ಕರ್ನಾಟಕದಲ್ಲಿ ನೆಮ್ಮದಿ ಬೇಕು ಎಂದರೆ ಬಿಜೆಪಿ ವಿರುದ್ಧ ಹೋರಾಡಲೇಬೇಕು: ಮಲ್ಲಿಕಾರ್ಜುನ ಖರ್ಗೆ

Date:

  • ಸಂವಿಧಾನ-ಪ್ರಜಾಪ್ರಭುತ್ವ ಉಳಿಯಬೇಕಾದರೆ ಈ ಕೆಟ್ಟ ಸರ್ಕಾರ ತೆಗೆಯಬೇಕು
  • ಎಂ ವೈ ಪಾಟೀಲರು ಸೋತರೆ ನನಗೂ ಮತ್ತು ನನ್ನ ಪಕ್ಷಕ್ಕೂ ಅವಮಾನ

ದೇಶದಲ್ಲಿ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿಯಬೇಕಾದರೆ ಈ ಕೆಟ್ಟ ಸರ್ಕಾರವನ್ನು ತೆಗೆದು ಹಾಕಬೇಕು. ಸುಖ, ಸಮೃದ್ಧಿ ಹಾಗೂ ನೆಮ್ಮದಿ ನಮ್ಮ ರಾಜ್ಯದಲ್ಲಿ ಬರಬೇಕಾದರೆ ಬಿಜೆಪಿ ವಿರುದ್ಧ ಹೋರಾಡಲೇ ಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದರು.

ಅಫಜಲಪುರ ಸಾರ್ವಜನಿಕ ಸಭೆಯಲ್ಲಿ ಶುಕ್ರವಾರ ಮಾತನಾಡಿ, “ಈ ಭ್ರಷ್ಟ 40% ಕಮಿಷನ್‌ ಸರ್ಕಾರವನ್ನು ಕಿತ್ತೊಗೆದು, ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತರಬೇಕು. ಹೀಗಾಗಿ ಈ ಕ್ಷೇತ್ರದಲ್ಲಿ ನೀವೆಲ್ಲರೂ ಕಾಂಗ್ರೆಸ್ ಅಭ್ಯರ್ಥಿ ಎಂ ವೈ ಪಾಟೀಲ್‌ರನ್ನು ಗೆಲ್ಲಿಸಬೇಕು” ಎಂದು ಮನವಿ ಮಾಡಿದರು.

“ಕಳೆದ ಚುನಾವಣೆಯಲ್ಲಿ ಸ್ವಲ್ಪ ವ್ಯತ್ಯಾಸ ಆಗಿದೆ. ಕೆಲ ಜನ ಅಪ್ರಪಚಾರ ಮಾಡಿ, ನನ್ನನ್ನು ಸೋಲಿಸಿದರು. ಆ ಬಗ್ಗೆ ನನಗೇ ಯಾವುದೇ ನೋವಿಲ್ಲ. ಎಂ ವೈ ಪಾಟೀಲರನ್ನು ಅತ್ಯಧಿಕ ಬಹುಮತದಿಂದ ಗೆಲ್ಲಿಸಬೇಕು. ಒಂದು ವೇಳೆ ಅವರನ್ನು ಸೋಲಿಸಿದ್ದಲ್ಲಿ ನನಗೂ ಮತ್ತು ನನ್ನ ಪಕ್ಷಕ್ಕೂ ಅವಮಾನ. ನನ್ನ ಹೆಸರಿನ ಮೇಲೆ ರಾಜಕೀಯ ಮಾಡಕ್ಕೆ ಹೋಗಬೇಡಿ. ನೂರಕ್ಕೂ ನೂರು ಎಂ ವೈ ಪಾಟೀಲರನ್ನು ಗೆಲ್ಲಿಸಿ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈದಿನ.ಕಾಮ್‌ ಸಮೀಕ್ಷೆ-8: ಕಾಂಗ್ರೆಸ್‌ಗೆ ಸಿಗಲಿದೆ ಸ್ಪಷ್ಟ ಬಹುಮತ; 132-140 ಸೀಟುಗಳ ನಿರೀಕ್ಷೆ

“ಈ ಬಿಜೆಪಿ ಸರ್ಕಾರ ಜನ ಕಷ್ಟದಲ್ಲಿದ್ದಾಗ ಬಂದಿಲ್ಲ, ಕೋವಿಡ್‌ ಮಹಾಮಾರಿ ಬಂದಾಗ ಇವರು ನೆರವಿಗೆ ಬಂದಿಲ್ಲ. ಅದೇ ರೀತಿ ಪ್ರವಾಹ ಬಂದಾಗಲೂ ಈ ಸರ್ಕಾರ ನೆರವಿಗೆ ಬರಲಿಲ್ಲ. ರೈತರ ಆದಾಯ ದುಪ್ಪಟ್ಟು ಮಾಡುತ್ತವೆಂದು ಹೇಳಿದ್ರು, ಯುವಕರಿಗೆ ಪ್ರತಿವರ್ಷ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತವೆಂದು ಹೇಳಿದ್ರು, 15 ಲಕ್ಷ ನಿಮ್ಮ ಖಾತೆಗೆ ಹಣ ಹಾಕುತ್ತವೆಂದು ಹೇಳಿ ಜನತೆಗೆ ಸುಳ್ಳು ಹೇಳಿ ಮೋಸ ಮಾಡಿದ್ದಾರೆ” ಎಂದು ಲೇವಡಿ ಮಾಡಿದರು.

“ಮೋದಿ ಸರ್ಕಾರ ಹೇಳೋದು ಒಂದು, ಮಾಡೋದು ಇನ್ನೊಂದು. ಆದರೆ ನಾವು ಈ ಬಾರಿ ಗ್ಯಾರಂಟಿ ಭರವಸೆಗಳನ್ನು ಕೊಡುತ್ತಾ ಇದ್ದೇವೆ. ಕಾಂಗ್ರೆಸ್‌ ಪ್ರಮುಖ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದೇವೆ ಇದರೊಂದಿಗೆ ಎಲ್ಲ ಐದು ಘೋಷಣೆಗಳನ್ನು ಜಾರಿಗೆ ತರುವುದು ನನ್ನ ಗ್ಯಾರಂಟಿ” ಎಂದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಾಮರಾಜನಗರ | ಮತದಾನ ಬಹಿಷ್ಕಾರ; ಮನವೊಲಿಸಲು ಹೋದ ಅಧಿಕಾರಿಗಳ ಮೇಲೆ ಹಲ್ಲೆ

ರಾಜ್ಯ 14 ಕ್ಷೇತ್ರಗಳಲ್ಲಿ ಶಾಂತಿಯುತವಾಗಿ ಮತದಾನ ನಡೆಯುತ್ತಿದ್ದು, ಕೆಲವೆಡೆ ಮತದಾನ ಬಹಿಷ್ಕಾರ...

ಮೋದಿಯವರ ‘ಚಾರ್‌ ಸವ್ ಪಾರ್’ ಘೋಷಣೆ ಹಿಂದಿನ ಉದ್ದೇಶವೇನು? ಅರಿತಿದ್ದಾರೆಯೇ ‘ಒಬಿಸಿ’ಗಳು!

ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನದ ಮೂಲ ರಚನೆಯನ್ನು ಬದಲಾಯಿಸುವುದಿಲ್ಲ. ಮೀಸಲಾತಿಯನ್ನು...

ಭಯಗೊಂಡಿರುವ ಪ್ರಧಾನಿ ವೇದಿಕೆಯಲ್ಲೇ ಕಣ್ಣೀರು ಹಾಕಬಹುದು: ರಾಹುಲ್ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ನಡೆಸಿರುವ ವಾಗ್ದಾಳಿಗೆ ತಿರುಗೇಟು ನೀಡಿರುವ...

ಉಡುಪಿ | ನಾನು ಮತ ಹಾಕಿರುವ ಅಭ್ಯರ್ಥಿ ನೂರಕ್ಕೆ ನೂರರಷ್ಟು ಗೆಲ್ಲುತ್ತಾರೆ: ನಟ ರಕ್ಷಿತ್ ಶೆಟ್ಟಿ

ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ರಾಜಕಾರಣಿಗಳು,...