ಮೋದಿ ರ್‍ಯಾಲಿ | ₹500 ಕೊಡ್ತೀವಿ ಅಂತ ಕರೆದೊಯ್ದು ₹200 ಕೊಟ್ರು; ಬಿಜೆಪಿ ವಿರುದ್ಧ ಆರೋಪ

Date:

Advertisements

ಬೆಂಗಳೂರು ಬಳಿಯ ದೇವನಹಳ್ಳಿಯಲ್ಲಿ ಶುಕ್ರವಾರ ನಡೆದ ಬಿಜೆಪಿ ರ್‍ಯಾಲಿಯಲ್ಲಿ ಪ್ರಧಾನಿ ಮೋದಿ ಭಾಗವಹಿಸಿದ್ದರು. ಆ ಕಾರ್ಯಕ್ರಮದಲ್ಲಿ ಭಾಗವಹಿಸಿದರೆ 500 ರೂ. ಕೊಡುತ್ತೇವೆಂದು ಕರೆದುಕೊಂಡು ಬಂದು ಕೇವಲ 200 ರೂ. ಕೊಟ್ಟಿದ್ದಾರೆಂದು ಬಿಜೆಪಿ ವಿರುದ್ಧ ರ್‍ಯಾಲಿಯಲ್ಲಿ ಭಾಗವಹಿಸಿದ್ದವರು ಆರೋಪಿಸಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದ ಸುಮಾರು 40 ಕೂಲಿ ಕಾರ್ಮಿಕರು ಬಿಜೆಪಿ ವಿರುದ್ಧ ಈ ಆರೋಪ ಮಾಡಿದ್ದಾರೆ. ಮೋದಿ ಭಾಗವಹಿಸುವ ರ್‍ಯಾಲಿಗೆ ಬನ್ನಿ 500 ರೂ. ಕೊಡುತ್ತೇವೆಂದು ಬಿಜೆಪಿ ಮುಖಂಡರು ಕರೆದೊಯ್ದಿದ್ದರು. ಆದರೆ, ವಾಪಸ್ ಬಂದ ಮೇಲೆ ಕೇವಲ 200 ರೂ. ಕೊಟ್ಟಿದ್ದಾರೆ ಎಂದು ಅವರು ಆರೋಪಿಸಿದ್ದು, ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ನಮ್ಮ ಒಂದು ದಿನದ ಕೂಲಿಯ ಮೊತ್ತ (500 ರೂ.) ಒಡುತ್ತೇವೆಂದು ಅವರು ಹೇಳಿದ್ದರು. ಕಾರ್ಯಕ್ರಮ ಮುಗಿಸಿ ಬಂದ ಬಳಿಕ 100 ರೂ. ಕೊಡಲು ಬಂದರು. ನಾವು ಗಲಾಟೆ ಮಾಡಿದೆವು. ನಂತರ, ತಮಗೆ ಅವಮಾನವಾಗುತ್ತದೆಂದು ಮತ್ತೆ 100 ರೂ. ಸೇರಿಸಿ 200 ರೂ. ನೀಡಿದರು” ಎಂದು ಅವರು ಆರೋಪಿಸಿದ್ದಾರೆ.

ನಮಗೆ ದೊರೆಯಬೇಕಿದ್ದ ಹಣ ದೊರೆತಿಲ್ಲವೆಂದು ಕಾರ್ಮಿಕರು ಪೊಲೀಸರು ದೂರು ನೀಡಲು ಮುಂದಾಗಿದ್ದರು ಎಂದೂ ತಿಳಿದುಬಂದಿದೆ. ಆದರೆ, ಈ ಆರೋಪಕ್ಕೆ ಸಂಬಂಧಿಸಿದಂತೆ ಯಾರೂ ದೂರು ನೀಡಲು ಬಂದಿಲ್ಲವೆಂದು ಶಿಡ್ಲಘಟ್ಟ ಪೊಲೀಸರು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಸರಕಾರ ದೇವದಾಸಿ ಮಹಿಳೆಯರ ಕುಟುಂಬ ಸದಸ್ಯರನ್ನು ಗಣತಿ ಪಟ್ಟಿಗೆ ಸೇರಿಸುವ ಕ್ರಮ ಸ್ವಾಗತ

"ಸರಕಾರ ಈಚೆಗೆ ದೌರ್ಜನ್ಯದ ದೇವದಾಸಿ ಪದ್ಧತಿಗೆ ಪರಿಣಾಮಕಾರಿ ಕ್ರಮ ಕೈಗೊಳ್ಳಲು ದೇವದಾಸಿ...

ಗದಗ | ತಹಸೀಲ್ದಾರ ಕಚೇರಿಗಳಲ್ಲಿ ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ

"ಜಿಲ್ಲೆಯ ಎಲ್ಲಾ ತಾಲೂಕ ತಹಶೀಲ್ದಾರ್ ಕಚೇರಿ ಹಾಗೂ ಹೋಬಳಿಗಳಲ್ಲಿ ವೃಧ್ಯಾಪ್ಯ ವೇತನ,...

ಜನಮನ ಗೆದ್ದ ತುಮಕೂರು ದಸರಾ ಉತ್ಸವ : ಡಾ. ಜಿ.ಪರಮೇಶ್ವರ

 ತುಮಕೂರು ದಸರಾ ಉತ್ಸವವು ನಾಡಿನಾದ್ಯಂತ ಜನರ ಮನಸ್ಸನ್ನು ಗೆಲ್ಲುವ ಮೂಲಕ ಐತಿಹಾಸಿಕ...

Download Eedina App Android / iOS

X