ಯಾದಗಿರಿ | ಮತದಾನದಿಂದ ವಂಚಿತರಾಗದಂತೆ ಕೂಲಿ ಕಾರ್ಮಿಕರಿಗೂ ವ್ಯವಸ್ಥೆ ಮಾಡಿ

Date:

Advertisements
  • ಭರದಿಂದ ಸಾಗಿದ ಠಾಣಾಗುಂದಿ ಗೇಟ್ ಕೆಳ ಸೇತುವೆ ಕಾಮಗಾರಿ
  • ಸ್ಥಳಕ್ಕೆ ಭೇಟಿ ನೀಡಿ ಮತದಾನ ಜಾಗೃತಿ ಮೂಡಿಸಿದ ಉಮೇಶ ಮುದ್ನಾಳ

ಅವೈಜ್ಞಾನಿಕ ರೈಲ್ವೆ ಕೆಳ ಸೇತುವೆಯಿಂದಾಗಿ ಯಾದಗಿರಿ-ಮುದ್ನಾಳ ಮಾರ್ಗವಾಗಿ ಸಂಚರಿಸಲು ಉಂಟಾಗಿದ್ದ ಸಮಸ್ಯೆ ಸರಿಪಡಿಸಬೇಕೆಂದು ಹೋರಾಟ ನಡೆಸಿದ್ದರ ಹಿನ್ನೆಲೆ 22 ಲಕ್ಷ ರೂ. ಅನುದಾಣ ಮಂಜೂರು ಮಾಡಿದ್ದು, ಕಾಮಗಾರಿ ಪ್ರಗತಿಯಲ್ಲಿದೆ ಎಂದು ಸಾಮಾಜಿಕ ಹೋರಾಟಗಾರ ಉಮೇಶ ಕೆ ಮುದ್ನಾಳ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, “ಯಾದಗಿರಿಯಿಂದ ಮುದ್ನಾಳ ಮಾರ್ಗವಾಗಿ ತೆರಳುವ ರಸ್ತೆಯ ಮಧ್ಯೆ (ಎಲ್‌ ಸಿ 230 ಹಳೆ ಠಾಣಾಗುಂದಿ ಗೇಟ್) ಠಾಣಾಗುಂದಿ ಬಳಿಯ ಚೌಕಿ ತಾಂಡಾದ ರೈಲ್ವೆ ಹಳಿಗಳ ಕೆಳಗೆ ನಿರ್ಮಿಸಲಾದ ಸೇತುವೆ ತೀರ ಅವೈಜ್ಞಾನಿಕವಾಗಿತ್ತು ಎಂದು ಹೋರಾಟ ನಡೆಸಿದ್ದರ ಫಲವಾಗಿ ಇಂದು ಅಧಿಕಾರಿಗಳು ಸ್ಪಂದಿಸಿದ್ದಾರೆ. ಇದು ನಮ್ಮ ಹೋರಾಟಕ್ಕೆ ಸಂದ ಜಯ” ಎಂದಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ ಗುಂತಕಲ್ ವಿಭಾಗೀಯ ನಿಯಂತ್ರಣಾಧಿಕಾರಿ ಡಿ ಎನ್ ಕೃಷ್ಣಪ್ಪ ಮತ್ತು ರಾಯಚೂರು ಕಚೇರಿಯ ಸಹಾಯಕ ವಿಭಾಗಿಯ ಎಂಜಿನಿಯರ್ (ಎಡಿಎನ್) ಸೈಯದ್ ಮಹಮ್ಮದ್‌ದುಲ್ಲಾ, 22 ಲಕ್ಷ ರೂ. ವೆಚ್ಚದ ಕಾಮಗಾರಿ ಮಾಡಿಕೊಡುವುದಾಗಿ ಭರವಸೆ ನೀಡಿದ್ದರು. ಅಲ್ಲದೇ ಕಳಪೆ ಕಾಮಗಾರಿ ಆಗಬಾರದು, ಗುಣಮಟ್ಟದಿಂದ ಮಾಡುವಂತೆ ಸಂಬಂಧಿಸಿದವರಿಗೆ ಸೂಚಿಸಿದರು ಎಂದು ತಿಳಿಸಿದ್ದಾರೆ.

Advertisements
ಯಾದಗಿರಿ

ಮತದಾನ ಕುರಿತು ಜಾಗೃತಿ

ಇದೇ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಕಾರ್ಮಿಕರಿಗೆ ಮತದಾನದ ಕುರಿತು ಜಾಗೃತಿ ಮೂಡಿಸಿದ ಉಮೇಶ, ಪ್ರತಿಯೊಬ್ಬರು ಮತದಾನ ಮಾಡಬೇಕು. ಕೆಲಸ ನಡೆದಿರುವ ಹಿನ್ನೆಲೆ ಮತದಾನ ಬಿಡಬಾರದು ಎಂದು ಸಲಹೆ ನೀಡಿದರು.

ಬೇಸಿಗೆ ಇರುವುದರಿಂದ ಕೃಷಿ ಕಾಯಕ ಇರುವುದಿಲ್ಲ, ಮಕ್ಕಳಿಗೆ ಶಾಲೆ ಇರುವುದಿಲ್ಲ ಹೀಗಾಗಿ ಈ ಭಾಗದ ಕೃಷಿಕರು ಮಹಾನಗರಗಳಿಗೆ ಗುಳೆ ಹೋಗಿರುತ್ತಾರೆ. ಅವರನ್ನು ಚುನಾವಣೆಗೆ ಕರೆಸಲು ರಾಜಕಾರಣಿಗಳು ಹಣ ಕೊಡುವ ವ್ಯವಸ್ಥೆ ಮಾಡುತ್ತಿದ್ದಾರೆ ಎಂದರು.

ಈ ಸುದ್ದಿ ಓದಿದ್ದೀರಾ? ಬೇಲೂರು | ಮೋದಿ ಭಾಷಣ ಏನಿದ್ದರೂ ಕೇಂದ್ರಕ್ಕೆ ಸೀಮಿತ: ಶಾಸಕ ಲಿಂಗೇಶ್

ಆದ್ದರಿಂದ ಚುನಾವಣಾ ಆಯೋಗ ಮತದಾರರನ್ನು ಕರೆ ತರಲು ಹೆಚ್ಚುವರಿ ರೈಲುಗಳ ವ್ಯವಸ್ಥೆ ಮಾಡಬೇಕು, ಇಲ್ಲವೇ ಕೂಲಿ ಕಾರ್ಮಿಕರು ಇರುವ ಸ್ಥಳದಲ್ಲಿಯೇ ಡಿಜಿಟಲ್ ಮತದಾನ ವ್ಯವಸ್ಥೆ ಮಾಡಿ ಅವರು ಮತದಾನದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಸಂಘದ ಪದಾಧಿಕಾರಿಗಳು ಮತ್ತು ಕಾರ್ಮಿಕರು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X