ಅಪ್ಪ ಸಿಎಂ ಕುರ್ಚಿ ಮೇಲೆ ಕೂರುವಂತಾಗಲಿ: ಐಶ್ವರ್ಯ ಡಿಕೆಶಿ

Date:

Advertisements
  • ಅಪ್ಪನನ್ನು ಸಿಎಂ ಕುರ್ಚಿಯಲ್ಲಿ ನೋಡುವ ಆಸೆ ವ್ಯಕ್ತಪಡಿಸಿದ ಡಿಕೆಶಿ ಪುತ್ರಿ
  • ಬಹುಮತ ಪಡೆದು ಕಾಂಗ್ರೆಸ್ ರಾಜ್ಯದ ಆಡಳಿತ ನಡೆಸುವಂತಾಗಲಿ ಎಂದ ಐಶ್ವರ್ಯ

ರಾಜ್ಯ ವಿಧಾನಸಭಾ ಚುನಾವಣಾ ರಣಕಣದ ಜಿದ್ದಾಜಿದ್ದಿನ ಹೋರಾಟಕ್ಕೆ ತೆರೆ ಬಿದ್ದಿದೆ. ನಾಡಿನ ಜನ ಮತ ಚಲಾಯಿಸಿ ತಮ್ಮ ಆಯ್ಕೆಯನ್ನು ಮತಪಟ್ಟಿಗೆಗೆ ಸೇರಿಸಿದ್ದಾರೆ.

ಈ ನಡುವೆ ಬಂದಿರುವ ಚುನಾವಣೋತ್ತರ ಸಮೀಕ್ಷೆಗಳಲ್ಲಿ ಕಾಂಗ್ರೆಸ್ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮುವುದರ ಜೊತೆಗೆ ಅಧಿಕಾರಕ್ಕೇರುವ ಸಾಧ್ಯತೆ ದಟ್ಟವಾಗಿರುವುದು ಕಂಡುಬಂದಿದೆ.

ಈ ಬೆಳವಣಿಗೆ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಯಾರಾಗುತ್ತಾರೆನ್ನುವ ವಿಚಾರ ಚರ್ಚೆ ಮುನ್ನೆಲೆಗೆ ಬಂದಿದೆ.

Advertisements

ಈ ಚರ್ಚೆ ನಿಧಾನಗತಿಯಲ್ಲಿ ಕಾವು ಪಡೆದುಕೊಳ್ಳುತ್ತಿರುವ ಹೊತ್ತಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಪುತ್ರಿ ಐಶ್ವರ್ಯ ಡಿಕೆಶಿ ಹೆಗಡೆ ತಮ್ಮ ತಂದೆ ವಿಚಾರದಲ್ಲೊಂದು ಸಂವೇದನಾತ್ಮಕ ಹೇಳಿಕೆ ನೀಡಿದ್ದಾರೆ.

ನಮ್ಮ ತಂದೆ ಹಾಗೂ ಚಿಕ್ಕಪ್ಪ ಇಬ್ಬರೂ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕಾಗಿ ಹಗಲಿರುಳು ಶ್ರಮಿಸಿದ್ದಾರೆ. ಅವರ ಮುಂದೀಗ ಪಕ್ಷವನ್ನು ಅಧಿಕಾರಕ್ಕೆ ತರುವ ಸವಾಲಿದೆ. ಈ ಸನ್ನಿವೇಶ ನೋಡಿದರೆ ಅವರ ಶ್ರಮಕ್ಕೆ ತಕ್ಕ ಬೆಲೆ ಸಿಗಲಿದೆ. ದೇವರು ಆಶೀರ್ವದಿಸಿದರೆ ಜನರ ಇಚ್ಚೆಯಂತೆ ಅಪ್ಪ ಸಿಎಂ ಕುರ್ಚಿಯಲ್ಲಿ ಕೂರುವಂತಾಗಲಿ. ಹೀಗಾದಲ್ಲಿ ಇನ್ನಷ್ಟು ಅಭಿವೃದ್ದಿ ಕಾರ್ಯವನ್ನು ಅವರು ಮಾಡಲು ಸಹಕಾರಿಯಾಗುತ್ತದೆ ಎಂದು ಹೇಳಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ?:ರಾಜ್ಯದಲ್ಲಿ ಆಪರೇಷನ್ ಕಮಲಕ್ಕೆ ಎದುರಾಗಿ ಆಪರೇಷನ್ ಹಸ್ತ?

ರಾಷ್ಟ್ರೀಯ ಸುದ್ದಿ ವಾಹಿನಿ ಜೊತೆ ಮಾತನಾಡುವ ವೇಳೆ ತಮ್ಮ ಈ ಅಭಿಪ್ರಾಯವನ್ನು ಐಶ್ವರ್ಯ ಶಿವಕುಮಾರ್‌ ಹೆಗಡೆ ಹೇಳಿಕೊಂಡಿದ್ದಾರೆ. ಅವರ ಈ ಹೇಳಿಕೆ ಈಗ ಮಹತ್ವ ಪಡೆದುಕೊಂಡಿದ್ದು, ರಾಜಕೀಯ ವಲಯದೊಳಗೆ ಸಣ್ಣ ಸಂಚಲನ ಮೂಡಿಸಿದೆ.ಡಿಕೆಶಿ

ಆದರೆ ಇದೇ ವಿಚಾರದಲ್ಲಿ ಮತದಾನದ ಹಿಂದಿನ ದಿನ ಮಾತನಾಡಿದ್ದ ಡಿಕೆ ಶಿವಕುಮಾರ್ ಚುನಾವಣಾ ಪ್ರಚಾರದ ವೇಳೆ ತಮ್ಮನ್ನು ಸಿಎಂ ಮಾಡುವಂತೆ ಮತಭಿಕ್ಷೆ ಕೇಳಿದ್ದರು. ಆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡುವ ವೇಳೆ ಸಿಎಂ ಆಯ್ಕೆ ಹೈಕಮಾಂಡ್ ನಿರ್ಧಾರಕ್ಕೆ ಬಿಟ್ಟಿದ್ದು ಎಂದಿದ್ದರು.

ಇಂದು (ಮೇ 11) ಚುನಾವಣಾ ಜವಾಬ್ಧಾರಿ ಕಳೆದ ಬಳಿಕ ವಿಶ್ರಾಂತಿ ಪಡೆದುಕೊಂಡಿದ್ದ ಡಿಕೆ ಸಹೋದರರು ತಮ್ಮ ಹುಟ್ಟೂರು ಕನಕಪುರ ದೊಡ್ಡಾಲನಹಳ್ಳಿಗೆ ತೆರಳಿ ತಾಯಿಯೊಂದಿಗೆ ಕೆಲಕಾಲ ಕಳೆದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X