ಕಡೇ ಕ್ಷಣದ ಹೈಡ್ರಾಮ: ಕೊತ್ತೂರು ಮಂಜು ಒತ್ತಡಕ್ಕೆ ಮುಳುಬಾಗಿಲು ಅಭ್ಯರ್ಥಿಯನ್ನೇ ಬದಲಿಸಿದ ಕಾಂಗ್ರೆಸ್

Date:

Advertisements
  • ಮುಳುಬಾಗಿಲು ಕ್ಷೇತ್ರದ ಅಭ್ಯರ್ಥಿ ಬದಲಾಯಿಸಿದ ಕಾಂಗ್ರೆಸ್
  • ಡಾ. ಮುದ್ದುಗಂಗಾಧರ್ ಬದಲಿಗೆ ಆದಿನಾರಾಯಣಗೆ ಟಿಕೆಟ್

ನಾಮಪತ್ರ ಸಲ್ಲಿಸಲು ಇಂದು(ಏಪ್ರಿಲ್ 20) ಕೊನೆ ದಿನವಾಗಿರುವ ಇಂದೇ ಕಾಂಗ್ರೆಸ್‌ ಟಿಕೆಟ್ ಹಂಚಿಕೆ ವಿಚಾರದಲ್ಲೊಂದು ಹೈಡ್ರಾಮಾ ನಡೆದಿದೆ.

ಕೋಲಾರ ಕಾಂಗ್ರೆಸ್ ಅಭ್ಯರ್ಥಿ ಕೊತ್ತೂರು ಮಂಜು ಒತ್ತಡಕ್ಕೆ ಮಣಿದು ಮುಳುಬಾಗಿಲು ಕ್ಷೇತ್ರದ ಅಭ್ಯರ್ಥಿಯನ್ನೇ ಪಕ್ಷ ಬದಲಾಯಿಸಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಅಭ್ಯರ್ಥಿಯಾಗಿ ಘೋಷಿಸಿದ್ದ ಡಾ. ಬಿ ಸಿ ಮುದ್ದು ಗಂಗಾಧರ್ ಬದಲಿಗೆ ಆದಿನಾರಾಯಣಗೆ ಪಕ್ಷ ಟಿಕೆಟ್ ನೀಡಿದೆ.

ತೀವ್ರ ಕಗ್ಗಂಟಾಗಿ ಉಳಿದಿದ್ದ ಮುಳುಬಾಗಿಲು ಕ್ಷೇತ್ರಕ್ಕೆ ಅಳೆದು ತೂಗಿ ನಾಮಪತ್ರ ಸಲ್ಲಿಕೆಗೆ ಒಂದು ದಿನ ಬಾಕಿ ಇರುವಂತೆ (ಬುಧವಾರ ರಾತ್ರಿ) 5ನೇ ಪಟ್ಟಿಯಲ್ಲಿ ಅಭ್ಯರ್ಥಿಯನ್ನು ಘೋಷಣೆ ಮಾಡಿತ್ತು.

Advertisements

ಈ ಸುದ್ದಿ ಓದಿದ್ದೀರಾ?:ಮೈತ್ರಿ ಬಗ್ಗೆ ಮಾತನಾಡುವ ಸಿದ್ದರಾಮಯ್ಯಗೆ ಭಯ ಹುಟ್ಟಿಕೊಂಡಿದೆ : ಸಿಎಂ ಬೊಮ್ಮಾಯಿ

ಆದರೆ ಮುದ್ದುಗಂಗಾಧರ್ ವಿಚಾರದಲ್ಲಿ ಅಪಸ್ವರ ಪ್ರಕಟಿಸಿದ ಕೊತ್ತೂರು ಮಂಜು ತಮ್ಮ ಬೆಂಬಲಿಗ ಆದಿನಾರಾಯಣ್‌ಗೆ ಟಿಕೆಟ್ ನೀಡಲು ಪಕ್ಷದ ವರಿಷ್ಠರ ಮೇಲೆ ಒತ್ತಡ ತಂದರು. ಇದಾಗದಿದ್ದಲ್ಲಿ ಮುಳುಬಾಗಿಲಿನ ಪಕ್ಷ ಸಂಘಟನೆಯಿಂದ ಹಿಂದೆ ಸರಿಯುವುದಾಗಿ ಹೇಳಿದ್ದರಂತೆ.

ಕೊನೆಯ ಕ್ಷಣದಲ್ಲಿ ಬಂದ ಬದಲಾವಣೆ ವಿಚಾರಕ್ಕೆ ಒಪ್ಪಿಗೆ ನೀಡಿದ ಕಾಂಗ್ರೆಸ್ ವರಿಷ್ಠರು ಮುದ್ದು ಗಂಗಾಧರ್ ಮನವೊಲಿಸಿ, ಆದಿನಾರಾಯಣ್‌ಗೆ ಟಿಕೆಟ್ ಅಂತಿಮಗೊಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X