ವರುಣಾದಲ್ಲಿ ಸೋಮಣ್ಣಗೆ ಬಿಜೆಪಿ ಯುವಕರ ಕ್ಲಾಸ್‌; ಸಂಧಾನಕ್ಕೆ ನಿಂತ ಪ್ರತಾಪ್‌ ಸಿಂಹಗೂ ತರಾಟೆ

Date:

Advertisements
  • ವರುಣಾದಲ್ಲಿ ಸೋಮಣ್ಣ ವಿರುದ್ಧ ಸಿಡಿದ ಯುವಕರು
  • ಮೂಲಭೂತ ಸೌಕರ್ಯ ಒದಗಿಸಿಕೊಡದ ನಾಯಕನಿಗೆ ತರಾಟೆ

ವರುಣಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಸತಿ ಸಚಿವ ಸೋಮಣ್ಣನವರಿಗೆ ಆರಂಭಿಕ ವಿಘ್ನ ಎದುರಾಗಿದೆ.

ಕ್ಷೇತ್ರದೊಳಗೆ ಪ್ರಚಾರ ಕಾರ್ಯಕ್ಕೆ ತೆರಳಿದ್ದ ಸಚಿವ ಸೋಮಣ್ಣರನ್ನು ಅಡ್ಡಗಟ್ಟಿದ ಸ್ಥಳೀಯ ಬಿಜೆಪಿ ಯುವಕರ ಗುಂಪೊಂದು ಮೂಲಸೌಕರ್ಯದ ಬೇಡಿಕೆ ಇಟ್ಟು ಮುಜುಗರಕ್ಕೀಡು ಮಾಡಿದೆ.

ಎಂದಿನಂತೆ ಇಂದು( ಏಪ್ರಿಲ್ 19ರಂದು) ವಸತಿ ಸಚಿವರು ಹಾಗೂ ಸಂಸದ ಪ್ರತಾಪ್ ಸಿಂಹ ಅವರನ್ನೊಳಗೊಂಡ ತಂಡ ಪ್ರಚಾರ ಕಾರ್ಯಕ್ಕಾಗಿ ತೆರಳಿತ್ತು.

Advertisements

ಈ ವೇಳೆ ವಸತಿ ಮಂತ್ರಿಗಳಿಗೆ ಎದುರಾದ ಯುವಕರ ಗುಂಪೊಂದು ಸಚಿವರಿಗೆ ಸ್ಥಳೀಯ ಅಗತ್ಯತೆಗೆ ಅನುಗುಣವಾಗಿ ಕೆಲ ಪ್ರಶ್ನೆಗಳನ್ನು ಕೇಳಿದೆ.

ವಸತಿ ಸಚಿವರಾಗಿರುವ ನೀವು ಹಿಂದೆ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿದ್ದಿರಿ. ಆಗಿನಿಂದಲೂ ನಿಮಗೆ ನಮ್ಮೂರಿಗೊಂದು ಸಮುದಾಯ ಭವನ ಹಾಗೂ ಕೆಲವರಿಗೆ ಮನೆ ಕಟ್ಟಿಸಿಕೊಡಲು ಕೇಳಿಕೊಂಡಿದ್ದೆವು. ಆಗ ಇದರ ಬಗ್ಗೆ ಏನೂ ಮಾತನಾಡದ ನೀವು ಈಗ ವೋಟು ಕೇಳಲು ಬಂದಿದ್ದೀರಾ ನಿಮಗೆ ನೈತಿಕತೆ ಇದೆಯೇ ಎಂದು ಕೇಳಿದ್ದಾರೆ.

ಯುವಕರ ಮಾತಿನಿಂದ ಸಚಿವರು ಕಸಿವಿಸಿಗೊಂಡ ವೇಳೆ ಮಧ್ಯೆ ಪ್ರವೇಶಿಸಿದ ಸಂಸದ ಪ್ರತಾಪ್ ಸಿಂಹ ಇವೆಲ್ಲದರ ಬಗ್ಗೆ ಮಾತನಾಡೋಣ ಎಂದು ಹೇಳುವ ವೇಳೆ ಮತ್ತೆ ಅವರನ್ನೂ ಪ್ರಶ್ನಿಸಿದ ಹುಡುಗರು ನಮ್ಮ ಸಂಸದರು ಎನಿಸಿಕೊಂಡ ನೀವು ನಮಗೆ ಮಾಡಿಕೊಟ್ಟಿರುವ ಸಾಧನೆಗಳೇನು ಅನ್ನೋದನ್ನ ಹೇಳ್ತಿರಾ ಎಂದು ಕೇಳಿ ಅವರನ್ನೂ ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? :ಚುನಾವಣೆ 2023 | ಬಿಜೆಪಿ ತೊರೆದ ರೌಡಿಶೀಟರ್ ಫೈಟರ್ ರವಿ; ಪಕ್ಷೇತರನಾಗಿ ಸ್ಪರ್ಧೆ

ಹೀಗೆ ಕೆಲ ಕಾಲ ವಾಗ್ವಾದ ನಡೆಸಿದ ಯುವಕರನ್ನು ಕಡೆಗೂ ಸಮಾಧಾನ ಮಾಡಿ ಕಳುಹಿಸುವಲ್ಲಿ ಸಂಸದ ಪ್ರತಾಪ್ ಸಿಂಹ ಯಶಸ್ವಿಯಾಗಿ, ಕ್ಷೇತ್ರದಲ್ಲಾದ ಮೊದಲ ಹಿನ್ನಡೆ ವಿಚಾರವನ್ನು ಮುಚ್ಚಿಟ್ಟುಕೊಂಡು ವಸತಿ ಸಚಿವರು ಪ್ರಚಾರಕಾರ್ಯದಲ್ಲಿ ತೊಡಗಿಸಿಕೊಳ್ಳಲು ಅನುವು ಮಾಡಿಕೊಟ್ಟರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X