ಚುನಾವಣೆ 2023 | ದಲಿತ ಸಂಘಟನೆಗಳ ಹಲವು ಮುಖಂಡರು ಕಾಂಗ್ರೆಸ್‌ಗೆ ಸೇರ್ಪಡೆ

Date:

  • ಖರ್ಗೆ ಕುಟುಂಬ ಹತ್ಯೆಗೆ ಸಂಚು; ಸೂಕ್ತ ತನಿಖೆ ನಡೆಸಿ ಕ್ರಮಕ್ಕೆ ಆಗ್ರಹ
  • ದೊಡ್ಡ ನಾಯಕರಿಗೆ ಹೀಗಾದರೆ ಹಳ್ಳಿಗಳಲ್ಲಿನ ದಲಿತರ ಪರಿಸ್ಥಿತಿ ಏನು?

ಕರ್ನಾಟಕ ಸಾಮರಸ್ಯ ಸಮಿತಿ ರಾಜ್ಯಾಧ್ಯಕ್ಷ ಕೃಷ್ಣಪ್ಪ, ಭೀಮ್ ಪ್ರಜಾಸಂಘದ ರಾಜ್ಯಾಧ್ಯಕ್ಷ ವೈಟ್ ಫೀಲ್ಡ್ ಮುರುಗೇಶ್, ಕರ್ನಾಟಕ ಸಮಗ್ರ ಸೈನಿಕ ದಳ ಮಹಿಳಾ ಅಧ್ಯಕ್ಷೆ ಕಮಲಮ್ಮ, ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಸೇರಿದಂತೆ ರಾಜ್ಯದ ಹಲವು ದಲಿತ ಸಂಘಟನೆಗಳ ಮುಖಂಡರು ಶನಿವಾರ ಕಾಂಗ್ರೆಸ್ ಸೇರ್ಪಡೆಯಾದರು.

- Advertisement -

ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷ ಧರ್ಮಸೇನಾ ಅವರು ದಲಿತ ಮುಖಂಡರನ್ನು ಕಾಂಗ್ರೆಸ್‌ ಸ್ವಾಗತಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಬಳಿಕ ಮಾತನಾಡಿದ ಧರ್ಮಸೇನಾ, “ಇಂದು ದಲಿತರೆಲ್ಲರೂ ಒಗ್ಗೂಡುವ ಪರಿಸ್ಥಿತಿ ನಿರ್ಮಾಣವಾಗಿದೆ. ದಲಿತರ ಏಳಿಗೆ, ಅಭಿವೃದ್ಧಿಗೆ ಕಂಟಕ, ಅಪಾಯ ಎದುರಾದ ಸಂದರ್ಭದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಎಐಸಿಸಿ ಅಧ್ಯಕ್ಷರನ್ನಾಗಿ ನೇಮಿಸಿ ದಲಿತರಿಗೆ ಚೈತನ್ಯ ತುಂಬಿದೆ. ಇನ್ನು ಪರಮೇಶ್ವರ್ ಅವರನ್ನು ಪ್ರಣಾಳಿಕೆ ರಚನಾ ಸಮಿತಿ ಅಧ್ಯಕ್ಷರನ್ನಾಗಿ ಮಾಡಿದೆ. ಆ ಮೂಲಕ ದಲಿತರಿಗೆ ಕಾಂಗ್ರೆಸ್‌ನಲ್ಲಿ ಉತ್ತಮ ಸ್ಥಾನಮಾನ ನೀಡಿ ಸಮುದಾಯಕ್ಕೆ ಶಕ್ತಿ ತುಂಬಲಾಗಿದೆ” ಎಂದು ತಿಳಿಸಿದರು.

“ರಾಜ್ಯದಲ್ಲಿ ಅಂಬೇಡ್ಕರ್ ಹೆಸರಿನಲ್ಲಿ ಸುಮಾರು 20 ಸಾವಿರ ಸಂಘಟನೆಗಳಿವೆ. ನಾನು ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷನಾಗಿ ನೇಮಕಗೊಂಡ ನಂತರ ದಲಿತರ ನಡೆ ಕಾಂಗ್ರೆಸ್ ಕಡೆ ಎಂಬ ಕಾರ್ಯಕ್ರಮದ ಮೂಲಕ ಸ್ಥಳೀಯ ಮಟ್ಟದಲ್ಲಿ ಒಬ್ಬರೇ ಆದರೂ ಅವರನ್ನು ನಿರ್ಲಕ್ಷಿಸದೇ ದಲಿತ ಸಮುದಾಯದವರನ್ನು ಕಾಂಗ್ರೆಸ್ ಪಕ್ಷಕ್ಕೆ ಕರೆ ತರಬೇಕು ಎಂದು ನಮ್ಮ ಘಟಕದ ಎಲ್ಲಾ ಪದಾಧಿಕಾರಿಗಳಿಗೆ ಸೂಚನೆ ನೀಡಿದೆ” ಎಂದು ಹೇಳಿದರು.

“ಕಳೆದ ಒಂದು ವರ್ಷದಿಂದ ಇದೇ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇನೆ. ದಲಿತರಿಗಾಗಿ ಕಾಂಗ್ರೆಸ್ ಈಗಾಗಲೇ 10 ವಿಶೇಷ ಕಾರ್ಯಕ್ರಮವನ್ನು ಪ್ರಕಟಿಸಿದೆ. ಇದರ ಹೊರತಾಗಿ ದಲಿತರ ಸಮಸ್ಯೆ ಏನೇ ಇದ್ದರೂ ಅದನ್ನು ಬಗೆಹರಿಸಲು ಕಾಂಗ್ರೆಸ್ ಪ್ರಾಮಾಣಿಕ ಪ್ರಯತ್ನ ಮಾಡಲಿದೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಸೇರುತ್ತಿರುವ ಎಲ್ಲರನ್ನು ಪಕ್ಷಕ್ಕೆ ತುಂಬುಹೃದಯದಿಂದ ಸ್ವಾಗತಿಸುತ್ತೇನೆ” ಎಂದರು.

ಈ ಸುದ್ದಿ ಓದಿದ್ದೀರಾ? ಬಿಜೆಪಿಯಿಂದ ಖರ್ಗೆ ಕುಟುಂಬ ಹತ್ಯೆಗೆ ಸಂಚು, ಮೋದಿ ಮೌನಕ್ಕೆ ಶರಣು : ಸುರ್ಜೇವಾಲ ಗಂಭೀರ ಆರೋಪ

ಖರ್ಗೆ ಹತ್ಯೆಗೆ ಸಂಚು : ಖಂಡನೀಯ

“ನಮ್ಮ ನೆಚ್ಚಿನ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರ ಹತ್ಯೆಗೆ ಸಂಚು ರೂಪಿಸಿರುವ ವಿಚಾರ ಬೆಳಕಿಗೆ ಬಂದಿದ್ದು, ಇನ್ನು ಡಾ. ಜಿ ಪರಮೇಶ್ವರ್ ಅವರ ತಲೆಗೆ ಕಲ್ಲೇಟು ಬಿದ್ದಿದೆ. ಈ ದಾಳಿ ಯಾರಿಂದ ಆಗಿದೆ ಎಂದು ಪತ್ತೆಹಚ್ಚಲು ಸರ್ಕಾರ ವಿಫಲವಾಗಿದೆ. ದೊಡ್ಡ ನಾಯಕರ ಪರಿಸ್ಥಿತಿ ಹೀಗಾದರೆ ಹಳ್ಳಿಗಳಲ್ಲಿರುವ ದಲಿತರ ಪರಿಸ್ಥಿತಿ ಏನು” ಎಂದು ಪ್ರಶ್ನಿಸಿದರು.

“ಖರ್ಗೆ ಅವರ ಹತ್ಯೆಗೆ ಸಂಚು ರೂಪಿಸಿರುವ ವಿಚಾರ ಖಂಡನೀಯ. ಈ ವಿಚಾರದಲ್ಲಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ಚುನಾವಣಾ ಆಯೋಗ ಈ ವಿಚಾರದಲ್ಲಿ ಸೂಕ್ತ ಕ್ರಮಕೈಗೊಂಡು ದಲಿತರ ರಕ್ಷಣೆ ಮಾಡಬೇಕು” ಎಂದು ಆಗ್ರಹಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ ನಿರೂಪಣೆ

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ,...

ಮುಂಬೈ ಗರ್ಬಾ ಉತ್ಸವಕ್ಕೆ ಮುಸ್ಲಿಮರ ಪ್ರವೇಶಕ್ಕೆ ನಿರ್ಬಂಧ: ತಿಲಕ, ಆಧಾರ್ ಕಾರ್ಡ್ ಹಾಗೂ ಕುಟುಂಬ ಸಮೇತ ಆಗಮನ ಕಡ್ಡಾಯ!

ಮುಂಬೈನ ಬೋರಿವಲಿಯಲ್ಲಿ ಆಯೋಜಿಸಲಾಗುತ್ತಿರುವ ಮುಂಬರುವ ನವರಾತ್ರಿ ಗರ್ಬಾ ಮತ್ತು ದಾಂಡಿಯಾ ಉತ್ಸವದಲ್ಲಿ...

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....