ಮೋದಿ ಬರುತ್ತಾರೆ ಬೀದಿ ನಾಯಿ ಹಿಡಿಯಿರಿ: ಬಿಬಿಎಂಪಿಗೆ ಪೊಲೀಸರ ಪತ್ರ

Date:

Advertisements
  • ಮೇ 6ರಂದು ಪ್ರಧಾನಿ ಮೋದಿ ರೋಡ್ ಶೋ
  • ಕೋಣನಕುಂಟೆ ಪೊಲೀಸರಿಂದ ಬಿಬಿಎಂಪಿಗೆ ಪತ್ರ

ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿ ರೋಡ್ ಶೋ ನಡೆಸಲಿದ್ದು, ಕೋಣನಕುಂಟೆ ಪೊಲೀಸರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಆಯುಕ್ತರಿಗೆ ಸ್ವಾರಸ್ಯಕರ ಪತ್ರವೊಂದನ್ನು ಬರೆದಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಮೇ 6 ಮತ್ತು 7ರಂದು ಬೆಂಗಳೂರಿನಲ್ಲಿ ರೋಡ್ ಶೋ ನಡೆಸಲಿದ್ದಾರೆ. ಮೋದಿ ಭದ್ರತೆಗೆ ಸಂಬಂಧಿಸಿದಂತೆ ಕೋಣನಕುಂಟೆ ಪೊಲೀಸರು ಬಿಬಿಎಂಪಿಗೆ ಪತ್ರ ಬರೆದಿದ್ದಾರೆ.

ಪ್ರಧಾನಿ ಮೋದಿ ಮೇ 6ರಂದು ಕೋಣನಕುಂಟೆ ಪೊಲೀಸ್‌ ಠಾಣಾ ಸರಹದ್ದಿನ ಲಯೋಲ ಶಾಲಾ ಆವರಣದಲ್ಲಿರುವ ಹೆಲಿಪ್ಯಾಡ್‌ಗೆ ಆಗಮಿಸಲಿದ್ದಾರೆ. ಆದ್ದರಿಂದ ಮೋದಿ ಸಂಚರಿಸುವ ಮಾರ್ಗದಲ್ಲಿ ಎದುರಾಗುವ ನಾಯಿ, ಕೋತಿ, ಜೇನುಗೂಡು ಹಾಗೂ ಹಾವು ಹಿಡಿಯುವಂತೆ ಪೊಲೀಸರು ಬಿಬಿಎಂಪಿ ಆಯುಕ್ತರಿಗೆ ಮನವಿ ಮಾಡಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಭಾನುವಾರ ಬೆಂಗಳೂರಲ್ಲಿ ದಿಗ್ಗಜರ ರೋಡ್ ಶೋ: ರಾಹುಲ್ – ಮೋದಿ ಮುಖಾಮುಖಿ

ಈ ಕುರಿತು ಪತ್ರ ಬರೆದಿರುವ ಪೊಲೀಸರು, “ಪ್ರಧಾನಿ ನರೇಂದ್ರ ಮೋದಿ ಅವರು ಕೋಣನಕುಂಟೆ ಪೊಲೀಸ್ ಠಾಣಾ ಸರಹದ್ದಿನ ಲಯೋಲ ಶಾಲಾ ಆವರಣದ ಹೆಲಿಪ್ಯಾಡ್‌ಗೆ ಆಗಮಿಸಲಿದ್ದು, ಸ್ಥಳದಲ್ಲಿ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಿಕೊಂಡಿದ್ದೇವೆ” ಎಂದು ಪತ್ರದಲ್ಲಿ ತಿಳಿಸಿದ್ದಾರೆ.

“ಈ ಸಂದರ್ಭದಲ್ಲಿ ಗಣ್ಯರು ಸಂಚರಿಸುವ ಮಾರ್ಗದಲ್ಲಿ ಯಾವುದೇ ತೊದರೆಯಾಗದಂತೆ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಸದರಿ ಲಯೋಲ ಶಾಲಾ ಆವರಣದಲ್ಲಿರುವ ಹೆಲಿಪ್ಯಾಡ್‌ಗಳ ಸುತ್ತ ಮುತ್ತಲೂ ಹಾಗೂ ಗಣ್ಯರು ಸಂಚರಿಸುವ ಮಾರ್ಗದಲ್ಲಿ ಅಡ್ಡಾಡುವ ನಾಯಿಗಳನ್ನು, ಹಾವು, ಜೇನು ಹಿಡಿದು ಸ೦ರಕ್ಷಿಸುವಂತೆ ಸಂಬಂಧಪಟ್ಟವರಿಗೆ ಸೂಚಿಸಬೇಕು” ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.WhatsApp Image 2023 05 04 at 2.59.02 PM

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X