ಈ ಬಾರಿಯ ಚುನಾವಣೆಗೆ ಹೊಸ ಇವಿಎಂ, ವಿವಿಪ್ಯಾಟ್ ಬಳಕೆ : ಮನೋಜ್ ಕುಮಾರ್​ ಮೀನಾ

Date:

  • ಈ ಬಾರಿ ಬ್ಯಾಲೆಟ್ ಪೇಪರ್‌ನಲ್ಲಿ ಅಭ್ಯರ್ಥಿಗಳ ಭಾವಚಿತ್ರ; ಮನೆಯಿಂದಲೇ ಗೌಪ್ಯ ಮತದಾನಕ್ಕೆ ಅವಕಾಶ
  • ನೀತಿ ಸಂಹಿತೆ ಜಾರಿ; ರಾಜಕಾರಣಿಗಳು ಸರ್ಕಾರಿ ಕಾರ್ಯಕ್ರಮ ಆಯೋಜಿಸುವಂತಿಲ್ಲ: ಮನೋಜ್ ಕುಮಾರ್​ ಮೀನಾ

ಇಂದಿನಿಂದಲೇ ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯಾಗಲಿದೆ. ಮೇ 10ರಂದು 224 ಕ್ಷೇತ್ರಗಳಿಗೂ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಏಪ್ರಿಲ್​ 11ರವರೆಗೆ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್​ ಮೀನಾ ತಿಳಿಸಿದರು.

- Advertisement -

ಕೇಂದ್ರ ಚುನಾವಣಾ ಆಯೋಗದಿಂದ ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾದ ಬೆನ್ನಲ್ಲೆ ರಾಜ್ಯ ಮುಖ್ಯಚುನಾವಣಾಧಿಕಾರಿ ಬೆಂಗಳೂರಿನಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಈ ಕ್ಷಣದಿಂದಲೇ ರಾಜಕಾರಣಿಗಳು ಯಾವುದೇ ಸರ್ಕಾರಿ ಕಾರ್ಯಕ್ರಮ ಆಯೋಜಿಸುವಂತಿಲ್ಲ. ಯಾವುದೇ ಅಧಿಕಾರಿಗಳ ಸಭೆ ನಡೆಸಲು ರಾಜಕಾರಣಿಗಳಿಗೆ ಅವಕಾಶವಿಲ್ಲ. ಯಾವುದೇ ಕಡತಕ್ಕೂ ಅವರು ಸಹಿ ಹಾಕುವಂತಿಲ್ಲ. ಹಾಗೆಯೇ ಹೊಸ ಕಾರ್ಯಕ್ರಮ ಅನುಷ್ಠಾನ ಮಾಡುವಂತಿಲ್ಲ” ಎಂದರು.

“ರಾಜ್ಯದಲ್ಲಿ ಒಟ್ಟು 58,282 ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತಿದೆ. ಕೋವಿಡ್ ಬಾಧಿತರಿಗೆ ಪ್ರತ್ಯೇಕ ಮತಗಟ್ಟೆ ಇರಲಿದೆ. ಹಾಗೆಯೇ 80 ವರ್ಷ ಮೇಲ್ಪಟ್ಟವರು, ವಿಶೇಷ ಚೇತನರಿಗೆ ಮನೆಯಿಂದಲೇ ಗೌಪ್ಯ ಮತದಾನ ಮಾಡಲು ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಮೇ 10 ಬರೀ ಮತದಾನ ದಿನವಲ್ಲ; ಭ್ರಷ್ಟಾಚಾರ ನಿರ್ಮೂಲನಾ ದಿನ: ಡಿ ಕೆ ಶಿವಕುಮಾರ್‌

“ಮನೆಯಿಂದ ಮತ ಹಾಕುವವರಿಗೆ ಫಾರಂ 12ರಡಿ ಅನುಮತಿ ನೀಡಲಾಗಿದೆ. ವಿಕಲಚೇತನರು ಇರುವ ಮನೆಗೆ ಚುನಾವಣಾ ಸಿಬ್ಬಂದಿಯೇ ತೆರಳಲಿದ್ದಾರೆ. ಆ ಸಿಬ್ಬಂದಿ ಜತೆ ಪಕ್ಷಗಳ ಪ್ರತಿನಿಧಿಗಳು ಕೂಡ ಇರುತ್ತಾರೆ. ಆದರೆ, ಮತದಾನದ ಗೌಪ್ಯತೆ ಕಾಪಾಡಲಾಗುತ್ತೆ” ಎಂದು ವಿವರಿಸಿದರು.

ಹೊಸ ಇವಿಎಂ, ವಿವಿಪ್ಯಾಟ್

“ಹೈದ್ರಾಬಾದ್ ನಿಂದ ಹೊಸ ಇವಿಎಂ, ವಿವಿಪ್ಯಾಟ್ ಬಂದಿವೆ. ಯಾವ ಚುನಾವಣೆಯಲ್ಲೂ ಇವನ್ನು ಬಳಸಿಲ್ಲ. ಮೊದಲ ಬಾರಿಗೆ ಕರ್ನಾಟಕದಲ್ಲಿ ಇವುಗಳನ್ನು ಬಳಸಲಾಗುತ್ತಿದೆ. ಈ ಬಾರಿ ಇವಿಎಂ ಬ್ಯಾಲೆಟ್ ಪೇಪರ್‌ನಲ್ಲಿ ಅಭ್ಯರ್ಥಿಗಳ ಭಾವಚಿತ್ರವಿರಲಿದೆ. ನೋಟಾ ಆಯ್ಕೆಯ ವ್ಯವಸ್ಥೆ ಎಂದಿನಂತೆ ಇರಲಿದೆ” ಎಂದು ತಿಳಿಸಿದರು.

“ಮತಗಟ್ಟೆಗಳಲ್ಲಿ ಎಲ್ಲ ಸೌಲಭ್ಯ ಕಲ್ಪಿಸಲಾಗಿದೆ. 3 ಲಕ್ಷ ಸಿಬ್ಬಂದಿ ಚುನಾವಣೆ ಕಾರ್ಯ ನಿರ್ವಹಿಸಲಿದ್ದಾರೆ. ಅವರೆಲ್ಲರಿಗೂ ಈಗಾಗಲೇ ತರಬೇತಿ ಕೊಡಲಾಗಿದೆ. 89 ಸಾವಿರ ವಿವಿ ಪ್ಯಾಟ್ ಗಳು ಬಳಕೆಯಾಗುತ್ತಿವೆ. 1 ಲಕ್ಷ 834 ಸೆಕ್ಸ್ ವರ್ಕರ್ಸ್ ರಾಜ್ಯದಲ್ಲಿದ್ದಾರೆ. ಅವರನ್ನು ಮತ ಪಟ್ಟಿಗೆ ಸೇರಿಸಿದ್ದೇವೆ. ಬೆಂಗಳೂರು ದಕ್ಷಿಣ ಕ್ಷೇತ್ರ ದೊಡ್ಡ ಕ್ಷೇತ್ರ. 6 ಲಕ್ಷ 91 ಸಾವಿರ ಮತದಾರರು ಅಲ್ಲಿದ್ದಾರೆ. ಶೃಂಗೇರಿ ಅತಿ ಕಡಿಮೆ ಮತದಾರರಿರುವ ಕ್ಷೇತ್ರ. ಬೆಳಗಾವಿಯಲ್ಲಿ ಅತಿ ಹೆಚ್ಚು ಮತಗಟ್ಟೆಗಳಿವೆ. ಈ ಬಾರಿ ರಾಜ್ಯ ಮತದಾರರ ಪಟ್ಟಿಗೆ 3,021 ಅನಿವಾಸಿ ಭಾರತೀಯರ ಹೆಸರು ಸೇರ್ಪಡೆ ಮಾಡಲಾಗಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...

ಉಡುಪಿ | ಮಲ್ಪೆ–ತೀರ್ಥಹಳ್ಳಿ ಹೆದ್ದಾರಿ ಕಾಮಗಾರಿ ಅಂತಿಮ ಹಂತ; ಬಾಕಿ ಭೂಸ್ವಾಧೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ರಾಷ್ಟ್ರೀಯ ಹೆದ್ದಾರಿ 169ಎರ ಮಲ್ಪೆ–ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು...