date:

Advertisements

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕನ್ನು ಹೊಸ ಜಿಲ್ಲಾ ಕೇಂದ್ರವಾಗಿ ಮಾಡಬೇಕು ಎಂಬಕೂಗು ತಾಲೂಕಿನಲ್ಲಿ ಕೇಳಿಬರುತ್ತಿದೆ. ಕೊಪ್ಪಳ ಜಿಲ್ಲೆಯನ್ನು ವಿಭಜಿಸಿ, ಹೊಸ ಜಿಲ್ಲೆಗೆ ʼಕಿಷ್ಕಿಂದಾʼ ಜಿಲ್ಲೆ ಎಂದು ನಾಮಕರಣ ಮಾಡಬೇಕು ಎನ್ನು ಕೂಗು ಗಂಗಾವತಿಯಲ್ಲಿ ಕೇಳಿ ಬರುತ್ತಿದೆ.

ಈ ಭಾಗದ ಹಾಲಿ, ಮಾಜಿ ಜನಪ್ರತಿನಿಧಿಗಳು, ಹಲವು ಸಂಘಟನೆಯ ಮುಖಂಡರು ಹಾಗೂ ಸಾರ್ವಜನಿಕರು ಸೇರಿ ಸಭೆ ನಡೆಸಿದ್ದು,ಕಾವೇರಿ ಗಲಾಟೆ ನಡುವೆ ಮತ್ತೊಂದು ಹೋರಾಟ ಪ್ರತ್ಯೇಕ ಜಿಲ್ಲೆಯ ಕೂಗು ಜೋರಾಗುವ ಸಾಧ್ಯತೆಗಳಿವೆ. ಇಷ್ಟು ದಿನ ತೆರೆಮರೆಯಲ್ಲಿ ಸಭೆ ನಡೆಸುತ್ತಿದ್ದ ಹೋರಾಟಗಾರರು, ಇದೀಗ ಬಹಿರಂಗವಾಗಿಯೇ ಪೂರ್ವಭಾವಿ ಸಭೆ ನಡೆಸಿದ್ದಾರೆ.

ಗಂಗಾವತಿಯ ಅಮರಜ್ಯೋತಿ ಕಲ್ಯಾಣ ಮಂಟಪದಲ್ಲಿ ಪೂರ್ವಭಾವಿ ಸಭೆ ನಡೆಸಿದ್ದಾರೆ. ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ, ಮಾಜಿ ಶಾಸಕ ಪರಣ್ಣ ಮುನವಳ್ಳಿ, ಬಸವರಾಜ ದಡೆಸೂಗುರು ಸೇರಿ ಹಲವು ರಾಜಕಿಯ ಮುಖಂಡರು, ಹಾಲಿ, ಮಾಜಿ ಜನಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಸಭೆಯಲ್ಲಿ ಕಿಷ್ಕಿಂದಾ ಜಿಲ್ಲಾ ರಚನೆಗೆ ಎಲ್ಲರೂ ಸಹಮತ ಸೂಚಿಸಿದ್ದಾರೆ. ಮುಂದಿನ ಅಧಿವೇಶನದಲ್ಲಿ ಈ ಬಗ್ಗೆ ಚರ್ಚೆ ನಡೆಸಿ, ಕಿಷ್ಕಿಂದಾ ಜಿಲ್ಲೆಯನ್ನಾಗಿ ಘೋಷಣೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಲಿದ್ದಾರೆ.

Advertisements

ಕೊಪ್ಪಳ ಜಿಲ್ಲೆಯ ಗಂಗಾವತಿ ನಗರ, ಜಿಲ್ಲೆಯಲ್ಲಿಯೇ ಅತಿ ಹೆಚ್ಚು ವ್ಯಾಪಾರ ವಹಿವಾಟು ಹೊಂದಿದೆ. ಅಲ್ಲದೆ, ಗಂಗಾವತಿಯ ಆನೆಗೊಂದಿ ಪ್ರವಾಸೋದ್ಯಮಕ್ಕೆ ಹೆಸರುವಾಸಿಯಾಗಿದೆ. ಹನುಮನ ಜನ್ಮ ಸ್ಥಾನ ಅಂಜನಾದ್ರಿ ಸಹ ಗಂಗಾವತಿ ತಾಲೂಕಿನಲ್ಲಿ‌ದೆ ಜಿಲ್ಲಾ ಕೇಂದ್ರದಿಂದ ೫೦ಕಿಲೋ ಮೀಟರ್‌ ದೂರದಲ್ಲಿ ಇದ್ದರೂ ಗಂಗಾವತಿ ಭಾಗದಲ್ಲಿ ಅಭಿವೃದ್ಧಿ ಕುಂಟಿತವಾಗಿದೆ.

ಕಿಷ್ಕಿಂದಾ ಜಿಲ್ಲೆಯಾದ್ರೆ ಗಂಗಾವತಿ ಸೇರಿದಂತೆ ಉಳಿದ ತಾಲೂಕುಗಳು ಅಭಿವೃದ್ಧಿಯಾಗತ್ತದೆ. ಭತ್ತದ ಕಣಜ ಎಂದೆ ಹೆಸರಾಗಿರುವ ಗಂಗಾವತಿ, ಆನೆಗೊಂದಿ ಭಾಗಕ್ಕೆ ಹೆಚ್ಚಿನ ಅನುಧಾನ ಸಿಕ್ಕು ಜಿಲ್ಲೆಯ ಜನರು ಅಭಿವೃದ್ಧಿ ಕಾಣುತ್ತಾರೆ. ಹೀಗಾಗಿ ಕಿಷ್ಕಿಂದಾ ಜಿಲ್ಲೆ ರಚನೆ ಅನಿವಾರ್ಯವಾಗಿದೆ. ಸರ್ಕಾರ ಈ ಬಗ್ಗೆ ಗಮನ ನೀಡಿ ಹೋರಾಟ ಆರಂಭಕ್ಕೂ ಮುನ್ನವೇ ಸರ್ಕಾರ ಕಿಷ್ಕಿಂದಾ ಜಿಲ್ಲೆಯ ಘೋಷಣೆ ಮಾಡಬೇಕು.,

ಆದ್ದರಿಂದ, ಬಳ್ಳಾರಿ ಮತ್ತು ರಾಯಚೂರು ಜಿಲ್ಲೆಯಿಂದ ದೂರವಿರುವ ಸಿಂಧನೂರು, ಕಂಪ್ಲಿ ಹಾಗೂ ಕೊಪ್ಪಳ ಜಿಲ್ಲೆಯ ಕನಕಗಿರಿ, ಕಾರಟಗಿ, ಗಂಗಾವತಿ ತಾಲೂಕುಗಳನ್ನ ಒಟ್ಟಿಗೆ ಸೇರಿಸಿ ಕಿಷ್ಕಿಂದಾ ನೂತ‌ನ ಜಿಲ್ಲೆಯಾಗಿ ಮಾಡಬೇಕು ಎನ್ನುವುದು ಇವರ ಬೇಡಿಕೆ.

ಗಂಗಾವತಿ ಜಿಲ್ಲಾ ಕೇಂದ್ರದ ಎಲ್ಲಾ ಮಾನದಂಡಗಳನ್ನು ಹೊಂದಿದೆ. ಜನಸಂಖ್ಯೆ, ಬೌಗೋಳಿಕ ವಿಸ್ತೀರ್ಣ, ರಸ್ತೆ, ರೈಲು ಮಾರ್ಗಗಳು, ಕೈಗಾರಿಕೆ, ವ್ಯಾಪಾರ ವಹಿವಾಟು ಎಲ್ಲ ಅರ್ಹತೆಯೂ ಗಂಗಾವತಿಗೆ ಇದ್ದಾಗಲೂ ಸರ್ಕಾರ ಜಿಲ್ಲಾ ರಚನೆ ಮಾಡಲು ವಿಳಂಭ ಮಾಡಬಾರದು, ಕೂಡಲೇ ಜಿಲ್ಲೆಯಾಗಿ ರಚನೆ ಮಾಡಬೇಕು ಎನ್ನುವುದು ಇವರುಗಳ ಆಗ್ರಹ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X